Belagavi News:
ಪ್ರಧಾನಿ ನರೇಂದ್ರ ಮೋದಿ ಅವರಿಂದ ಮುಖ್ಯಮಂತ್ರಿ ಬೆಂಗಾಗಲು ಪಡೆ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಾರಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಭದ್ರತಾ ಕ್ರಮಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ನಡೆಯುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಅವರ ಬೆಂಗಾವಲು ಪಡೆಯ ಕಾರಣಗಳ ಸಂಖ್ಯೆ ಹಾಗೂ ಭದ್ರತಾ ವ್ಯವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ,"ಭದ್ರತೆ ಎನ್ನುವುದು ಕೇವಲ ವ್ಯಕ್ತಿಗಷ್ಟೇ ಸಂಬಂಧಿಸಿದ ವಿಷಯವಲ್ಲ,ಅದು ರಾಜ್ಯದ ಆಡಳಿತ ವ್ಯವಸ್ಥೆಯ ಭಾಗವು ಆಗಿದೆ"ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಪ್ರಧಾನಿ ಮೋದಿ ಕೆಲಸ ಸಂದರ್ಭಗಳಲ್ಲಿ ಸರಳತೆಯನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿಎಂ ಭದ್ರತಾ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯಿಂದ ತಕ್ಷಣವೇ ಯಾವುದೇ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಈ ವಿಷಯ ವೈರಲ್ ಆಗಿದ್ದು, ಜನರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ಭದ್ರತೆ ಮುಖ್ಯ ಎಂದು ಅಭಿಪ್ರಾಯಪಟ್ಟರೆ,ಇನ್ನೂ ಕೆಲವರು ಸಾರ್ವಜನಿಕ ಹಣದ ಉಳಿತಾಯದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ಸಾಧ್ಯ ಸಿದ್ದರಾಮಯ್ಯ ನೀಡಿದ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು,ಮುಂದಿನ ದಿನಗಳಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.
ಇಂಧನ ಮಿತ ವ್ಯಯಕ್ಕೆ ದೇಶದ ಜನತೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಖುದ್ದು ತಮ್ಮ ಬೆಂಗಾವಲು ಪಡೆ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಿ ಮಾದರಿಯಾಗಿದ್ದಾರೆ. ಈ ಬೆಳವಣಿಗೆಯ ಬೆನ್ನೆಲೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಕಾನ್ವಯ್ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಈ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಭದ್ರತಾಶ್ರಮಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ನಿರ್ಧಾರವಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. "ಮುಖ್ಯಮಂತ್ರಿಗಳ ಭದ್ರತೆ ಎನ್ನುವುದು ಕೇವಲ ವೈಯಕ್ತಿಕ ವಿಷಯವಲ್ಲ, ಅದು ರಾಜ್ಯದ ಆಡಳಿತ ವ್ಯವಸ್ಥೆಯ ಭಾಗ" ಎಂದು ಸಿಎಂ ಹೇಳಿದ್ದಾರೆ.
ಪ್ರಧಾನಿ ಮೋದಿ ಇಂಧನ ಉಳಿತಾಯ ಹಾಗೂ ಸರಳ ಆಡಳಿತ ಸಂದೇಶ ನೀಡುತ್ತಿರುವ ಸಂದರ್ಭದಲ್ಲಿ, ರಾಜ್ಯಗಳಲ್ಲಿಯೂ ಇದೇ ರೀತಿ ಕ್ರಮ ಜಾರಿಯಾಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯಿಂದ ತಕ್ಷಣವೇ ಯಾವುದೇ ಬದಲಾವಣೆ ಸಾಧ್ಯತೆ ಕಾಣಿಸದಿದ್ದರೂ,ಈ ವಿಚಾರ ಜನರ ಗಮನ ಸೆಳೆದಿದೆ.
ಸಾಮಾಜಿಕ ಜಾಲತಾಣಗಳಲ್ಲೂ ಈ ವಿಷಯ ಚರ್ಚೆಗೆ ಗ್ರಾಸವಾಗಿದ್ದು, ಕೆಲವರು ಭದ್ರತೆ ಮುಖ್ಯ ಎಂದು ಅಭಿಪ್ರಾಯಪಟ್ಟರೆ,ಇನ್ನೂ ಕೆಲವರು ಸರ್ಕಾರದ ವೆಚ್ಚ ಪಡಿತದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ. ಒಟ್ಟಿನಲ್ಲಿ ಸಿಎಂ ನೀಡಿದ ಪ್ರತಿಕ್ರಿಯೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಮಿತ ವ್ಯಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಪ್ರಧಾನಿಯವರು ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡಿರುವುದು ತಾತ್ಕಾಲಿಕ ಕ್ರಮವಷ್ಟೇ ಎಂದು ಹೇಳಿದವರು, ಇಂಧನ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಅಗತ್ಯವಿದೆಯೆಂದು ಅಭಿಪ್ರಾಯಪಟ್ಟರು.
ಇಂಧನ ಸಮಸ್ಯೆಗೆ ಕೇವಲ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಮಾತ್ರ ಬಗೆಹರಿಸಲು ಸಾಧ್ಯವಿಲ್ಲ. ಬೇರೆ ದೇಶಗಳೊಂದಿಗೆ ಸಮಲೋಚನೆ ನಡೆಸಿ ದೀರ್ಘಕಾಲಿಕ ಹಾಗೂ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು"ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಧಾನಿ ಮೋದಿ ಇಂಧನ ಉಳಿತಾಯಕ್ಕೆ ಕರೆ ನೀಡಿರುವ ಬೆನ್ನಲ್ಲೇ ಸಿಎಂ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇಂಧನ ಬಿಕ್ಕಟ್ಟು, ಜಾಗತಿಕ ತೈಲ ಬೆಲೆ ಏರಿಕೆ ಮತ್ತು ಸರ್ಕಾರಗಳ ಮುಂದಿನ ಕ್ರಮಗಳ ಬಗ್ಗೆ ಈಗ ಹೊಸ ಚರ್ಚೆ ಆರಂಭವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲೂ ಸಿದ್ದರಾಮಯ್ಯ ಹೇಳಿದ ಹೇಳಿಕೆ ವೈರಲ್ ಆಗಿದ್ದು, ಕೆಲವರು ಅವರ ಅಭಿಪ್ರಾಯಕ್ಕೆ ಬೆಂಬಲ ಸೂಚಿಸುತ್ತಿದ್ದರು. ಇನ್ನೂ ಕೆಲವರು ತಾತ್ಕಾಲಿಕ ಕ್ರಮಗಳು ಅಗತ್ಯವೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಇಂಧನ ಬಿಕ್ಕಟ್ಟಿನ ಕುರಿತು ಸಿಎಂ ನೀಡಿದ ಪ್ರತಿಕ್ರಿಯೆ ಇದೀಗ ಜನರ ಗಮನ ಸೆಳೆದಿದೆ.
Also Read:
ಹಿಜಾಬ್ ನಿಷೇಧ ಹಿಂಪಡೆದ ಕರ್ನಾಟಕ ಸರ್ಕಾರ