<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Travel

Bengaluru Metro Update: ಮೇ 10 ರಂದು ಸಂಚಾರ ವ್ಯತ್ಯಯ, ಪ್ರಯಾಣಿಕರಿಗೆ ಸೂಚನೆ

Bengaluru Metro Update: ಮೇ 10 ರಂದು ಸಂಚಾರ ವ್ಯತ್ಯಯ, ಪ್ರಯಾಣಿಕರಿಗೆ ಸೂಚನೆ
Summary: Bengaluru residents, take note: There are likely to be some changes and disruptions in our metro services on May 10, the Bangalore Metro Rail Corporation (BMRCL) has said. Passengers have been advised to plan their journey in advance.

belagavi news:

ಮೇ 10 ರಂದು ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಅಗತ್ಯ ನಿರ್ವಹಣಾ ಕಾಮಗಾರಿಕೆಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಹೊಸಹಳ್ಳಿ ಮತ್ತು ಕಬ್ಬನ ಪಾರ್ಕ್ ನಡುವಿನ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ಕುರಿತು ಪ್ರಕಟನೆ ಹೊರಡಿಸಿದು ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಸೂಚಿಸಿದೆ.

ಬೆಂಗಳೂರು, ಮೇ 8: ಅಗತ್ಯ ನಿರ್ವಹಣಾ ಕಾಮಗಾರಿಕೆಗಳ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇಹತ್ತರ ಭಾನುವಾರ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಕಟನೆ ಮೂಲಕ ತಿಳಿಸಿದೆ.

Sponsored

ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯ ವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಬಿ

ಎಂಆರ್ ಸಿಎಲ್ ವಿನಂತಿಸಿದೆ.

• ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

• ನಿರ್ವಹಣಾ ಕಾಮಗಾರಿಕೆಗಳ ಹಿನ್ನೆಲೆ ಸಂಚಾರ ತಾತ್ಕಾಲಿಕ ಸ್ಥಗಿತ

Sponsored

• ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡ ಬಿಎಂಆರ್ ಸಿಎಲ್

ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ (ಸೆಂಟ್ರಲ್ ಕಾಲೇಜ್) ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಡುವಿನ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ 2 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ.

ಅದಾಗ್ಯೂ, ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾನಗಳಿಂದ ಬೆಳಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿದ್ದು, ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಸಂಚರಿಸಲಿವೆ.

Sponsored

• ಚಳ್ಳಘಟ್ಟ - ವಿಜಯನಗರ

• ಎಂ. ಜಿ. ರಸ್ತೆ - ವೈಟ್ ಫೀಲ್ಡ್ (ಕಾಡುಗೋಡಿ)

• ಮಾದಾವರ - ಸಿಲ್ಕ್ ಇನ್ ಸ್ಟಿಟ್ಯೂಟ್

• ಆರ್. ವಿ. ರಸ್ತೆ - ಬೊಮ್ಮಸಂದ್ರ

Sponsored

ಬೆಳಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ - ಹೊಸ ಹಳ್ಳಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಈ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬೆಂಗಳೂರಿನ ರೈಲು ನಿಗಮ ನಿಯಮಿತ ( BMRCL) ತಿಳಿಸಿದೆ.

Also Read:

IPL Today: ಡೆಲ್ಲಿ ಕೊಲ್ಕತ್ತಾ ಮುಖಾಮುಖಿ ಯಾರಿಗೆ ಮೇಲುಗೈ ?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online