belagavi news :
ಆಗುಂಬೆ ಘಾಟಿಯಲ್ಲಿ ಟನಲ್ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಯೋಜನೆ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆಗುಂಬೆ ಘಾಟಿಯಲ್ಲಿ ಡಬಲ್ ರಸ್ತೆ ನಿರ್ಮಾಣಕ್ಕೆ ಹಲವು ಸವಾಲುಗಳಿದ್ದು, ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆಯ ಅನುಮತಿ ಸೇರಿದಂತೆ ವಿವಿಧ ವಿತರಣೆಗಳನ್ನು ಪರಿಗಣಿಸಬೇಕಿದೆ ಎಂದು ಹೇಳಿದರು.
"ಯೋಜನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಅಗತ್ಯ ಎರಡನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು" ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಆಗುಂಬೆ ಘಾಟ್ ಪ್ರದೇಶವು ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಮತ್ತು ತನ್ನ ನಿರ್ಮಾಣದ ಕುರಿತು ಹಲವು ವರ್ಷಗಳಿಂದ ಚರ್ಚೆಗಳು ನಡೆಯುತ್ತಿವೆ. ಇದೀಗ ಸಚಿವರ ಭೇಟಿ ಬಳಿಕ ಯೋಜನೆಯ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.
ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ : ಅಧಿಕಾರಿಗಳ ಸಭೆ ಬಳಿಕ ಅಂತಿಮ ನಿರ್ಧಾರ ಎಂದ ಸತೀಶ್ ಜಾರಕಿಹೊಳಿ
ಆಗುಂಬೆ ಘಾಟ್ ರಸ್ತೆ ಅಗಲೀಕರಣ ಮತ್ತು ಟನಲ್ ನಿರ್ಮಾಣ ಯೋಜನೆ ಕುರಿತು ಹೆಬ್ರಿ ಹಾಗೂ ಕಾರ್ಕಳ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಲಾಗುವುದು. ಬಳಿಕ ಬೆಂಗಳೂರಿನಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಆಗುಂಬೆ ಘಾಟಿಯ ರಸ್ತೆಯ ಅಗಲೀಕರಣದ ಸಾಧ್ಯತೆಯನ್ನು ಪರಿಶೀಲಿಸುವ ಉದ್ದೇಶದಿಂದಲೇ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ಸಚಿವರು ಹೇಳಿದರು. ಯೋಜನೆಯ ಸಾಧಕ- ಬಾಧಕಗಳು, ಪರಿಸರ ಸಂಬಂಧಿತ ವಿಚಾರಗಳು ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರ ಆಗುಂಬೆ ಟನಲ್ ಯೋಜನೆಗೆ ಟೆಂಡರ್ ಆಹ್ವಾನಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಟೆಂಡರ್ ಕರೆದಿದ್ದರು ಇದುವರೆಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂದು ಹೇಳಿದರು. ಅಲ್ಲದೆ, ಯೋಜನೆಯ ಡಿಪಿಆರ್ ಸೇರಿದಂತೆ ಹಲವು ವಿಷಯಗಳಲ್ಲೂ ಇನ್ನು ಸ್ಪಷ್ಟತೆ ಇಲ್ಲ ಎಂದು ತಿಳಿಸಿದರು.
ಇದೇ ವೇಳೆ ಸಕಲೇಶಪುರ ಘಾಟಿ ಸಮಸ್ಯೆಯನ್ನು ಮೂರು ವರ್ಷಗಳ ಅವಧಿಯಲ್ಲಿ ಪರಿಹರಿಸಲಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಚಾರ್ಮಾಡಿ ಘಾಟಿ ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಕಾಮಗಾರಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಸಿಎಂ ದೆಹಲಿ ಪ್ರವಾಸ, ಸಚಿವ ಸ್ಥಾನ, ಬರ ಪರಿಹಾರ ಕುರಿತು ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, "ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ ವಿಚಾರವಾಗಿರಬಹುದು ಅಥವಾ ಮಂತ್ರಿಮಂಡಲಕ್ಕೆ ಸಂಬಂಧಿಸಿದ ಕೆಲಸವಾಗಿರಬಹುದು" ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಹೈಕಮಾಂಡ್ ನಿರ್ಧಾರ
ಬೆಳಗಾವಿ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಹೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಹಲವು ಹಿರಿಯ ಶಾಸಕರು ಇದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದರು.
"ಪಕ್ಷದ ಯಾರಿಗೆ ಅವಕಾಶ ನೀಡಿದರು ಅದನ್ನು ಸ್ವಾಗತಿಸುತ್ತೇವೆ. ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ" ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬರ ಪರಿಹಾರಕ್ಕೆ ಕೇಂದ್ರದ ನೆರವು ಅಗತ್ಯ
ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಬಿಜೆಪಿ ವಿರೋಧಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬರ ನಿರ್ವಹಣೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯವಾಗಿದೆ ಎಂದು ಹೇಳಿದರು.
"ಈ ವಿಚಾರದಲ್ಲಿ ಬಿಜೆಪಿ ವಿರೋಧಿಸುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಂತೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ಆದರೆ ಬರ ಪರಿಸ್ಥಿತಿ ಎದುರಿಸಲು ಕೇಂದ್ರದ ಸಹಕಾರವು ಮುಖ್ಯವಾಗಿದೆ" ಎಂದು ತಿಳಿಸಿದರು.
ಮಳೆ ಕೊರತೆ ಮುಂದುವರಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.