belagavi news :
ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಜುಲೈ 20 ರಿಂದ ಜುಲೈ 25 ರವರೆಗೆ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ. ದೆಹಲಿ ಪೊಲೀಸರು ಎಐ (AI) ಆಧಾರಿತ ಫೇಶಿಯಲ್ ರೆಕಗ್ನಿಷನ್ ಸಿಸ್ಟಂ ಬಳಸಿ ನಡೆಸಿದ ಪರಿಶೀಲನೆಯಲ್ಲಿ 2,823 ಅಪರಾಧ ಹಿನ್ನೆಲೆಯುಳ್ಳ ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.
ಪೊಲೀಸರ ಪ್ರಕಾರ, ಗುರುತಿಸಲಾದ 2823ಮಂದಿರದಲ್ಲಿ 989 ಮಂದಿ ಕೊಲೆ, ಅತ್ಯಾಚಾರ,ದರೋಡೆ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಅಥವಾ ಅಪರಾಧ ಹಿನ್ನೆಲೆ ಹೊಂದಿರುವವರು ಎಂದು ತಿಳಿದುಬಂದಿದೆ. ಪ್ರತಿಭಟನೆಯ ವೇಳೆ ಸಾರ್ವಜನಿಕ ಭದ್ರತೆ ಮತ್ತು ಕಾನೂನು ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅತ್ಯಾಧುನಿಕ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಈ ಬಹಿರಂಗಪಡಿಸುವಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸ ವಾಗಿದ್ದು, ನೀಟ್ ಪರೀಕ್ಷೆ ಅಕ್ರಮ, ದೆಹಲಿ ಜಂತರ್ ಮಂತರ್ ಪ್ರತಿಭಟನೆ, ಫೇಶಿಯಲ್ ರೆಕಗ್ನಿಷನ್ ಸಿಸ್ಟಂ, ದೆಹಲಿ ಪೊಲೀಸ್ ಕಾರ್ಯಾಚರಣೆ ಮತ್ತು ಕ್ರಿಮಿನಲ್ ಹಿನ್ನೆಲೆಯ ಪ್ರತಿಭಟನಾಕಾರರು ಎಂಬ ವಿಷಯವನ್ನು ವ್ಯಾಪಕ ಚರ್ಚೆಗೆ ಕಾರಣವಾಗಿವೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರತಿಭಟನೆಗಳಲ್ಲಿ ಭದ್ರತಾ ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಗಳು ವ್ಯಕ್ತವಾಗಿವೆ.
ನೀಟ್ ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಡೆಸಿದ ಫೇಶಿಯಲ್ ರೆಕಗ್ನಿಷನ್ ಸಿಸ್ಟಂ ಪರಿಶೀಲನೆಯಲ್ಲಿ ಪತ್ತೆಯಾದ 2,823 ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಬಗ್ಗೆ ಮತ್ತಷ್ಟು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಪೊಲೀಸರ ಪ್ರಕಾರ, ಗುರುತಿಸಲಾದ ಆರೋಪಿಗಳಿಗೆ 101 ಮಂದಿ ಕೊಲೆ ಪ್ರಕರಣದಲ್ಲಿ, 61 ಮಂದಿ ಅತ್ಯಾಚಾರ ಪ್ರಕರಣದಲ್ಲಿ, 284 ಮಂದಿ ದರೋಡೆ ಪ್ರಕರಣಗಳಲ್ಲಿ, 629 ಮಂದಿ ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಪ್ರಕರಣಗಳಲ್ಲಿ ಹಾಗೂ 67 ಮಂದಿ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಆರೋಪಿಗಳಾಗಿದ್ದಾರೆ. ಈ ಅಂಕಿ ಅಂಶಗಳು ಪ್ರತಿಭಟನೆಯ ಭದ್ರತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿವೆ.
ಈ ಕುರಿತು ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸ್ ಅಧಿಕಾರಿಗಳು, ಎಐ ಆಧಾರಿತ ಫೇಶಿಯಲ್ ರೆಕಗ್ನಿಷನ್ ಸಿಸ್ಟಂ ತಂತ್ರಜ್ಞಾನವನ್ನು ಸಾಮಾನ್ಯ ವಿದ್ಯಾರ್ಥಿಗಳು ಅಥವಾ ಶಾಂತಿಯುತ ಪ್ರತಿಭಟನಾಕಾರರನ್ನು ಗುರಿಯಾಗಿಸಲು ಬಳಕಿಲ್ಲ ಎಂದು ಹೇಳಿದ್ದಾರೆ. ಪ್ರತಿಭಟನೆಗಳಲ್ಲಿ ನುಸುಳಿ ಗಲಭೆ ಸೃಷ್ಟಿಸುವ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಗುರಿಯಾಗಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮಾತ್ರ ಈ ತಂತ್ರಜ್ಞಾನವನ್ನು ಬಳಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನೀಟ್ ಯುಜಿ ಪರೀಕ್ಷಾ ಅಕ್ರಮ ಹಾಗೂ ಸಿಬಿಎಸ್ಇ ಸಂಬಂಧಿತ ಸಮಸ್ಯೆಗಳನ್ನು ವಿರೋಧಿಸಿ 'ಕಾಕ್ರೋಜ್ ಜನತಾ ಪಾರ್ಟಿ ' ನೇತೃತ್ವದಲ್ಲಿ ಜೂನ್ ನಿಂದ ಪ್ರತಿಭಟನೆಗಳು ನಡೆಯುತ್ತಿದ್ದವು. ಜುಲೈ 20 ರಂದು ಪ್ರತಿಭಟನೆ ಉದ್ವಿಗ್ನಗೊಂಡು ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿತು. ಬಳಿಕ ಉಂಟಾದ ರಾಜಕೀಯ ಬೆಳವಣಿಗಳ ನಡುವೆ ಜುಲೈ 25ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಎಂಬ ಮಾಹಿತಿ ವರದಿಯಾಗಿದೆ.
ನೀಟ್ ಪ್ರತಿಭಟನೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ಮೇಲೆ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಬಿಜೆಪಿ ನಾಯಕರಿಗೆ ಸರಕಾರ ಭರವಸೆ ನೀಡಿದೆ. ಬಂಧಿತ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರಿಗೆ ಉಚಿತ ಕಾನೂನು ನೆರವು ನೀಡಲು ಹಿರಿಯ ವಕೀಲ ಹಾಗೂ ಸಂಸದ ಕಪಿಲ್ ಸಿಬಲ್ ಅವರು ಒಂದು ಕೋಟಿ ರೂ ಕಾನೂನು ನೆರವು ನಿಧಿ ಘೋಷಿಸಿದ್ದಾರೆ.
Also Read: