Belagavi News:
ದಾವಣಗೆರೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವರುಣನ ರೌದ್ರ ನರ್ತನಕ್ಕೆ ಹಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದ್ದು, ಅಡಿಕೆ ತೋಟಗಳು ಸಂಪೂರ್ಣ ನೆಲಸಮವಾಗಿವೆ. ಬಾರಿ ಗಾಳಿ ಮತ್ತು ಮಳೆಯಿಂದ ನೂರಾರು ಅಡಿಕೆ ಮರಗಳು ಉರುಳಿ ಬಿದ್ದ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಮಳೆ ಗಾಳಿಯ ತೀವ್ರತೆಗೆ ವಿದ್ಯುತ್ ವ್ಯಥೆಯವೂ ಕಾಣಿಸಿಕೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ.
ಅಡಿಕೆ ಬೆಳೆ ಮೇಲೆ ಅವಲಂಬಿತವಾಗಿದ್ದ ರೈತರು ಇದೀಗ ಭಾರಿ ನಷ್ಟದ ಆತಂಕದಲ್ಲಿದ್ದಾರೆ. ಹಲಬೇಡಿ ವರ್ಷಗಳ ಪರಿಶ್ರಮದಲ್ಲಿ ಬೆಳೆಸಿದ್ದ ಅಡಿಕೆ ತೋಟಗಳು ಕ್ಷಣಾರ್ಧದಲ್ಲಿ ಹಾಳಾಗುತ್ತಿವೆ. ರೈತರು ಸರ್ಕಾರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ನಷ್ಟ ಪರಿಶೀಲನೆ ನಡೆಸಿ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ಮತ್ತಷ್ಟು ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಪ್ರಕೃತಿ ವಿಕೋಪದಿಂದ ತತ್ತರಿಸಿರುವ ದಾವಣಗೆರೆ ಜನತೆ ಸರ್ಕಾರದ ನೆರವಿಗಾಗಿ ಕಾಯುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಬಾರಿ ಮಳೆ ಜಲಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಬೇಸಿಗೆ ಮಳೆಯೊಂದಿಗೆ ಹಾಲಿಕಲ್ಲು ಮಳೆಯೂ ಅಪ್ಪಳಿಸಿದ ಪರಿಣಾಮ ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ ಸಂಭವಿಸಿದೆ. ಗಾಳಿಯ ರಬಸತ್ತಿ ದೇವಸ್ಥಾನದ ಪಗಡಿನ ಶೀಟ್ ಗಳು ಹಾರಿ ಹೋಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಚನ್ನಗಿರಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ಬಿರುಗಾಳಿ ಮತ್ತು ಮಳೆಯ ಅಬ್ಬರಕ್ಕೆ ನೂರಾರು ಅಡಿಕೆ ಮರಗಳು ನೆಲಕುರಳಿವೆ. ವರ್ಷಗಳ ಕಾಲ ಶ್ರಮಪಟ್ಟು ಬೆಳೆಸಿದ್ದ ಅಡಿಕೆ ತೋಟಗಳು ಹಾಳಾದ ಪರಿಣಾಮ ರೈತರು ಕಂಗಾಲಾಗಿದ್ದಾರೆ. ಬಾರಿ ಗಾಳಿ ಮತ್ತು ಮಳೆಯಿಂದ ಬೆಳೆ ಹಾನಿಯ ಜೊತೆಗೆ ಆರ್ಥಿಕ ನಷ್ಟವು ಉಂಟಾಗಿದೆ.
ಹಲವೆಡೆ ವಿದ್ಯುತ್ ಕಂಬಗಳು ಹಾಗೂ ಮರಗಳು ಉರುಳಿ ಬಿದ್ದ ಪರಿಣಾಮ ವಿದ್ಯುತ್ ವ್ಯಥೆಯವು ಉಂಟಾಗಿದೆ. ಸ್ಥಳೀಯ ಆಡಳಿತ ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದ್ದು, ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಆರಂಭಿಸಿದೆ.
ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೀಡಾದ ರೈತರು ಸರ್ಕಾರದಿಂದ ತಕ್ಷಣ ಪರಿಹಾರ ಘೋಷಣೆ ಮಾಡುವಂತೆ ಆಗ್ರಹಿಸಿದ್ದಾರೆ. ಹವಾಮಾನ ಇಲಾಖೆ ಮುಂದಿನ ಕೆಲಸಗಳ ಕಾಲ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.
ಹತ್ತಾರು ವರ್ಷಗಳಿಂದ ಫಲ ನೀಡುತ್ತಿದ್ದ ಅಡಿಕೆ ಮರಗಳು ಕ್ಷಣಾರ್ಧದಲ್ಲಿ ನೆಲಸಮಗೊಂಡಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬಿರುಗಾಳಿ ಪ್ರಬಸಕ್ಕೆ ನೂರಾರು ಮರಗಳು ಉರುಳಿ ಬಿದ್ದ ಪರಿಣಾಮ ತೋಟ ಸಂಪೂರ್ಣ ಹಾನಿಗೊಳವಾಗಿದೆ. ಪರಿಶ್ರಮದಿಂದ ಬೆಳೆಸಿದ್ದ ಅಡಿಕೆ ಬೆಳೆ ನಾಶವಾದ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ.
ಘಟನೆಯ ನಂತರ ಸ್ಥಳೀಯರು ತೋಟಕ್ಕೆ ಭೇಟಿ ನೀಡಿ ಹಾನಿಯ ಪ್ರಮಾಣ ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದ ಉಂಟಾದ ನಷ್ಟದ ಸಂಪೂರ್ಣ ಮಾಹಿತಿ ಇನ್ನೆಷ್ಟು ಲಭ್ಯವಾಗಬೇಕಿತ್ತು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಪ್ರಕೃತಿ ವಿಕೋಪದಿಂದ ರೈತರಿಗೆ ಸರ್ಕಾರ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಮುಂದುವರೆದಿರುವ ಮಳೆ ಹಾಗೂ ಬಿರುಗಾಳಿಯಿಂದ ಇನ್ನಷ್ಟು ಹಾನಿಯಾಗುವ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲೂ ಮಳೆಯ ಸಾಧ್ಯತೆ ಇರುವುದರಿಂದ ರೈತರು ಆತಂಕದಲ್ಲಿದ್ದಾರೆ.
Also Read:
ಬಿಡದಿ ಟೌನ್ ಶಿಪ್ ವಿವಾದಕ್ಕೆ ತೀವ್ರ ತಿರುವು : ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಕುಮಾರಸ್ವಾಮಿ