Belagavi news:
ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆ ಯಾರಿಂದ ಆಗಲಿದೆ ಎಂಬ ಪ್ರಶ್ನೆ ಇದೀಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಡುವೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ರಾಜಕೀಯ ವಲಯದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ.
ಈ ನಡುವೆ ಬಿ.ಎಲ್.ಸಂತೋಷ್ ಅವರ ಪೋಸ್ಟ್ ಅನ್ನು ರಾಜಕೀಯವಾಗಿ ಮಹತ್ವದ ಸಂದೇಶವೆಂದು ವ್ಯಾಖ್ಯಾನಿಸಲಾಗುತ್ತಿದ್ದು, ಸರ್ಕಾರ ರಚನೆ ಕುರಿತ ಲೆಕ್ಕಾಚಾರಗಳಿಗೆ ಹೊಸ ಆಯಾಮ ನೀಡಿದೆ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಪೋಸ್ಟ್ ನಲ್ಲಿ ನೇರ ಉಲ್ಲೇಖಗಳಿಲ್ಲದಿದ್ದರೂ, ಅದರ ಒಳಾರ್ಥದ ಬಗ್ಗೆ ವಿವಿಧ ರಾಜಕೀಯ ಶಿಬಿರಗಳಲ್ಲಿ ಚರ್ಚೆ ಜೋರಾಗಿದೆ.
ತಮಿಳುನಾಡಿನಲ್ಲಿ ಯಾರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಆದರೆ ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಅನಿಶ್ಚಿತತೆಯ ಮತ್ತು ಕುತೂಹವನ್ನು ಹೆಚ್ಚಿಸಿವೆ. ಮುಂದಿನ ಕೆಲವು ದಿನಗಳಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳು ತೀರ್ಮಾನಾತ್ಮಕ ವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ತಮಿಳುನಾಡು ಅತಂತ್ರ ಫಲಿತಾಂಶ: ಸರ್ಕಾರ ರಚನೆ ಯಾರಿಂದ ಸಾಧ್ಯ? :
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರ ಬಿದ್ದಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. 234 ಸದಸ್ಯರ ವಿಧಾನಸಭೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರು, ಸರ್ಕಾರ ರಚನೆಗೆ ಅಗತ್ಯವಾದ 118 ಸ್ಥಾನಗಳ ಬಹುಮತ ಸಾಧಿಸಲು ವಿಫಲವಾಗಿದೆ. ಈ ಹಿನ್ನೆಲೆ ಸರ್ಕಾರ ರಚನೆ ಕುರಿತು ಅನಿಶ್ಚಿತತೆ ಮುಂದುವರೆದಿದೆ.
ಬಹುಮತ ಕೊರತೆಯಿಂದಾಗಿ ಟಿವಿಕೆ ಪಕ್ಷಕ್ಕೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಅವಕಾಶ ಸಿಗದ ಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದ ರಾಜ್ಯಪಾಲರಿಂದ ಸರ್ಕಾರ ರಚನೆಗೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆ ಇನ್ನೂ ಸ್ಪಷ್ಟ ಅನುಮತಿ ನೀಡಲಾಗಿಲ್ಲ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಯಲ್ಲಿದೆ.
ಇದೇ ವೇಳೆ ರಾಜಕೀಯ ಲೆಕ್ಕಾಚಾರಗಳು ತೀವ್ರಗೊಂಡಿದ್ದು, ಎಐಎಡಿಎಂಕೆ ತನ್ನ ಪರಂಪರೆಯನ್ನು ವಿರೋಧಿ ಡಿಎಂಕೆ ಜೊತೆ ಕೈಜೋಡಿಸಿ ಸರ್ಕಾರ ರಚನೆಗೆ ಮುಂದಾಗಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದಕ್ಕೆ ಪೂರಕವಾಗಿ ಕೆಲವು ಶಾಸಕರು ರೆಸಾರ್ಟ್ ಗಳಗೆ ತರಾ ಅಂತರಗೊಂಡಿರುವ ರೆಸಾರ್ಟ್ ಪೊಲಿಟಿಕ್ಸ್ ಮತ್ತೆ ತಮಿಳುನಾಡು ರಾಜಕೀಯ ಮರಳಿದೆ.
ಈ ಬೆಳವಣಿಗೆಗಳ ನಡುವೆ ಸರಕಾರ ರಚನೆ ಯಾರಿಂದ ಆಗಲಿದೆ ಎಂಬ ಪ್ರಶ್ನೆ ರಾಜಕೀಯ ವಲಯದ ಪ್ರಮುಖ ಚರ್ಚಾ ವಿಷಯವಾಗಿದೆ. ಯಾರು ಕಷ್ಟ ಬಹುಮತ ಹೊಂದಿಲ್ಲದ ಹಿನ್ನೆಲೆಯಲ್ಲಿ ಮುಂದಿನ ಮೈತ್ರಿ ರಾಜಕೀಯವೇ ತೀರ್ಮಾನಕಾರಿ ಪಾತ್ರ ವಹಿಸುವ ಸಾಧ್ಯತೆ ಇದೆ.
ಈ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರದರ್ಶನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ಸಾಮಾಜಿಕ ಜಾಲತಾಣದ ಟ್ವಿಸ್ಟ್ ರಾಜಕೀಯ ಸಂಚನಕ್ಕೆ ಕಾರಣವಾಗಿದೆ. ಅವರ ಪೋಸ್ಟ್ನ ಒಳಾರ್ಥವನ್ನು ವಿವಿಧ ರಾಜಕೀಯ ಶಿಬಿರಗಳು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದು, ಸರ್ಕಾರ ರಚನೆ ಲೆಕ್ಕಾಚಾರಗಳಿಗೆ ಹೊಸ ತಿರುವ ನೀಡಿದೆ ಎಂದು ಹೇಳಲಾಗುತ್ತಿದೆ.
ತಮಿಳುನಾಡು ರಾಜಕೀಯದಲ್ಲಿ ಮುಂದಿನ ಕೆಲವು ದಿನಗಳು ಅತ್ಯಂತ ನಿರ್ಣಾಯಕವಾಗಲಿದ್ದು, ಯಾರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂಬ ಕುತೂಹಲ ರಾಜ್ಯದ್ಯಂತ ಹೆಚ್ಚಾಗಿದೆ.
ತಮಿಳುನಾಡು ಸರ್ಕಾರ ರಚನೆ ಕಸರತ್ತು:
ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ನಡೆಯುತ್ತಿರುವ ಕಸರತ್ತುಗಳ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸರ್ಕಾರ ರಚನೆ ಯಾರಿಂದ ಆಗಲಿದೆ ಎಂಬ ಕುತೂಹಲ ಹೆಚ್ಚುತ್ತಿರುವ ಸಂದರ್ಭದಲ್ಲಿ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.
ಟಿವಿಕೆ ಪಕ್ಷಕ್ಕೆ ಪರೋಕ್ಷವಾಗಿ ಬೆಂಬಲ ಸೂಚಿಸುತ್ತಿರುವ ಕಾಂಗ್ರೆಸ್ನ ನಿಲುವಿಗೆ ಇದು ಟಾಂಗಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಮೈತ್ರಿ ಸಮೀಕರಣಗಳು ತೀವ್ರ ಚರ್ಚೆಯಲ್ಲಿವೆ.
234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ ಪಕ್ಷ 108 ಸ್ಥಾನಗಳನ್ನು ಪಡೆದಿದ್ದರೂ, ಬಹುಮತಕ್ಕೆ ಅಗತ್ಯವಾದ 118 ಸ್ಥಾನಗಳ ಗಡಿದಾಟಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳ ಬೆಂಬಲ ನಿರ್ಣಾಯಕವಾಗುವ ಸಾಧ್ಯತೆ ಇದೆ.
ಇದೇ ಸಂದರ್ಭದಲ್ಲಿ ಎಐಎಡಿಎಂಕೆ ಹಾಗೂ ಇತರ ಪಕ್ಷಗಳ ನಡೆ ಕೂಡ ಕುತೂಹಲ ಕೆರಳಿಸಿದ್ದು, ರಾಜಕೀಯ ಲೆಕ್ಕಾಚಾರಗಳು ದಿನೇ ದಿನೇ ಬದಲಾಗುತ್ತಿವೆ. ರೆಸಾರ್ಟ್ ರಾಜಕೀಯದಿಂದ ಹಿಡಿದು ಹೊಸ ಮೈತ್ರಿ ಚರ್ಚೆಗಳವರೆಗೆ ತಮಿಳುನಾಡು ರಾಜಕೀಯದಲ್ಲಿ ಅನಿಶ್ಚಿತತೆ ಮುಂದುವರೆದಿದೆ.
ಬಿ.ಎಲ್.ಸಂತೋಷ್ ಅವರ ಈ ಪೋಸ್ಟ್ ಇದೀಗ ಸಮಾಜದ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸರ್ಕಾರ ರಚನೆ ಪ್ರಕ್ರಿಯೆಯ ಮೇಲೆ ಹೊಸ ಚರ್ಚೆಗಳನ್ನು ಹುಟ್ಟುಹಾಕಿದೆ. ಮುಂದಿನ ದಿನಗಳಲ್ಲಿ ತಮಿಳುನಾಡು ರಾಜಕೀಯ ಯಾವ ತಿರುಗು ಪಡೆಯಲಿದೆ ಎಂಬುದರತ್ತ ಎಲ್ಲರ ಗಮನ ಹರಿದಿದೆ.
Also Read:
ಶುಕ್ರವಾರದ ಪಂಚಾಂಗ ದಿನ ಭವಿಷ್ಯ: ಸಂಬಂಧಗಳ ಬಗ್ಗೆ ತಿಳಿಯಬೇಕಾದ ಮುಖ್ಯ ವಿಷಯಗಳು