<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ವಯನಾಡಿನಲ್ಲಿ ಸುರಂಗ ಕಾಮಗಾರಿ ವೇಳೆ ಅವಘಡ: ಹೇಗೆ ಸಂಭವಿಸಿತು?

ವಯನಾಡಿನಲ್ಲಿ ಸುರಂಗ ಕಾಮಗಾರಿ ವೇಳೆ ಅವಘಡ: ಹೇಗೆ ಸಂಭವಿಸಿತು?
Summary: A tragedy occurred at a tunnel construction site in Wayanad, Kerala. Here is complete information on what caused the accident, how the incident happened, the condition of the workers and the steps taken by the authorities.

Belagavi News :

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸಂಭವಿಸಿದ ದುರ್ಘಟನೆ ಮಾನವ ನಿರ್ಮಿತ ವಿಪತ್ತು ಎಂಬ ಆರೋಪ ಕೇಳಿಬಂದಿದೆ. ಮಳೆಗಾಲದಲ್ಲಿ ಭೂಕುಸಿತಗಳು ಸಾಮಾನ್ಯವಾಗಿದ್ದರು, ಕಲ್ಲಾಡಿ ಗ್ರಾಮದ ಸಮೀಪ ನಡೆದ ಈ ಘಟನೆಗೆ ಅವೈಜ್ಞಾನಿಕ ಕಾಮಗಾರಿ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ವರದಿಗಳ ಪ್ರಕಾರ, ಸುರಂಗ ನಿರ್ಮಾಣಕ್ಕಾಗಿ ಅಗೆದ ಮಣ್ಣನ್ನು ವೈಜ್ಞಾನಿಕ ವಿಧಾನಗಳನ್ನು ಪಾಲಿಸದೆ ಒಂದು ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ನಿರಂತರ ಮಳೆಯಿಂದ ಈ ಮಣ್ಣು ಬೆಟ್ಟದ ಇಳಿಜಾರನೊಂದಿಗೆ ಸೇರಿ ಭೂಕುಸಿತ ಉಂಟಾಗಿದ್ದು, ಪರಿಣಾಮವಾಗಿ ದೊಡ್ಡ ಪ್ರಮಾಣದ ಅನಾಹುತ ಸಂಭವಿಸಿದೆ.

ಗಮನಾರ್ಹ ಸಂಗತಿಯೆಂದರೆ, ಇದೇ ಪ್ರದೇಶದಲ್ಲಿ 2018ರಲ್ಲಿಯೂ ಇದೇ ರೀತಿಯ ಘಟನೆಗಳು ನಡೆದಿದ್ದವು. ಆದರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ.

ಕೇರಳದ ವಯನಾಡಿನ ಕಲ್ಲಾಡಿ ಸಮೀಪ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸಂಭವಿಸಿದ ದುರ್ಘಟನೆಗೆ ಅವೈಜ್ಞಾನಿಕವಾಗಿ ಮಣ್ಣು ಸಂಗ್ರಹಿಸಿರುವುದು ಪ್ರಮುಖ ಕಾರಣ ಎಂಬ ಆರೋಪಗಳು ಕೇಳಿಬಂದಿವೆ.

ವರದಿಗಳ ಪ್ರಕಾರ, ಸುರಂಗ ನಿರ್ಮಾಣಕ್ಕಾಗಿ ಅಗೆದ ಮಣ್ಣನ್ನು ಕಾಮಗಾರಿ ಸ್ಥಳದಲ್ಲೇ ವೈಜ್ಞಾನಿಕ ಮಾನದಂಡಗಳನ್ನು ಪಾಲಿಸದೆ ದೊಡ್ಡ ಪ್ರಮಾಣದಲ್ಲಿ ಶೇಖರಿಸಲಾಗಿತ್ತು. ಮಳೆಗಾಲ ಆರಂಭವಾಗುತ್ತಿದ್ದಂತೆ ಹಾಗೂ ಭಾರಿ ಮಳೆಯ ಮುನ್ಸೂಚನೆ, ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಂಗ್ರಹಿಸಿದ ಮಣ್ಣನ್ನು ತೆರೆವುಗೊಳಿಸುವಂತೆ ಸ್ಪಷ್ಟ ಸೂಚನೆ ನೀಡಿತು ಎನ್ನಲಾಗಿದೆ. ಆದರೆ ಈ ಸೂಚನೆಗಳನ್ನು ಸಮರ್ಪಕವಾಗಿ ಪಾಲಿಸಲಾಗಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ನಿರಂತರ ಮಳೆಯಿಂದ ಮಣ್ಣಿನ ರಾಶಿ ಬೆಟ್ಟದ ಇಳಿಜಾರಿನೊಂದಿಗೆ ಕುಸಿತ ಪರಿಣಾಮ ಭಾರಿ ಅನಾಹುತ ಸಂಭವಿಸಿದೆ. ಈ ದುರಂತದಲ್ಲಿ ಸಾವು ನೋವುಗಳು ಸಂಭವಿಸಿರುವ ಹಿನ್ನೆಲೆ ಕಾಮಗಾರಿಯ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.

ಸುಮಾರು 20 km ರಸ್ತೆ ದೂರು ವನ್ನು ಕಡಿಮೆ ಮಾಡುವ ಉದ್ದೇಶದಿಂದ ₹2,000 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಈ ಸುರಂಗ ಯೋಜನೆ, ವೈಜ್ಞಾನಿಕ ಹಾಗೂ ಪರಿಸರ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ಅನುಷ್ಠಾನಗೊಂಡಿಲ್ಲ ಎಂಬ ಆರೋಪವು ಕೇಳಿಬಂದಿದೆ.

ಭೂಕುಸಿತಕ್ಕೆ ಹೆಚ್ಚು ಒಳಗಾಗುವ ವಯನಾಡಿನ ಸಡಿಲ ಮಣ್ಣಿನ ಸ್ವರೂಪವನ್ನು ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿತ್ತು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಸುರಕ್ಷತ ನಿಯಮಗಳ ಅನುಷ್ಠಾನ, ತಾಂತ್ರಿಕ ಮೇಲ್ವಿಚಾರಣೆ ಹಾಗೂ ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂಬ ಒತ್ತಾಯ ಕೇಳಿ ಬರುತ್ತಿವೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online