BELAGAVI NEWS :
ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತಂತೆ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳು ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡೀಸೆಲ್ ದರದಲ್ಲಿ ಬಾರಿ ಏರಿಕೆ ಆಗಿರುವುದರಿಂದ ಸಾರಿಗೆ ನಿಗಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದೆ ಎಂದು ಹೇಳಿದರು. ಸರ್ಕಾರವು ಬಸ್ ಪ್ರಯಾಣ ದರವನ್ನು ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕು ಎಂಬುದರ ಬಗ್ಗೆ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಗಳ ಆದಾಯ ವೆಚ್ಚದ ಸಮತೋಲನ ಕಾಪಾಡುವುದು ಸುಲಭವಾಗಿದ್ದು, ಪ್ರಯಾಣಿಕರ ಮೇಲೆ ಅತಿಯಾದ ಬಾರ ಬೀಳದಂತೆ ಹಾಗೂ ನಿಗಮಗಳ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಬಸ್ ದರ ಏರಿಕೆ ಕುರಿತು ಇನ್ನು ಅಧಿಕೃತ ಘೋಷಣೆ ಹೊರ ಬಿದ್ದಿಲ್ಲವಾದರೂ, ಸಾರಿಗೆ ನಿಗಮಗಳ ಮನವಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತಿರುವುದು ಸ್ಪಷ್ಟವಾಗಿದೆ. ಪ್ರಯಾಣಿಕರು ಹಾಗೂ ಸಾರಿಗೆ ವಲಯದ ಗಮನ ಈಗ ಸರ್ಕಾರದ ಅಂತಿಮ ನಿರ್ಧಾರದತ್ತ ನೆಟ್ಟಿದೆ.
ಡೀಸೆಲ್ ಬೆಲೆ ನೋಡಿದ್ರೆ ಗಾಬರಿಯಾಗುತ್ತೆ : KSRTC ಉಳಿಸಬೇಕು, ಜನರಿಗೂ ಹೊರೆಯಾಗಬಾರದು ಎಂದ ಡಿಕೆಶಿ
ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳ ನಿರ್ವಹಣಾ ವೆಚ್ಚ ಬಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಬಸ್ ಪ್ರಯಾಣ ದರ ಪರಿಷ್ಕರಣೆ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡೀಸೆಲ್ ದರ ಏರಿಕೆ ಸರ್ಕಾರದ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.
"ಡಿಪೋಗಳಲ್ಲಿ ದೊರೆಯುವ ಡೀಸೆಲ್ ದರಕ್ಕೂ, ಖಾಸಗಿಯಾಗಿ ಸಿಗುವ ಡೀಸೆಲ್ ದರಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ಈಗಿನ ಡೀಸೆಲ್ ಬೆಲೆ ನೋಡಿದರೆ ಗಾಬರಿಯಾಗುವಂತಾಗಿದೆ. ಈ ಕುರಿತು ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಅವರು ತಿಳಿಸಿದರು.
ಸಾರಿಗೆ ನಿಗಮಗಳು ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದು, ಅದರ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ. ಆದರೆ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಹಾಗೂ ಸಾರ್ವಜನಿಕರ ಹಿತ ಎರಡನ್ನು ಗಮನದಲ್ಲಿಟ್ಟುಕೊಳ್ಳಲಾಗುವುದು ಎಂದು ಡಿಕೆಶಿ ಸ್ಪಷ್ಟಪಡಿಸಿದರು.
KSRTC ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳನ್ನು ಉಳಿಸಬೇಕಿದೆ. ಅದೇ ಸಮಯದಲ್ಲಿ ಜನರ ಮೇಲು ಹೆಚ್ಚುವರಿ ಹೊರೆ ಬೀಳಬಾರದು. ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ಹೇಳಿದರು.
ಬಸ್ ದರ ಏರಿಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗದಿದ್ದರೂ, ಡೀಸೆಲ್ ಬೆಲೆ ಏರಿಕೆಯ ಪರಿಣಾಮವಾಗಿ ಸಾರಿಗೆ ದರ ಪರಿಷ್ಕರಣಿಯ ಸಾಧ್ಯತೆ ಹೆಚ್ಚಾಗಿದೆ. ಸರ್ಕಾರದ ಅಂತಿಮ ತೀರ್ಮಾನದತ್ತ ಈಗ ಪ್ರಯಾಣಿಕರು ಹಾಗೂ ಸಾರಿಗೆ ವಲಯ ಕಾತರದಿಂದ ಕಾಯುತ್ತಿದ್ದಾರೆ.
ಬಸ್ ಟಿಕೆಟ್ ದರ ಏರಿಕೆಗೆ ಸರ್ಕಾರದ ಗಂಭೀರ ಚಿಂತನೆ : ಡೀಸೆಲ್ ಬೆಲೆ ವ್ಯತ್ಯಾಸವೇ ಪ್ರಮುಖ ಕಾರಣ
ಸಾರಿಗೆ ಇಲಾಖೆಯು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ. ಡೀಸೆಲ್ ಬೆಲೆ ಏರಿಕೆ ಹಾಗೂ ಸಾರಿಗೆ ನಿಗಮಗಳ ಹೆಚ್ಚುತ್ತಿರುವ ನಿರ್ವಹಣಾ ವೆಚ್ಚದ ಹಿನ್ನೆಲೆಯಲ್ಲಿ ಇದರ ಪರಿಷ್ಕರಣೆ ಕುರಿತು ಚರ್ಚೆಗಳು ನಡೆಯುತ್ತಿವೆ.
ಡಿಪೋಗಳಲ್ಲಿ ಖರೀದಿಸುವ ಡೀಸೆಲ್ ಮತ್ತು ಖಾಸಗಿಯಾಗಿ ಲಭ್ಯವಿರುವ ಡೀಸೆಲ್ ಬೆಲೆಗಳ ನಡುವೆ ಸುಮಾರು 40 ರೂಪಾಯಿಗಳಷ್ಟು ದೊಡ್ಡ ವ್ಯತ್ಯಾಸ ಬರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಬೆಲೆ ಅಂತರದಿಂದಾಗಿ ಕೆಲವು ಖಾಸಗಿ ಸಾರಿಗೆ ನಿರ್ವಾಹಕರು ಡಿಪೋಗಳಿಂದ ಡಿಸೈನ್ ಖರೀದಿಸಲು ಬದಲು ಸಾರ್ವಜನಿಕ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ತುಂಬಿಕೊಳ್ಳುತ್ತಿರುವುದು ಕಂಡುಬಂದಿದೆ.
ಈ ಬೆಳವಣಿಗೆಯಿಂದ ಸಾರಿಗೆ ನಿಗಮಗಳ ಆಧಾರದ ಮೇಲೂ ಪರಿಣಾಮ ಬೀಳುತ್ತಿದ್ದು, ಆರ್ಥಿಕ ಒತ್ತಡ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಟಿಕೆಟ್ ದರ ಪರಿಷ್ಕರಣೆ ಕುರಿತ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಮಂಡಿಸಲಾಗಿದೆ.
ಆದರೆ, ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಾರ್ವಜನಿಕರ ಹಿತಾಸಕ್ತಿ ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಯನ್ನು ಸಮಾನವಾಗಿ ಪರಿಗಣಿಸಲು ಮುಂದಾಗಿದೆ. KSRTC ಯನ್ನು ಆರ್ಥಿಕವಾಗಿ ಬಲಪಡಿಸುವುದರ ಜೊತೆಗೆ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರಬೀಳದಂತೆ ಸಮತೋಲಿತ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಸರ್ಕಾರದ ವಲಯಗಳು ಅಭಿಪ್ರಾಯ ಪಟ್ಟಿವೆ.
ಬಸ್ ದರ ಏರಿಕೆ ಕುರಿತು ಇನ್ನು ಅಂತಿಮ ತೀರ್ಮಾನ ಹೊರ ಬಿದ್ದಿಲ್ಲ. ಆದರೆ ಡೀಸೆಲ್ ಬೆಲೆ ವ್ಯತ್ಯಾಸ ಮತ್ತು ಸಾರಿಗೆ ನಿಗಮಗಳ ಆರ್ಥಿಕ ಸವಾಲುಗಳು ಸರ್ಕಾರದ ಮುಂದಿರುವ ಪ್ರಮುಖ ಚರ್ಚಾ ವಿಷಯಗಳಾಗಿವೆ.
ಡೀಸೆಲ್ ದರ ಏರಿಕೆ ಹಿನ್ನೆಲೆ : ಬಸ್ ಟಿಕೆಟ್ ದರ ಪರಿಷ್ಕರಣೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ!
ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳ ಮೇಲೆ ಹೆಚ್ಚುತ್ತಿರುವ ಆರ್ಥಿಕ ಒತ್ತಡದ ನಡುವೆಯೇ ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಸರ್ಕಾರದ ಮೂಲಗಳ ಪ್ರಕಾರ, ಹಿಂದಿನ ಸರ್ಕಾರದ ಅವಧಿಯಲ್ಲಿ ಡೀಸೆಲ್ ಬೆಲೆ ಏರಿಕೆಯಾದಾಗ ಸ್ವಯಂ ಚಾಲಿತವಾಗಿ ಸಾರಿಗೆ ದರ ಹೆಚ್ಚಳ ಮಾಡುವ ವ್ಯವಸ್ಥೆ ಜಾರಿಯಲ್ಲಿತ್ತು.ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ಮತ್ತು ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಯನ್ನು ಸಮತೋಲನಗೊಳಿಸುವುದು ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪ್ರಧಾನ ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸುವಂತೆ ದೇಶದ ಜನರಿಗೆ ಮನವಿ ಮಾಡಿರುವುದನ್ನು ಉಲ್ಲೇಖಿಸಿದರು. ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶವಾಗಿದ್ದು, ಅದೇ ಬೇರೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಬೇಕಾಗಿದೆ ಎಂದು ಹೇಳಿದರು.
"ರಾಜ್ಯದ ಹಿತಾಸಕ್ತಿ ಮತ್ತು ಜನರ ಅನುಕೂಲ ಎರಡನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಅಧಿಕಾರಿಗಳ ವರದಿ ಪರಿಶೀಲಿಸಿದ ಬಳಿಕ ಆದಷ್ಟು ಬೇಗ ಅಂತಿಮ ತೀರ್ಮಾನ ಪ್ರಕಟಿಸುತ್ತೇವೆ" ಎಂದು ಅವರು ತಿಳಿಸಿದರು.
ಡೀಸೆಲ್ ದರ ಏರಿಕೆ, ನಿರ್ವಹಣಾ ವೆಚ್ಚದ ಹೆಚ್ಚಳ ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಸವಾಲುಗಳ ನಡುವೆ ಸರಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಈಗ ಲಕ್ಷಾಂತರ ಪ್ರಯಾಣಿಕರ ಕುತೂಹಲಕ್ಕೆ ಕಾರಣವಾಗಿದೆ.
Also Read:
ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ: ಅಡ್ಡಮತದಾನದ ಹಿಂದೆ ಅನುದಾನದ ಆಮಿಷ ಆರೋಪ