Belagavi News:
ಬೆಂಗಳೂರು: ಕರ್ನಾಟಕದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. 2026-27ನೇ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಇಂದಿನಿಂದಲೇ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲೆ ಹಾಗೂ ಕಾಲೇಜುಗಳು ಈಗಾಗಲೇ ಆರಂಭವಾಗಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ತಮ್ಮ ಪ್ರಯಾಣಕ್ಕೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಈ ಬಾರಿ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ, ಉಚಿತ ಬಸ್ ಪಾಸ್ ಘೋಷಣೆಯಾಗುವ ಮುನ್ನವೇ ಬಸ್ ಪಾಸ್ ಪಡೆದು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಅವರು ಪಾವತಿಸಿದ ಮೊತ್ತವನ್ನು ಹಣ ಮರುಪಾವತಿ (ರಿಫಂಡ್) ಮಾಡುವುದಾಗಿ ತಿಳಿಸಿದೆ.
ಈ ಕ್ರಮದಿಂದ ಈಗಾಗಲೇ ಬಸ್ ಪಾಸ್ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ದೊರೆಯಲಿದ್ದು, ಅವರು ಪಾವತಿಸಿದ ಮೊತ್ತವನ್ನು ಸರ್ಕಾರದಿಂದ ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ಬಸ್ ಪಾಸ್ ಗೆ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಮ್ಮ ಬಸ್ ಪಾಸ್ ಪಡೆಯಬಹುದು. ಅರ್ಜಿ ಸಲ್ಲಿಕೆ, ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಮರುಪಾವತಿ ಸಂಬಂಧಿತ ಹೆಚ್ಚಿನ ಮಾಹಿತಿಯನ್ನು ಸರ್ಕಾರ ಶೀಘ್ರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.
ಈ ನಾಲ್ಕು ಸಾರಿಗೆ ನಿಗಮಗಳಿಂದ ಹಣ ಮರುಪಾವತಿ:
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಆದೇಶ ಹೊರಡಿಸಿವೆ.
ಉಚಿತ ಬಸ್ ಪಾಸ್ ಘೋಷಣೆಯಾಗುವ ಮುನ್ನವೇ ಬಸ್ ಪಾಸ್ ಪಡೆದು ಶುಲ್ಕ ಪಾವತಿಸಿದ್ದ ವಿದ್ಯಾರ್ಥಿಗಳಿಗೆ ಅವರು ಪಾವತಿಸಿದ ಮೊತ್ತವನ್ನು 7 ದಿನಗಳೊಳಗೆ ಮರುಪಾವತಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈಗಾಗಲೇ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಈ ಸೌಲಭ್ಯದ ಲಾಭ ಪಡೆಯಲಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಶಾಲೆ ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ದೊರೆಯಲಿದ್ದು, ಶಿಕ್ಷಣಕ್ಕಾಗಿ ಪ್ರತಿದಿನ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಮತ್ತಷ್ಟು ಅನುಕೂಲಕರವಾಗಲಿದೆ. ಸರ್ಕಾರವು ಶೀಘ್ರದಲ್ಲೇ ಮರುಪಾವತಿ ಪ್ರಕ್ರಿಯೆ ಹಾಗೂ ಅಗತ್ಯ ಮಾರ್ಗಸೂಚಿಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
Also Read:
ಅಚ್ಚರಿ ಮೂಡಿಸಿದ 19 ತಿಂಗಳ ಕಂದಮ್ಮ: 170ಕ್ಕೂ ಹೆಚ್ಚು ವಸ್ತುಗಳನ್ನು ಗುರುತಿಸಿದ ಪುಟಾಣಿ!