Belagavi News:
ಬೆಂಗಳೂರು: ದೇಶದಲ್ಲಿ ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಇಂದು ರಾಷ್ಟ್ರದಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.
ಬೆಂಗಳೂರಿಂದ ಮುಖ್ಯಮಂತ್ರಿ ನಿವಾಸದಲ್ಲೇ ರಾಜ್ಯ ಮಟ್ಟದ ಪೋಲಿಯೋ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ದೊರೆತಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, 1972 ರಲ್ಲೇ ಇಂದರಾ ಗಾಂಧಿಯವರು ದೇಶದಲ್ಲಿ ಪೋಲಿಯೋ ನಿರ್ಮೂಲನೆಗೆ ಮಹತ್ವದ ಮುನ್ನುಡಿ ಬರೆದಿದ್ದರು ಎಂದು ಸ್ಮರಿಸಿದರು.
ಪೋಲಿಯೋ ಸಂಪೂರ್ಣ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ಕ್ರಮ ಕೈಗೊಂಡಿದ್ದು, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಲಸಿಕೆ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ ಎಂದು ಅವರು ಹೇಳಿದರು ಪೋಷಕರು ಯಾವುದೇ ತಪ್ಪು ಕಲ್ಪನೆಗಳಿಗೆ ಒಳಗಾಗದೆ ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಅಭಿಯಾನದ ಮೂಲಕ ರಾಜ್ಯದಲ್ಲಿ ಪೋಲಿಯೋ ಮುಕ್ತ ಪರಿಸರವನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಮಕ್ಕಳ ಭವಿಷ್ಯದಲ್ಲಿ ಯಾವುದೇ ರೀತಿ ಆರೋಗ್ಯ ಸಮಸ್ಯೆಗಳು ಎದುರಾಗಬಾರದು ಎಂಬ ದೂರದೃಷ್ಟಿಯಿಂದ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಲಸಿಕೆ ಮೂಲಕ ಮಕ್ಕಳನ್ನು ಮುನ್ನೆಚ್ಚರಿಕೆಯಿಂದ ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
ನಮ್ಮ ಅಕ್ಕಪಕ್ಕದ ಕೆಲವು ದೇಶಗಳಲ್ಲಿ ಇಂದಿಗೂ ಪೋಲಿಯೋ ಸಮಸ್ಯೆ ಜೀವಂತವಾಗಿದ್ದು, ಅಂತಹ ಸ್ಥಿತಿ ನಮ್ಮ ರಾಜ್ಯ ಅಥವಾ ದೇಶದಲ್ಲಿ ಮರುಕಳಿಸಬಾರದು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಅವರು ಎಚ್ಚರಿಸಿದರು. ಪೋಷಕರು ಯಾವುದೇ ನಿರ್ಲಕ್ಷ್ಯ ಮಾಡದೆ ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು.
ಪೋಲಿಯೋ ನಿರ್ಮೂಲನೆಗಾಗಿ ಆರೋಗ್ಯ ಇಲಾಖೆ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಸಾರ್ವಜನಿಕ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ನಿವಾಸದಿಂದಲೇ ಅಭಿಯಾನ ಆರಂಭಿಸಲು ಅಧಿಕಾರಿಗಳು ನಿರ್ಧರಿಸಿದ್ದರು. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉತ್ತಮ ಸಹಕಾರ ನೀಡಿರುವುದನ್ನು ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಶ್ಲಾಘಿಸಿದ್ದಾರೆ.
ವಿಶೇಷವಾಗಿ ಹಳ್ಳಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿರುವ ಪ್ರತಿಯೊಂದು ಮಗುವಿನ ಪೋಲಿಯೋ ಲಸಿಕೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೋಷಕರು ಯಾವುದೇ ಹಿಂಜರಿಕೆ ಅಥವಾ ನಿರ್ಲಕ್ಷ್ಯ ಮಾಡದೆ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
Also Read:
ಬೆಳಗ್ಗೆ ಡ್ರೈ ಫ್ರೂಟ್ಸ್ ತಿನ್ನುವುದು ಸರಿಯೇ ? ತಿಳಿದುಕೊಳ್ಳಿ ಸರಿಯಾದ ವಿಧಾನ