Belagavi News:
ಉಪಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆದಿದ್ದರೂ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಲು ವಿಫಲವಾದ ಹಿನ್ನೆಲೆ ಕುರಿತು ಸಚಿವ ತಿಮ್ಮಪೂರ್ ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ಅವರ ಸಕ್ರಿಯ ಪ್ರಚಾರದ ನಡುವೆಯೂ ಪಕ್ಷಕ್ಕೆ ಜಯ ಸಿಗದಿರುವುದು ಹಲವು ಅಂಶಗಳನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.
ಬಾಗಲಕೋಟೆಯಲ್ಲಿ ಯತ್ನಾಳ್ ನೇತೃತ್ವದಲ್ಲಿ ನಡೆದ ಪ್ರಚಾರ ಜನರ ಗಮನ ಸೆಳೆದಿದ್ದರು, ಸ್ಥಳೀಯ ಸಮಸ್ಯೆಗಳು, ಸಂಘಟನಾ ದುರ್ಬಲತೆ ಮತ್ತು ಮತದಾರರ ಮನೋಭಾವ ಫಲಿತಾಂಶದ ಮೇಲೆ ಪ್ರಭಾವ ಬೀರಿರಬಹುದು ಎಂದು ತಿಮ್ಮಾಪುರ್ ಅಭಿಪ್ರಾಯಪಟ್ಟರು. ಪ್ರಚಾರ ಮಾತ್ರ ಸಾಕಾಗುವುದಿಲ್ಲ, ನೆಲಮಟ್ಟದಲ್ಲಿ ಸಂಘಟನೆ ಬಲವಾಗಿರಬೇಕು. ಮತದಾರರ ನೈಜ ಸಮಸ್ಯೆಗಳಿಗೂ ಒಂದನೆಯ ಅಗತ್ಯ ಎಂದು ಅವರು ಹೇಳಿದರು.
ಉಪ ಚುನಾವಣೆಗಳ ಇತಿಹಾಸವನ್ನು ಗಮನಿಸಿದರೆ ಹಲವು ಬಾರಿ ಸ್ಥಳೀಯ ಅಂಶಗಳೇ ಪಲಿತಾಂಶವನ್ನು ತೀರ್ಮಾನಿಸುತ್ತವೆ. ಇದೇ ರೀತಿ ಬಾಗಲಕೋಟೆಯಲ್ಲಿಯೂ ಕೆಲವು ಸ್ಥಳೀಯ ವಿಚಾರಗಳು ಬಿಜೆಪಿ ವಿರುದ್ಧ ಕೆಲಸ ಮಾಡಿರಬಹುದು ಎಂದು ಅವರು ಸೂಚಿಸಿದರು.
ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯ ಪದ್ಧತಿಯನ್ನು ಪರಿಷ್ಕರಿಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತಹ ಗಮನಹರಿಸಲಾಗುವುದು ಎಂದು ತಿಮ್ಮಾಪುರ್ ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಾಗಲಕೋಟೆ ಫಲಿತಾಂಶದ ಬಗ್ಗೆ ವಿವಿಧ ವಿಶ್ಲೇಷಣೆಗಳು ನಡೆಯುತ್ತಿವೆ.
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಶಾಲಿಸಿರುವ ಹಿನ್ನೆಲೆ, ಪಕ್ಷದ ಕಾರ್ಯಕರ್ತರ ಶ್ರಮ ಮತ್ತು ಮುಖಂಡರ ಸಮನ್ವಯವೇ ಗೆಲುವಿನ ಪ್ರಮುಖ ಕಾರಣ ಎಂದು ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲಾ ಮತದಾರರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದಲೇ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.
ಚುನಾವಣಾ ಪ್ರಚಾರದ ವೇಳೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸಿ, ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸಲಾಗಿತ್ತು. ಈ ಬಾರಿಯ ಉಪಚುನಾವಣೆಯಲ್ಲಿ ಸಂಘಟಿತ ಪ್ರಚಾರ ಮತ್ತು ಕಾರ್ಯಕರ್ತರ ತೊಡಗು ಹೆಚ್ಚಾಗಿ ಕಂಡುಬಂದಿದ್ದು, ಅದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಪ್ರತಿಫಲಿಸಿದೆ ಎಂದು ತಿಮ್ಮಾಪುರ್ ಹೇಳಿದರು.
ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಹಾಗೂ ಮತದಾರರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದರು.
ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಸಂಘಟನೆ ಬಲವನ್ನು ಮತ್ತೊಮ್ಮೆ ತೋರಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಹಿಂದುತ್ವದ ಅಜೆಂಡಾವನ್ನು ಮುಂದಿಟ್ಟು ಪ್ರಚಾರ ನಡೆಸಿದರು ಜನರು ಅದನ್ನು ಸ್ವೀಕರಿಸಲಿಲ್ಲ ಎಂದು ಉಸ್ತುವಾರಿ ಸಚಿವ ಆರ್ ಬಿ ಸಿಮಾಪುರ್ ಹೇಳಿದ್ದಾರೆ. ಯತ್ನಾಳ್ ಅವರನ್ನು ಕರೆತಂದು ಪ್ರಚಾರ ಮಾಡಿಸಿದ್ದರು ಅದು ಫಲ ನೀಡಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಪದೇಪದೇ ಹಿಂದುತ್ವ ಹಿಂದೂ ಎಂಬ ಪ್ರಚಾರಗಳನ್ನು ಮುಂದಿಟ್ಟಿದ್ದರು. ನಾವು ಉಮೇಶ್ ಮೇಟಿ ಹಿಂದೂ ಅಲ್ವಾ? ಎಂದು ಪ್ರಶ್ನೆ ಮಾಡುತ್ತಾ ಸಮಾನತೆಯ ಸಂದೇಶ ನೀಡಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಗೆಲುವಿಗೆ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರ ಸಮೂಹ ಶ್ರಮವೇ ಕಾರಣ ಎಂದು ಅವರು ಹೇಳಿದ್ದಾರೆ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಅದಕ್ಕಾಗಿಯೇ ಮತ ನೀಡಿದ್ದಾರೆ ಎಂದು ತಿಮ್ಮಾಪುರ್ ತಿಳಿಸಿದರು.
ಇದೇ ವೇಳೆ, ಈ ಚುನಾವಣಾ ಫಲಿತಾಂಶವು ಬಿಜೆಪಿ ವಿರುದ್ಧ ಜನರ ತಿರಸ್ಕಾರವನ್ನು ಸ್ಪಷ್ಟವಾಗಿ ತೋರಿಸಿದೆ ಎಂದು ಅವರು ಹೇಳಿದ್ದರು. ಜನರು ಯಾವ ಅಜೆಂಡಾಗೆ ಬೆಂಬಲ ನೀಡುತ್ತಾರೆ ಎಂಬುದನ್ನು ಈ ಫಲಿತಾಂಶವೇ ಸಾಬೀತುಪಡಿಸಿದೆ ಎಂದು ಅವರು ಸೇರಿಸಿದರು.
ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದ್ದು, ಅಭಿವೃದ್ಧಿ ವಿರುದ್ಧ ಧ್ರುವೀಕರಣ ರಾಜಕೀಯ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.
Also Read: