Belagavi News:
ಬೆಂಗಳೂರು: ಎಂಎಲ್ ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ (cross voting) ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಪಕ್ಷದ ಒಳಗಿನ ವಿಚಾರಗಳನ್ನು ಚರ್ಚಿಸಲು ಧರ್ಮಸ್ಥಳದಲ್ಲಿ ಸಭೆ ನಡೆಸುವ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಂಎಲ್ ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಈಗಾಗಲೇ ಪಕ್ಷದ ಮಟ್ಟದಲ್ಲಿ ಪರಿಶೀಲನೆ ನಡೆಯುತ್ತಿದ್ದು, ಮುಂದಿನ ಕ್ರಮಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ನಾಯಕತ್ವ ನಿರ್ಮಾಣ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಶಾಸಕಾಂಗ ಸಭೆ ಮತ್ತು ಅಡ್ಡಮತದಾನದ ಚರ್ಚೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಪಕ್ಷದೊಳಗಿನ ಮುಂದಿನ ನಡೆ ಏನಾಗಲಿದೆ ಎಂಬುದರತ್ತ ಗಮನ ನೆಟ್ಟಿದೆ.
ಧರ್ಮಸ್ಥಳವನ್ನು ರಾಜಕೀಯ ಚರ್ಚೆಗಳ ಕೇಂದ್ರವನ್ನಾಗಿಸಬಾರದು ಎಂದು ಸ್ಪಷ್ಟಪಡಿಸಿರುವ ಅವರು, ಈ ರೀತಿಯ ವಿಚಾರಗಳನ್ನು ರಾಜಕೀಯವಾಗಿ ಬಳಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಪಕ್ಷದ ಆಂತರಿಕ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಿ ಪರಿಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಡ್ಡಮತದಾನದ ಸೇರಿದಂತೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಧರ್ಮಸ್ಥಳದ ಹೆಸರನ್ನು ರಾಜಕೀಯ ಚಟುವಟಿಕೆಗಳಿಗೆ ಎಳೆದುಕೊಳ್ಳಬಾರದು ಎಂಬ ಸಂದೇಶವನ್ನು ಅವರು ನೀಡಿರುವವುದಾಗಿ ವಿಶ್ಲೇಷಿಸಲಾಗುತ್ತಿದೆ.
ಅಡ್ಡಮತದಾನದ ಮೂಲಕ ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಪಕ್ಷದ ಹಿತಾಸಕ್ತಿಗೆ ವಿರೋಧವಾಗಿ ನಡೆದುಕೊಂಡವರಿಗೆ ತಕ್ಕ ಶಿಕ್ಷೆ ನೀಡಲಾಗುವುದು ಎಂದು ಹೇಳಿರುವ ಅವರು, ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷಕ್ಕೆ ಮೋಸ ಮಾಡಿದವರನ್ನು ಗುರುತಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ದುಷ್ಕೃತ್ಯಗಳು ಪುನರಾವರ್ತನೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Also Read: