Belagavi News:
ಕೋವಿಡ್ ಸೋಂಕಿನ ಮುನ್ನೆಚ್ಚರಿಕೆ ಕ್ರಮವಾಗಿ ಪಾವಗಡ - ಆಂಧ್ರಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್ ಪೋಸ್ಟ್ ಸ್ಥಾಪಿಸಿ, ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಗಿದೆ.
ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದ್ದು, ಜ್ವರ, ಕೆಮ್ಮು ಸೇರಿದಂತೆ ಕೋವಿಡ್ ಲಕ್ಷಣಗಳಿರುವವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಸಿಬ್ಬಂದಿ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೋವಿಡ್ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಗತ್ಯವಿದ್ದರೆ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ ಕಾಪಾಡುವುದು ಹಾಗೂ ಆರೋಗ್ಯ ಸಮಸ್ಯೆ ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಆಂಧ್ರದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ - ಆಂಧ್ರ ಗಡಿಯಲ್ಲಿ ತೀವ್ರ ತಪಾಸಣೆ :
ಆಂಧ್ರಪ್ರದೇಶದಲ್ಲಿ ಕೋವಿಡ್ - 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕರ್ನಾಟಕ - ಆಂಧ್ರ ಗಡಿಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಿದೆ.
ಆಂಧ್ರಪ್ರದೇಶದಲ್ಲಿ ಈಗಾಗಲೇ ಇಬ್ಬರು ಶಂಕಿತ ಕೋವಿಡ್ ಸೋಂಕಿತರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಂಬತಕ್ಕೂ ಹೆಚ್ಚು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆಯಿಂದ ಕರ್ನಾಟಕಕ್ಕೂ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದೆ.
ಆಂಧ್ರಪ್ರದೇಶದಿಂದ ಪಾವಗಡ ಮೂಲಕ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಸೇರಿದಂತೆ ಕೋವಿಡ್ ಲಕ್ಷಣಗಳಿರುವವರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಗಡಿಯಲ್ಲಿ ನಿರಂತರವಾಗಿ ತಪಾಸಣೆ ನಡೆಸುತ್ತಿದ್ದು, ಅಗತ್ಯವಿದ್ದರೆ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.
ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ, ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಆರೋಗ್ಯದಲ್ಲಿ ಯಾವುದೇ ಅಸಹಜ ಲಕ್ಷಣಗಳು ಕಂಡು ಬಂದರೆ ತಕ್ಷಣ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪಾವಗಡ ಗಡಿಯಲ್ಲಿ ಕೋವಿಡ್ ಕಟ್ಟೆಚ್ಚರ - ವಾಹನ ತಡೆದು ಆರೋಗ್ಯ ತಪಾಸಣೆ :
ತುಮಕೂರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ, ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಹಿನ್ನೆಲೆ ಪಾವಗಡ ತಾಲೂಕಿನ ಕರ್ನಾಟಕ - ಆಂಧ್ರ ಗಡಿಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ.
ಆಂಧ್ರಪ್ರದೇಶದಿಂದ ಪಾವಗಡದ ಕಡೆಗೆ ಆಗಮಿಸುವ ವಾಹನಗಳನ್ನು ಗಡಿಯಲ್ಲಿ ತಡೆದು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ವಿಶೇಷವಾಗಿ ಜ್ವರ, ಕೆಮ್ಮು ಹಾಗೂ ಇತರೆ ಕೋವಿಡ್ ಲಕ್ಷಣಗಳಿರುವವರನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜ್ಯವಂತಿ ಪ್ರವೇಶ ಮಾರ್ಗದಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಇದಲ್ಲದೆ ಗಡಿಭಾಗದ ಇನ್ನೂ ಐದು ಪ್ರಮುಖ ಸ್ಥಳಗಳಲ್ಲಿ ವಿಶೇಷ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಯಾಣಿಕರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲಾಗಿದೆ.
ಕೋವಿಡ್ ಸೋಂಕು ಕರ್ನಾಟಕಕ್ಕೆ ಹರಡದಂತೆ ತಡೆಯುವ ಉದ್ದೇಶದಿಂದ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಸಮನ್ವಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಸಾರ್ವಜನಿಕರು ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪಾವಗಡ ಗಡಿಯಲ್ಲಿ ಆರೋಗ್ಯ ತಪಾಸಣೆ ಕಟ್ಟುನಿಟ್ಟು - ಜ್ವರ ಕಂಡು ಬಂದರೆ ತಕ್ಷಣ ಚಿಕಿತ್ಸೆ, ಅಗತ್ಯವಿದ್ದರೆ ಆಸ್ಪತ್ರೆಗೆ ರೆಫರ್ :
ಆಂಧ್ರಪ್ರದೇಶದಿಂದ ಆಗಮಿಸುವ ಪ್ರಯಾಣಿಕರು ದೇಹದ ಉಷ್ಣಾಂಶವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಪರಿಶೀಲಿಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಮತ್ತು ಇತ್ತೀಚಿನ ಪ್ರಯಾಣದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ತಪಾಸಣೆ ವೇಳೆ ಜ್ವರ ಅಥವಾ ಕೋವಿಡ್ ಗೆ ಸಂಬಂಧಿಸಿದ ಲಕ್ಷಣಗಳು ಕಂಡು ಬಂದರೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಪರೀಕ್ಷೆ ಮತ್ತು ಚಿಕಿತ್ಸೆಗೆ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಿದೆ.
ಕೋವಿಡ್ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಗಡಿಭಾಗದಲ್ಲಿ ನಿರಂತರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಆರೋಗ್ಯ ಸಿಬ್ಬಂದಿಯೊಂದಿಗೆ ಸಹಕರಿಸಿ ತಪಾಸಣೆಗೆ ಒಳಗಾಗುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯಿಂದ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.