<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Trending

ಪಂಜಾಬ್ ಸಿಎಂ ಕುಡಿದಿದ್ದಾರೆ ಆರೋಪಿಸಿ ಹೊರ ನಡೆದ ಕಾಂಗ್ರೆಸ್

ಪಂಜಾಬ್ ಸಿಎಂ ಕುಡಿದಿದ್ದಾರೆ  ಆರೋಪಿಸಿ ಹೊರ ನಡೆದ ಕಾಂಗ್ರೆಸ್
Summary: There has been a huge uproar in Punjab politics, with the Congress alleging that the Chief Minister came to the House in a drunken state. In response, the Congress demanded that all MLAs be tested for alcohol.

Belagavi news:

ಪಂಜಾಬ್ ವಿಧಾನಸಭಾ ಅಧಿವೇಶನದಲ್ಲಿ ಇಂದು ಹೈಡ್ರಾಮ ನಡೆದು, ರಾಜಕೀಯ ವಾತಾವರಣ ಕಾವೇರಿದೆ. ಮುಖ್ಯಮಂತ್ರಿ ಭಗವಂತ್ ಮಾಲ್ ಸದನದೊಳಗೆ ಕುಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಎಲ್ಲಾ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದ್ದರು.

ಈ ಬೇಡಿಕೆಗೆ ಆಡಳಿತ ಪಕ್ಷದಿಂದ ಸ್ಪಷ್ಟ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ವಿಧಾನಸಭೆಯಿಂದ ವಾಕ್ ಔಟ್ ನಡೆಸಿದೆ. ಇದರಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಗುವಾದ ನಡೆದಿದೆ.

ಈ ಘಟನೆ ಪಂಜಾಬ್ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿಷಯ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಸಾರ್ವಜನಿಕ ವಲಯದಲ್ಲಿಯೂ ಈ ಆರೋಪ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದಿಂದ ಸ್ಪಷ್ಟನೇ ನಿರೀಕ್ಷಿಸಲಾಗುತ್ತಿದೆ.

Sponsored

ಪಂಜಾಬ್ ವಿಧಾನಸಭೆಯಲ್ಲಿ ಇಂದು ನಡೆದ ವಿಶೇಷ ಅಧಿವೇಶನದ ರಾಜಕೀಯ ಹೈಡ್ರಾಮಾಗಿ ಸಾಕ್ಷಿಯಾಗಿದೆ. ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಕರೆಯಲಾಗಿದ್ದ ಈ ಅಧಿವೇಶನದ ಆರಂಭದಲ್ಲಿ ಸೌಹಾರ್ದಯುತವಾಗಿ ನಡೆದಿದ್ದರೂ, ಬಳಿಕ ತೀವ್ರ ವಾಗ್ವಾದಕ್ಕೆ ತಿರುಗಿದೆ.

ಕಾಂಗ್ರೆಸ್ ಮತ್ತು ಅಕಾಲಿ ದಳ ಪಕ್ಷಗಳು ಮುಖ್ಯಮಂತ್ರಿ ಭಗವಂತ ಮಾನ್ ಸದನದ ಕಲಾಪಗಳ ವೇಳೆ ಕುಡಿದ ಸ್ಥಿತಿಯಲ್ಲಿ ಇದ್ದಾರೆ ಎಂದು ಗಂಭೀರ ಆರೋಪ ಮಾಡಿವೆ. ಈ ಹಿನ್ನಲೆ ಸದನದಲ್ಲಿರುವ ಎಲ್ಲಾ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಘಟನೆಗೆ ತಿರುವು ಬಂದಿದ್ದು, ಕಾಂಗ್ರೆಸ್ ಶಾಸಕ ಸುಖ್ ಪಾಲ್ ಸಿಂಗ್ ಖೈರಾ ಸದನದಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದುದಕ್ಕೆ, ಸಿಎಂ ಆಕ್ಷೇಪ ವ್ಯಕ್ತಪಡಿಸಿದಾಗ. ಇದರಿಂದ ಮಾತಿನ ಚಕಮಕಿ ಹೆಚ್ಚಾಗಿ, ಚರ್ಚೆಗಳು ತೀವ್ರಗೊಂಡವು.

ಈ ಬೇಡಿಕೆ ಅಂಗೀಕರಿಸಿದ ಹಿನ್ನೆಲೆ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸಭಾ ತ್ಯಾಗ ಮಾಡಿದರು. ಇದರ ಪರಿಣಾಮ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ರಾಜಕೀಯ ಘರ್ಷಣೆ ನಡೆದಿದೆ.

Sponsored

ಕಾರ್ಮಿಕ ದಿನದಂದು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲು ಕರೆಯಲಾಗಿದ್ದ ಅಧಿವೇಶನ ಈ ವಿವಾದದಿಂದ ಪ್ರಭಾವಿತವಾಗಿದ್ದು, ಪಂಜಾಬ್ ರಾಜ್ಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಪಂಜಾಬ್ ವಿಧಾನಸಭೆಯಲ್ಲಿ ಇಂದು ನಡೆದ ವಿಶೇಷ ಅಧಿವೇಶನ ಇವರ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಸದನದಲ್ಲಿ ಶಿಷ್ಟಾಚಾರ ಕುರಿತು ನಡೆದ ಚರ್ಚೆ ಸದನದಲ್ಲಿ ಮುಖ್ಯಮಂತ್ರಿ ಭಗವಂತ್ ಮಾಂತ್ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ತೀವ್ರ ವಾಗ್ವಾದ ಉಂಟಾಗಿತ್ತು.

ಶಿಷ್ಟಾಚಾರ ಪಾಲನೆ ಕುರಿತು ಮಾತನಾಡಿದ ಸಿಎಂ ಭಗವಾನ್, ಸದನದಲ್ಲಿ ಯಾರು ಕಾಲುಗಳನ್ನು ಚಾಚಿ ಕುಳಿತುಕೊಳ್ಳಬಾರದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಸುಕ್ ಪಾಲ್ ಸಿಂಗ್ ಖೈರಾ ಇಂದಿನ ಅಧಿವೇಶನದಲ್ಲಿ ಸಿಎಂ ಪತ್ನಿ ಸಂದರ್ಶಕರ ಗ್ಯಾಲರಿಯನ್ನು ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದರು ಎಂದು ಹೇಳಿಕೆ ನೀಡಿದರು.

ಇದಕ್ಕೆ ತೀವ್ರ ಪ್ರತಿಕ್ರಿಸಿದ ಸಿಎಂ ಭಗವಾನ್ ಮಾನ್ ಅವರು ತಕ್ಷಣ ತಮ್ಮನ್ನು ಸರಿಪಡಿಸಿಕೊಂಡರು. ಅವರು ಸದನದ ಸದಸ್ಯರಲ್ಲ. ನೀವು ನನ್ನ ಮಗಳನ್ನು ಸಹ ಟಾರ್ಗೆಟ್ ಮಾಡಿದ್ದೀರಿ. ಇವರೆಲ್ಲಾ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ, ಸ್ಟಿಕರ್ ಸಾಹೇಬ್, ವಿಧಾನಸಭೆಯ ಕುರ್ಚಿಯಲ್ಲಿ ಇವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ಟೀಕಿಸಿದರು.

Sponsored

ಇದಾದ ಬಳಿಕ ಸದನದ ಚರ್ಚೆ ಮತ್ತೊಂದು ದಿಕ್ಕಿಗೆ ತಿರುಗಿದ್ದು, ಕಾಂಗ್ರೆಸ್ ನಾಯಕ ಸುಖ್ ಪಾಲ್ ಸಿಂಗ್ ಖೈರಾ ಸಿಎಂ ಸದನಕ್ಕೆ ಕುಡಿದು ಬಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಬೆಂಬಲಿಸಿದರು.

ಬಜ್ವಾ ಅವರು ಮಾತನಾಡಿ, ಮುಖ್ಯಮಂತ್ರಿಗಳೇ ಕುಡಿದ ಸಿಕ್ತಿಯಲ್ಲಿ ಸದನಕ್ಕೆ ಬಂದಿದ್ದಾರೆ ಎಂಬ ಆರೋಪ ಗಂಭೀರವಾಗಿದೆ. ರಾಜ್ಯದ ಮುಖ್ಯಸ್ಥರೇ ಸರಿಯಾದ ಸ್ಥಿತಿಯಲ್ಲಿ ಇಲ್ಲದಿದ್ದರೆ ಅಧಿವೇಶನ ನಡೆಸುವ ಉದ್ದೇಶವೇನು? ಸದನದಲ್ಲಿರುವ ಎಲ್ಲಾ ಸದಸ್ಯರಿಗೂ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಘಟನೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಶಾಸಕರು ಸಭಾತ್ಯಾಗ ನಡೆಸಿದ್ದು, ಸ್ಪೀಕರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸದನದಲ್ಲಿ ಮಧ್ಯ ಪರೀಕ್ಷೆ ಬೇಡಿಕೆ ಮತ್ತು ಸಿಎಂ ವಿರುದ್ಧದ ಆರೋಪಗಳು ಭಾರಿ ವಾಗ್ವಾದಕ್ಕೆ ಕಾರಣವಾಗಿದೆ.

ಪಂಜಾಬ್ ರಾಜಕೀಯದಲ್ಲಿ ಈ ಘಟನೆ ಹೊಸ ವಿವಾದವನ್ನು ಹುಟ್ಟು ಹಾಕಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.

Sponsored

Also Read:

ಎಸಿ ಏರ್ ಕೂಲರ್ ಬಳಸುವಾಗ ಈ ತಪ್ಪು ಬೇಡ: ಸುರಕ್ಷತಾ ಟಿಪ್ಸ್ ಇಲ್ಲಿವೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online