BELAGAVI NEWS:
ಪ್ರತಿಭಟನೆ ಶನಿವಾರ 15ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಅದೇ ವೇಳೆ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವೂ ಏಳನೇ ದಿನಕ್ಕೆ ಪ್ರವೇಶಿಸಿದೆ.
ಪ್ರತಿಭಟನೆಯ ಭಾಗವಾಗಿ ಇಂದು ಸಂಜೆ 7 ಗಂಟೆಗೆ ವಿದ್ಯಾರ್ಥಿಗಳು ಹಾಗೂ ಯುಪಿಎಸ್ಸಿ ಆಕಾಂಕ್ಷಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂವಾದದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಕರ ಅಭಿಪ್ರಾಯಗಳು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿವೆ.
ಕಾರ್ಯಕ್ರಮದಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ವಿದ್ಯಾರ್ಥಿಗಳು ಮತ್ತು ಯುಪಿಎಸ್ಸಿ ಆಕಾಂಕ್ಷೆಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದು, ಅವರ ಬೇಡಿಕೆಗಳು, ಸವಾಲುಗಳು ಹಾಗೂ ನಿರೀಕ್ಷೆಗಳನ್ನು ಆಲಿಸಲಿದ್ದಾರೆ. ಈ ಸಭೆಯು ಪ್ರತಿಭಟನೆಯ ಮುಂದಿನ ಹಂತದ ಕಾರ್ಯತಂತ್ರ ರೂಪಿಸುವ ದೃಷ್ಟಿಯಿಂದ ಮಹತ್ವದ್ದಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ವಿರುದ್ಧ ಬಿಜೆಪಿ ಆರಂಭಿಸಿದ ಚಳುವಳಿಯ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಯುಪಿಎಸ್ಸಿ ಆಕಾಂಕ್ಷೆಗಳು ಜಂತರ್ ಮಂತರ್ ಗೆ ಭೇಟಿ ನೀಡುತ್ತಿದ್ದಾರೆ ಎಂದು ಸಂಘಟನೆ ತಿಳಿಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ಸಿಜೆಪಿ ಹೇಳಿದೆ.
ಸಿಜೆಪಿ ಪ್ರಕಾರ, ಯುಪಿಎಸ್ಸಿ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷಾ ಪ್ರಕ್ರಿಯೆ, ಆರ್ಥಿಕ ಒತ್ತಡ, ಮಾನಸಿಕ ಒತ್ತಡ ಹಾಗೂ ತಯಾರಿ ವೇಳೆ ಎದುರಾಗುವ ವಿವಿಧ ಸವಾಲುಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳನ್ನು ವಯಕ್ತಿಕ ಮಟ್ಟಕ್ಕೆ ಸೀಮಿತಗೊಳಿಸದೆ, ಶಿಕ್ಷಣ ನೀತಿ ರೂಪಿಸಿರುವವರ ಗಮನಕ್ಕೆ ತರಬೇಕಾದ ಅಗತ್ಯವಿದೆಯೆಂದು ಸಂಘಟನೆ ಅಭಿಪ್ರಾಯ ಪಟ್ಟಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯಗಳು, ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಮುಕ್ತ ಸಂವಾದವನ್ನು ಆಯೋಜಿಸಲಾಗಿದೆ ಎಂದು ಸಿಜೆಪಿ ತಿಳಿಸಿದೆ. ವಿದ್ಯಾರ್ಥಿಗಳ ಅನುಭವಗಳು ಮತ್ತು ಸಲಹೆಗಳನ್ನು ಸಂಗ್ರಹಿಸಿ ಸಂಬಂಧಿತ ಅಧಿಕಾರಿಗಳು ಹಾಗೂ ನೀತಿ ನಿರೂಪಕರಿಗೆ ತಲುಪಿಸುವ ಪ್ರಯತ್ನ ಇದಾಗಿದೆ ಎಂದು ಸಂಘಟನೆ ಹೇಳಿದೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಪ್ರಕಾರ, ಯುಪಿಎಸ್ಸಿ ಆಕಾಂಕ್ಷೆಗಳುಚಳುವಳಿಯ ಆರಂಭದಿಂದಲೇ ತಮ್ಮ ಸಮಸ್ಯೆಗಳು, ಬೇಡಿಕೆಗಳು ಮತ್ತು ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ನಿರಂತರವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶನಿವಾರ ಸಂಜೆ 7:00ಗೆ ಅವರು ಹಳೆಯ ರಾಜಿಂದರ್ ನಗರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.
ಈ ಸಂವಾದದಲ್ಲಿ ಯುಪಿಎಸ್ಸಿ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ತಮ್ಮ ಅನುಭವಗಳು, ಸಲಹೆಗಳು ಹಾಗೂ ಎದುರಿಸುತ್ತಿರುವ ಸವಾಲುಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಸಂಬಂಧಿತ ಅಧಿಕಾರಿಗಳು ಮತ್ತು ನೀತಿ ನಿರೂಪಕರ ಗಮನಕ್ಕೆ ತರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಿಜೆಪಿ ಹೇಳಿದೆ.
ಇನ್ನೊಂದೆಡೆ, ಸಿಜೆಪಿ ಚಳುವಳಿಗೆ ಬೆಂಬಲ ಸೂಚಿಸಿ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ಶನಿವಾರ ಅವರು ಉಪವಾಸ ಏಳನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರ ತಂಡವು ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದೆ. ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ನಿಯಮಿತ ವೈದ್ಯಕೀಯ ಬುಲೆಟಿನ್ ಗಳನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ.
ವಾಂಗ್ಚುಕ್ ಶಾಂತಿಯುತ ಹಾಗೂ ಪ್ರಜಾ ಸತಾತ್ಮಕ ಮಾರ್ಗಗಳ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಲುವಿನಲ್ಲಿ ದೃಢವಾಗಿದ್ದಾರೆ ಎಂದು ಸಿಜೆಪಿ ತಿಳಿಸಿದೆ. ಇದೇ ವೇಳೆ, ದೇಶದ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು, ಯುವಕರು ಹಾಗೂ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಪ್ರತಿದಿನ ಜಂತರ್ ಮಂತರ್ ಗೆ ಆಗಮಿಸಿ ಚಳುವಳಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಈ ಹೋರಾಟವು ಕೇವಲ ಒಂದು ಸಂಘಟನೆಯ ಪ್ರತಿಭಟನೆ ಅಲ್ಲ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಕರ ಸಮಸ್ಯೆಗಳು ಹಾಗೂ ಕಳವಳಗಳನ್ನು ರಾಷ್ಟ್ರದ ಗಮನಕ್ಕೆ ತರುವ ಪ್ರಯತ್ನವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯ ಸಮ್ಮತ ಪ್ರಕ್ರಿಯೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಈ ಚಳವಳಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಆಯೋಜಿಸಿರುವ ಮುಕ್ತ ಸಂವಾದಕ್ಕೆ ಸಾಮಾಜಿಕ ಜಾಲತಾಣಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕ ಯುಪಿಎಸ್ ಸಿ ಆಕಾಂಕ್ಷೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಭಾಗವಹಿಸಲು ಆಸಕ್ತಿ ತೋರಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅನುಭವಗಳು, ಸಲಹೆಗಳು ಮತ್ತು ಸಮಸ್ಯೆಗಳನ್ನು ನೇರವಾಗಿ ಹಂಚಿಕೊಳ್ಳಲು ಈ ವೇದಿಕೆ ನೆರವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರದಿಂದ ಸ್ಪಷ್ಟ ಕ್ರಮ ಕೈಗೊಳ್ಳುವವರೆಗೆ ಶಾಂತಿಯುತವಾಗಿ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಂಘಟಕರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು,ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರನ್ನು ಒಳಗೊಂಡ ಮತ್ತಷ್ಟು ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ವ್ಯಾಪಕ ಚರ್ಚೆ ನಡೆಸುವ ಆಯೋಜನೆವೂ ಇದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.