<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Trending

ಮಹಿಳೆಯರ ಬಸ್ ಪ್ರಯಾಣ ಇನ್ನಷ್ಟು ಸುಲಭ : ಸ್ಮಾರ್ಟ್ ಕಾರ್ಡ್ ವಿತರಣೆ, 5000 ಬಸ್ ಗಳ ಖರೀದಿ

ಮಹಿಳೆಯರ ಬಸ್ ಪ್ರಯಾಣ ಇನ್ನಷ್ಟು ಸುಲಭ  : ಸ್ಮಾರ್ಟ್ ಕಾರ್ಡ್ ವಿತರಣೆ, 5000 ಬಸ್ ಗಳ ಖರೀದಿ
Summary: The state government has taken a significant step to further strengthen the state's public transport system. Minister Bhairati Suresh said that 1,000 new buses will be purchased from state funds.

BELAGAVI NEWS :

ಶಕ್ತಿ ಯೋಜನೆಯ ಫಲಾನುಭವಿಗಳಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಪರಿಣಾಮಕಾರಿಯಾಗಿಸಲು ಕರ್ನಾಟಕ ಸರ್ಕಾರ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ಭೈರತಿ ಸುರೇಶ್, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ೩೦೦೦ ಕೋಟಿಗೂ ಹೆಚ್ಚು ಮಹಿಳೆಯರು ಈ ಸ್ಮಾರ್ಟ್ ಕಾರ್ಡ್ ಗಳ ಪ್ರಯೋಜನ ಪಡೆಯುವ ನಿರೀಕ್ಷೆ ಇದೆ. ಮಹಿಳೆಯರು ಯಾವುದೇ ಶುಲ್ಕ ವಿಲ್ಲದೆ ಕಾರ್ಡುಗಳನ್ನು ಪಡೆಯಬಹುದಾಗಿದ್ದು, ಪುರುಷ ಪ್ರಯಾಣಿಕರು ಮೆಟ್ರೋ ಕಾರ್ಡ್ ಮಾದರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಕಾರ್ಡುಗಳನ್ನು ಪಡೆಯಬೇಕಾಗುತ್ತದೆ. ಕಾರ್ಡಿನಲ್ಲಿರುವ ಮೊತ್ತ ಖಾಲಿಯಾದ ಬಳಿಕ ಅದನ್ನು ಮರು ಭರ್ತಿ ಮಾಡಿಕೊಳ್ಳುವ ವ್ಯವಸ್ಥೆಯು ಇರಲಿದೆ.

ಸುಮಾರು ಮೂರು ಕೋಟಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಿರುವುದರಿಂದ ಅವುಗಳ ಉತ್ಪಾದನೆಗಾಗಿ ಸರ್ಕಾರ ಶೀಘ್ರದಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಿದೆ. ಪೈಲೆಟ್ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ಆರಂಭಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Sponsored

ಇದರ ಜೊತೆಗೆ, ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ನಿಧಿಯಿಂದ 10 ಬಸ್ ಗಳನ್ನು ಖರೀದಿಸಲಾಗುವುದು. ಅಲ್ಲದೆ, ಕೇಂದ್ರ ಸರ್ಕಾರದ ಆರ್ಥಿಕ ನರವಿನೊಂದಿಗೆ 4000 ವಿದ್ಯುತ್ ಬಸ್ ಗಳನ್ನು ಸೇರ್ಪಡೆಗೊಳಿಸುವ ಯೋಜನೆಯು ರೂಪಿಸಲಾಗಿದೆ. ಈ ಕ್ರಮದಿಂದ ಸಾರ್ವಜನಿಕ ಸಾರಿಗೆ ಸೇವೆ ಮತ್ತಷ್ಟು ಸುಧಾರಿಸುವುದರ ಜೊತೆಗೆ ಪರಿಸರಸ್ನೇಹಿ ಸಾರಿಗೆ ವ್ಯವಸ್ಥೆಗೆ ಉತ್ತೇಜನ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸಚಿವ ಭೈರತಿ ಸುರೇಶ್ ಸೋಮವಾರ ಸಾರಿಗೆ ಸಚಿವರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಅವರು ಅಧಿಕಾರಿಗಳನ್ನು ಭೇಟಿ ಮಾಡಿ ಇಲಾಖೆ ಬಗ್ಗೆ ಮಾಹಿತಿ ಪಡೆದರು.

ಸಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೈರತಿ ಸುರೇಶ್ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಧಾನ ಕಚೇರಿಗೆ ಭೇಟಿ ನೀಡಿ ಸಾರಿಗೆ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ವೇಳೆ ನಾಲ್ಕು ಪ್ರಮುಖ ಸಾರಿಗೆ ನಿಗಮಗಳಾದ KSRTC, ಬೆಂಗಳೂರು ಮಹಾನಗರ ಸಾರಿಗೆ ನಿಗಮ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC), ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) -ಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ವಿವಿಧ ನಿಯಮಗಳ ಆಡಳಿತಾತ್ಮಕ ಕಾರ್ಯ ಚಟುವಟಿಕೆಗಳು, ಸಾರ್ವಜನಿಕ ಸೇವೆಗಳ ಗುಣಮಟ್ಟ, ಪ್ರಯಾಣಿಕರ ಸೌಲಭ್ಯಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಇಲಾಖೆಯ ಕಾರ್ಯನಿರ್ವಹಣೆಯನ್ನು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಖಾತರಿ ಯೋಜನೆಗಳು ಜನರ ಜೀವನಮಟ್ಟ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿವೆ ಎಂದು ಹೇಳಿದರು. ವಿಶೇಷವಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಸ್ಕೀಮ್ ರಾಜ್ಯದ ಅತ್ಯಂತ ಜನಪ್ರಿಯ ಯೋಜನೆಗಳಲ್ಲಿ ಒಂದಾಗಿದ್ದು, ಕೋಟ್ಯಾಂತರ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

Sponsored

ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಸುಮಾರು 40 ಶೇಕಡಾ ಹೆಚ್ಚಳ ಕಂಡಿದೆ. ಇದರಿಂದ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚುವುದರ ಜೊತೆಗೆ ಮಹಿಳೆಯರ ಸಂಚಾರ ಸ್ವತಂತ್ರ್ಯ ಮತ್ತು ಆರ್ಥಿಕ ಉಳಿತಾಯಕ್ಕೂ ನೇರವಾಗಿ ಎಂದು ಸಚಿವರು ತಮ್ಮ ಕಚೇರಿಯಿಂದ ಬಿಡುಗಡೆಗೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾವಿರ ಹೊಸ ಬಸ್ ಖರೀದಿ : ರಾಜ್ಯ ನಿಧಿಯನ್ನು ಬಳಸಿಕೊಂಡು ಸಾವಿರ ಬಸ್ಸುಗಳನ್ನು ಖರೀದಿಸಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಜೊತೆಗೆ ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ 4000 ವಿದ್ಯುತ್ ಬಸ್ ಗಳನ್ನು ಖರೀದಿಸಲಾಗುವುದು. ಈ ಬಸ್ಸುಗಳನ್ನು ಹಂತ ಹಂತವಾಗಿ ಖರೀದಿಸಿ 4 ಸಾರಿಗೆ ನಿಯಮಗಳಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮಹಿಳೆಯರು, ಯುವತಿಯರು ಹಾಗೂ ಬಾಲಕಿಯರ ಸುರಕ್ಷತೆಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಮಹಿಳಾ ಪ್ರಾಮಾಣಿಕರ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಖಾಸಗಿ ಪ್ರಯಾಣಿಕ ವಾಹನಗಳಲ್ಲಿ ಆಧುನಿಕ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆಯನ್ನು ವೇಗಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ವಾಣಿಜ್ಯ ಕಾರುಗಳು, ಟ್ಯಾಕ್ಸಿಗಳು ಹಾಗೂ ಇತರೆ ಖಾಸಗಿ ಸಾರಿಗೆ ವಾಹನಗಳಲ್ಲಿ Vehicle Location Tracking System ಅಳವಡಿಕೆಯನ್ನು ತೋರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಈ ವ್ಯವಸ್ಥೆಯ ಮೂಲಕ ವಾಹನಗಳ ಚಲನವಲನವನ್ನು ನಿರ್ವಹಿಸಲು ಸಾಧ್ಯವಾಗಲಿದ್ದು, ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣದ ಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ.

Sponsored

ಸಚಿವರ ಮಾಹಿತಿ ಪ್ರಕಾರ, ಇದುವರೆಗೆ ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಾಹನಗಳಲ್ಲಿ ವಿ.ಎಲ್.ಟಿ.ಎಸ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಉಳಿದಿರುವ ನಾಲ್ಕು ರಿಂದ ಐದು ಲಕ್ಷ ವಾಹನಗಳಲ್ಲಿ ಮುಂದಿನ 3 ರಿಂದ 4 ತಿಂಗಳೊಳಗೆ ಈ ವ್ಯವಸ್ಥೆ ಅಳವಡಿಕೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಮಹಿಳೆಯರು ಮತ್ತು ಯುವತಿಯರ ಸುರಕ್ಷಿತ ಪ್ರಯಾಣಕ್ಕೆ ಇದು ಮಹತ್ವದ ಹೆಜ್ಜೆ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Also Read:

ಮಳೆ ಅಬ್ಬರಕ್ಕೆ ಗೋಕರ್ಣ ದೇಗುಲ ಸಂಕಷ್ಟ : ಆತ್ಮಲಿಂಗವನ್ನೇ ಮುಟ್ಟಿದ ಕೊಳಚೆ ನೀರು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online