Belagavi News:
ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ನೀಡುವ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧವಿಲ್ಲದ ರಾಜಕೀಯ ಮತ್ತು ಇತರ ವಿಚಾರಗಳನ್ನು ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಲವರ ಬಗ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಿಎಎ, ಎನ್ ಆರ್ ಸಿ ಸೇರಿದಂತೆ ಬೇರೆ ವಿಷಯಗಳನ್ನು ನೀಟ್ ವಿಚಾರದೊಂದಿಗೆ ಜೋಡಿಸಲಾಗುತ್ತಿದೆ ಎಂದು ಟೀಕಿಸಿದರು.
"ನೀಟ್ ಪರೀಕ್ಷೆಗೂ ಇಂತಹ ವಿಷಯಗಳಿಗೂ ಏನು ಸಂಬಂಧ?" ಎಂದು ಪ್ರಶ್ನಿಸಿದ ಅವರು, ಪ್ರತಿಭಟನೆಯ ಉದ್ದೇಶ ವಿದ್ಯಾರ್ಥಿಗಳ ಸಮಸ್ಯೆಯೇ ಅಥವಾ ಬೇರೆ ರಾಜಕೀಯ ಅಜೆಂಡಾವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಘೋಷಣೆಗಳು ಕೇಳಿಬಂದಿರುವುದನ್ನು ಉಲ್ಲೇಖಿಸಿದ ಸಿ.ಟಿ. ರವಿ, ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂದು ಆರೋಪಿಸಿದರು.
ಭಾರತ ವಿರೋಧಿ ಘೋಷಣೆಗಳನ್ನು ನೀಡಿದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರವನ್ನು ಮಾತ್ರ ಚರ್ಚಿಸಬೇಕು ಎಂದು ಹೇಳಿದರು.
ಸಿ.ಟಿ. ರವಿ ಅವರು ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮಾಡಿದರು ಪರ- ವಿರೋಧ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಇದೆ.