ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸಿಎಂ ಬದಲಾವಣೆ ವಿಚಾರದ ಬಗ್ಗೆ ತಮ್ಮ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿಯವರನ್ನು ಮೈಸೂರಿನಲ್ಲಿ ಭೇಟಿಯಾದ ಏನು ಮಾತನಾಡಿದರೆ ಎಂಬ ಕುತೂಹಲ ಹೆಚ್ಚಾಗಿದೆ.ಅದನ್ನು ತಿಳಿದುಕೊಳ್ಳಲು ಡಿಕೆ ಶಿವಕುಮಾರ್ ಅವರು ಬುಧವಾರ ನಿಗೂಢ ಪೋಸ್ಟ್ ನಲ್ಲಿ ಏನಿದೆ ಎಂದು ತಿಳಿದುಕೊಳ್ಳೋಣ.
ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. “ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ” ಎಂದು ಹೇಳಿದ್ದಾರೆ. ರಾಜ್ಯದ ನಾಯಕತ್ವ ಸಮಸ್ಯೆಯನ್ನು ಬಗೆಹರಿಸಲು ಹೈಕಮಾಂಡ್ ಸಂಕ್ರಾಂತಿ ಹಬ್ಬದ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಶೀಘ್ರದಲ್ಲೇ ದೆಹಲಿಗೆ ಕರೆಯಲಾಗುವುದು .ಮಂಗಳವಾರ ಸಂಜೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆಗೆ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಈ ಬೆಳವಣಿಗೆಗಳು ಇನ್ನಷ್ಟು ಹೆಚ್ಚಾಗಿದೆ.
ರಾಹುಲ್ ಗಾಂಧಿ ಅವರು ಶಿವಕುಮಾರ್ ಅವರ ಆಪ್ತ ಮೂಲಗಳಿಗೆ ಚಿಂತಿಸಬೇಡಿ ಅವರನ್ನು ಶೀಘ್ರದಲ್ಲಿಯೇ ದೆಹಲಿಗೆ ಕರೆಯಲಾಗುವುದು ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮಂಗಳವಾರದಂದು ಎರಡು ಬಾರಿ ಮೈಸೂರಿಗೆ ಭೇಟಿ ನೀಡಿದರು, ಎರಡು ಬಾರಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಅಲ್ಲಿ ಹಾಜರಿದ್ದರು ಅವರು ಜೊತೆ ಸಂಕ್ಷಿಪ್ತ ಮಾತುಕತೆಯನ್ನು ನಡೆಸಿದರು. ಆಂತರಿಕ ಮೂಲಗಳು ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಅಪೇಕ್ಷೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಪಕ್ಷದ ಆಂತರಿಕ ಮೂಲಗಳ ಪ್ರಕಾರ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ರಾಜ್ಯದ ಸಂಪುಟ ಪುನರ್ ರಚನೆಯನ್ನು ಮಾರ್ಚ್ ಮೊದಲನೇ ವಾರದಲ್ಲಿ ಆಗುವಂತೆ ಅನುಮೋದಿಸಲಿದೆ. ಸಿದ್ದರಾಮಯ್ಯನವರೇ ಸಿಎಂ ಆಗಿ 5 ವರ್ಷ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯನವರು ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು ನಾಯಕತ್ವದ ವಿಷಯದ ಬಗ್ಗೆ ಪಕ್ಷದೊಳಗೆ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದರು. ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿ ದೇವರಾಜ್ ಅರಸರ ದಾಖಲೆಯನ್ನು ಮೀರಿದ್ದಾರೆ .
ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಅವರು ಅಭಿನಂದನೆಯನ್ನು ಸಲ್ಲಿಸಿದರು ಮತ್ತು ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ಹೇಳಿದ್ದೇನೆಂದರೆ. ಅಂತಿಮ ನಿರ್ಧಾರವು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟದ್ದು ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಕುರ್ಚಿ ಕದನ ಇನ್ನು ಮುಂದುವರಿಯುತ್ತಲೇ.
ಇದೆ ಡಿಕೆ ಶಿವಕುಮಾರ್ ಅವರು ತಮ್ಮ ಅಭಿಪ್ರಾಯವನ್ನು ತಮ್ಮ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ “ಪ್ರಯತ್ನಗಳು ವಿಫಲವಾಗುವುದು ಆದರೆ ಪ್ರಾರ್ಥನೆಗಳು ಎಂದಿಗೂ ಆಗುವುದಿಲ್ಲ” ಎಂಬ ಸಂದೇಶವನ್ನು ಡಿಕೆ ಶಿವಕುಮಾರ್ ಅವರು ನೀಡುತ್ತಾರೆ . ನಾಯಕತ್ವದ ಬಗ್ಗೆ ಹೈಕಮಾಂಡ್ ಮುಂದಿನ ದಿನಗಳಲ್ಲಿ ನಿರ್ಮಾಣ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ಓದಿರಿ:
ಧಾರವಾಡದ ಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ