<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆ : ಕೃಷ್ಣ ಬೈರೇಗೌಡ ಮತ್ತೆ ಕಾರ್ಯಭಾರ ಸ್ಪೀಕಾರ್

ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆ : ಕೃಷ್ಣ ಬೈರೇಗೌಡ ಮತ್ತೆ ಕಾರ್ಯಭಾರ ಸ್ಪೀಕಾರ್
Summary: Surajwala's mediation was successful and Krishna Byre Gowda has resumed his ministerial portfolio after 13 days. This development has brought an end to the political confusion that had arisen and brought clarity to the functioning of the government.

Belagavi News:

ಕರ್ನಾಟಕ ರಾಜಕೀಯದಲ್ಲಿ ಉಂಟಾಗಿದ್ದ ಸಚಿವ ಖಾತೆ ಗೊಂದಲಕ್ಕೆ ಅಂತ್ಯವಾಗಿದೆ. ಸುರಜಿಬಾಯ್ ಅವರ ಮಧ್ಯಸ್ಥಿಕೆಯಿಂದ ನಡೆದ ಸಂದಾನ ಯಶಸ್ವಿಯಾಗಿದ್ದು, 13 ದಿನಗಳ ನಂತರ ಕೃಷ್ಣ ಬೈರೇಗೌಡ ಅವರು ತಮ್ಮ ಸಚಿವ ಖಾತೆಯನ್ನು ಮತ್ತೆ ವಹಿಸಿಕೊಂಡಿದ್ದಾರೆ.

ಕಾಟಿ ಹಂಚಿಕೆ ಸಂಬಂಧ ಉಂಟಾಗಿದ್ದ ವಿವಾದದಿಂದ ಸರ್ಕಾರದ ಒಳಗೆ ಕೆಲವು ದಿನಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಹೈಕಮಾಂಡ್ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿದಿದ್ದು, ಸಚಿವರು ತಮ್ಮ ಕಾರ್ಯಭಾರವನ್ನು ಪುನರಾರಂಭಿಸಿದ್ದಾರೆ.

ಈ ಬೆಳವಣಿಗೆಯಿಂದ ರಾಜ್ಯ ಸರ್ಕಾರದ ಆಡಳಿತ ಕಾರ್ಯ ಚಟುವಟಿಕೆಗಳಿಗೆ ಸ್ಪಷ್ಟತೆ ಬಂದಿದೆ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಇನ್ನಷ್ಟು ಸಣ್ಣ ಮಟ್ಟದ ಬದಲಾವಣೆಗಳ ಸಾಧ್ಯತೆಗಳ ಕುರಿತು ಚರ್ಚೆ ನಡೆಯುತ್ತಿದೆ.

Sponsored

ಸರ್ಕಾರದ ಮೂಲಗಳ ಪ್ರಕಾರ, ಎಲ್ಲಾ ವಿಭಾಗಗಳ ಕಾರ್ಯನಿರ್ವಹಣೆ ಈಗ ಸಾಮಾನ್ಯ ಸ್ಥಿತಿಗೆ ಮರಳಿದೆ.

13 ದಿನಗಳ ಅಸಮಾಧಾನ ಅಂತ್ಯ - ಬೆಂಗಳೂರು ನಗರ ಅಭಿವೃದ್ಧಿ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ :

ಖಾತೆ ಹಂಚಿಕೆಯಲ್ಲಿ ಉಂಟಾಗಿದ್ದ ಅಸಮಾಧಾನದ ಹಿನ್ನೆಲೆಯಲ್ಲಿ 13 ದಿನಗಳ ಕಾಲ ನಡೆದ ಗೊಂದಲದ ನಂತರ ಸಚಿವ ಕೃಷ್ಣ ಬೈರೇಗೌಡ ಅವರು ಇದೀಗ ಬೆಂಗಳೂರು ನಗರ ಅಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಖಾತೆ ಹಂಚಿಕೆಯಲ್ಲಿ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಸ್ಥಿಕೆಯಿಂದ ನಡೆದ ಚರ್ಚೆಯ ನಂತರ ಸಮಸ್ಯೆ ಬಗೆಹರಿದಿದ್ದು ಸಚಿವರು ತಮ್ಮ ಖಾತೆಯ ಕಾರ್ಯಭಾರವನ್ನು ಪುನರಾರಂಭಿಸಿದ್ದಾರೆ.

Sponsored

ಈ ಬೆಳವಣಿಗೆಯಿಂದ ನಗರ ಅಭಿವೃದ್ಧಿ ಇಲಾಖೆಯ ಕಾರ್ಯಚಟುವಟಿಕೆಗೆ ಸ್ಪಷ್ಟತೆ ಬಂದಿದ್ದು, ಮುಂದಿನ ಯೋಜನೆಗಳ ಅನುಷ್ಠಾನ ವೇಗ ಪಡೆಯುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಕೀಯ ವಲಯದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಚರ್ಚೆ ಮುಂದುವರೆದಿದ್ದು, ಸಂಪುಟದ ಒಳಗಿನ ಸಮನ್ವಯದ ಕುರಿತು ಮತ್ತೆ ಗಮನ ಸೆಳೆದಿದೆ.

ಸುರ್ಜೆವಾಲ್ ಮಧ್ಯಸ್ಥಿಕೆಯಿಂದ ಸಚಿವರ ಮುನಿಸು ಶಮನ - ಜಿಬಿಎ ಕಚೇರಿಯಲ್ಲಿ ಕೃಷ್ಣಭೈರೇಗೌಡ ಮೊದಲ ಸಭೆ:

ರಾಜ್ಯ ರಾಜಕೀಯದಲ್ಲಿ ಉಂಟಾಗಿದ್ದ ಸಚಿವರ ಅಸಮಾಧಾನವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣಧೀರ್ ಅವರು ಮಧ್ಯಸ್ಥಿಕೆ ವಹಿಸಿ ಶಮನಗೊಳಿಸಿದ್ದಾರೆ.

Sponsored

ಈ ಬೆಳವಣಿಗೆಯ ನಂತರ ಬೆಂಗಳೂರು ನಗರ ಅಭಿವೃದ್ಧಿ ಕೇಂದ್ರ ಕಚೇರಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಅಧ್ಯಕ್ಷತೆಯಲ್ಲಿಯೇ ಮೊದಲ ಸಭೆಯನ್ನು ನಡೆಸಿದ್ದಾರೆ. ಖಾತೆ ಹಂಚಿಕೆ ಕುರಿತು ಅಸಮಾಧಾನದ ನಂತರ ನಡೆದ ಈ ಸಭೆ ಆಡಳಿತಾತ್ಮಕವಾಗಿ ಮಹತ್ವ ಪಡೆದುಕೊಂಡಿದೆ.

ಸರ್ಕಾರದ ಮೂಲಗಳ ಪ್ರಕಾರ, ಸಂವಿಧಾನದ ಬಳಿಕ ಇಲಾಖೆಯ ಕಾರ್ಯ ಚಟುವಟಿಕೆಗಳು ಸಾಮಾನ್ಯ ಸ್ಥಿತಿಗೆ ಮರಳಿದ್ದು, ನಗರಾಭಿವೃದ್ಧಿ ಯೋಜನೆಗಳನ್ನು ವೇಗವಾಗಿ ಮುಂದುವರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ರಾಜಕೀಯ ವಲಯದಲ್ಲಿ ಈ ಬೆಳವಣಿಗೆಗೆ ಮಹತ್ವ ನೀಡಲಾಗುತ್ತಿದ್ದು, ಹೈಕಮಾಂಡ್ ಮಧ್ಯಸ್ಥಿಕೆಯಿಂದ ಸಂಪುಟದ ಒಳಗಿನ ಭಿನ್ನಾಭಿಪ್ರಾಯ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ.

ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆದ ಜಿಬಿಎ ಕೇಂದ್ರ ಕಚೇರಿ ಮೊದಲ ಸಭೆಯಲ್ಲಿ ಮಹತ್ವದ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರಿನ 5 ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್ ಗಳು ಹಾಜರಾಗಿದ್ದರು, ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಮನ್ವಯ ಕಾರ್ಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು.

Sponsored

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸುವುದು ಮತ್ತು ಇಲಾಖೆಗಳ ನಡುವೆ ಉತ್ತಮ ಸಮನ್ವಯ ಸಾಧಿಸುವುದು ಈ ಸಭೆಯ ಪ್ರಮುಖ ಉದ್ದೇಶವಾಗಿತ್ತು ಎಂದು ಮೂಲಗಳು ತಿಳಿಸಿವೆ.

ನಗರದ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲನೆಗೂ ಸಭೆಯಲ್ಲಿ ವಿಶೇಷ ಗಮನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗಳನ್ನು ಇನ್ನಷ್ಟು ವೇಗಗೊಳಿಸಲು ನಿರ್ಧರಿಸಲಾಗಿದೆ.

Also Read:

ಬಿಡದಿ ಟೌನ್ ಶಿಪ್ ಯೋಜನೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ: "ಸರ್ಕಾರಕ್ಕೆ ಧಕ್ಕೆ ಆಗಬಾರದು

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online