<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ:ಮುಂಬೈ-ಗೋವಾ ಹೆದ್ದಾರಿ ನೀರಿನಲ್ಲಿ ಮುಳುಗಿ ಟ್ರಾಫಿಕ್ ಜಾಮ್

ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ:ಮುಂಬೈ-ಗೋವಾ ಹೆದ್ದಾರಿ ನೀರಿನಲ್ಲಿ ಮುಳುಗಿ ಟ್ರಾಫಿಕ್ ಜಾಮ್
Summary: Raigad, July 6: The India Meteorological Department has issued a 'red alert' in Maharashtra's Raigad district in the wake of the possibility of heavy to very frequent rainfall for the next two days. The district administration has advised the public to take necessary precautions and appealed to residents living in low-lying areas, river banks and hilly areas to be vigilant.

BELAGAVI NEWS :

ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಯಗಡ ಜಿಲ್ಲೆಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ದೇಶದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾದ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ (ಎನ್ ಎಚ್ - 66) ಜಲಾವೃತವಾಗಿದ್ದು, ಸಾವಿರಾರು ಪ್ರಯಾಣಿಕರು ಮತ್ತು ವಾಹನ ಸವಾರರು ಹಲವು ಗಂಟೆಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕಿಕೊಂಡರು.

ರಾಯಗಢ ಜಿಲ್ಲೆಯ ನಾಗೋಥೇನ್ ಸಮೀಪದ ಸುಕೇಲಿ ಘಾಟ್ ಸಮೀಪದಲ್ಲಿ ಹೆದ್ದಾರಿಯ ಮೇಲೆ ಮಳೆ ನೀರು ಹರಿದು ಸುಮಾರು 3 ಅಡಿ ಎತ್ತರದವರೆಗೆ ನೀರು ನಿಂತ ಪರಿಣಾಮ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಕೊಂಡಿದ್ದು. ಭಾನುವಾರ ಬೆಳಗ್ಗೆಯಿಂದಲೇ ರಸ್ತೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಆಡಳಿತವೂ ಸುರಕ್ಷತಾ ಕ್ರಮವಾಗಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸಿತು.

ಪ್ರವಾಹದ ಪರಿಣಾಮ ಹೆದ್ದಾರಿಯ ಎರಡು ಬದಿಗಳಲ್ಲಿ ಸುಮಾರು 8 ರಿಂದ 10 ಕಿಲೋಮೀಟರ್ಗಳಷ್ಟು ಉದ್ದದ ವಾಹನಗಳ ಸಾಲು ನಿರ್ಮಾಣವಾಗಿದ್ದು, ಸಾವಿರಾರು ಪ್ರಯಾಣಿಕರು ಗಂಟೆಗಳ ಕಾಲ ಪರದಾಡಬೇಕಾಯಿತು. ಸೋಮವಾರ ಬೆಳಗ್ಗೆಯಿಂದ ನೀರಿನ ಮಟ್ಟ ಇಳಿಯಲು ಆರಂಭಿಸಿದ ಬಳಿಕ ಸಂಚಾರವನ್ನು ಪುನರಾರಂಭಿಸಲಾಯಿತು. ಆದರೆ ಶನಿವಾರ ರಾತ್ರಿ ಆರಂಭವಾದ ನಿರಂತರ ಮಳೆಯಿಂದ ನಗೋಥೇನ್- ವಾಕನ್ ಭಾಗದಲ್ಲಿ ಇನ್ನೂ ಪ್ರವಾಹದಂತ ಪರಿಸ್ಥಿತಿ ಮುಂದುವರೆದಿರುವುದರಿಂದ ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.

ಭಾರತ ಹವಾಮಾನ ಇಲಾಖೆ ಮಹಾರಾಷ್ಟ್ರದ ಕರಾವಳಿ ಮತ್ತು ಕೊಂಕಣ ಭಾಗಗಳಲ್ಲಿ ಇನ್ನೂ ಬಾರಿ ಮಳೆಯ ಮುನ್ಸೂಚನೆ ನೀಡಿರುವ ಭಾಗಗಳಲ್ಲಿ ಇನ್ನೂ ಬಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುಂದಿನ ಕೆಲವು ದಿನಗಳಲ್ಲಿಯೂ ರಸ್ತೆ ಸಂಚಾರ ಮತ್ತು ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಯಗಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರೀ ದಿಂದ ಅತಿ ಬಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿದ್ದು, ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ರಾಯಗಡ ಜಿಲ್ಲೆಯ ಸುಕೇಲಿ ಗ್ರಾಮದ ವ್ಯಾಪ್ತಿಯಲ್ಲಿ ಭಾನುವಾರ ಹಲವು ಗಂಟೆಗಳ ಕಾಲ ಮುಂಬೈ - ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಹೆದ್ದಾರಿಯಲ್ಲಿ ಪ್ರವಾಹದ ನೀರು ಹರಿದ ಪರಿಣಾಮ ಸಾವಿರಾರು ಪ್ರಯಾಣಿಕರು ಮತ್ತು ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಳೆ ಕಡಿಮೆಯಾಗದ ಕಾರಣ ಪ್ರಯಾಣಿಕರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.

ಇದೆ ವೇಳೆ, ವಾಕನ್ - ಪಾಲಿ ರಸ್ತೆ ಕೂಡ ಪ್ರವಾಹದ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರಕ್ಕೆ ಬಂದ್ ಮಾಡಲಾಯಿತು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ತುರ್ತು ಕ್ರಮವಾಗಿ ವಾಹನಗಳನ್ನು ಪರ್ಯಾಯ ಮಾರ್ಗಗಳಿಗೆ ತಿರುಗಿದರು. ತಮ್ಹಿನಿ ಘಾಟ್ ಮೂಲಕ ಮಂಗಾವ್ ಹಾಗೂ ನಿಜಾಮ್ ಪುರ ಮಾರ್ಗದಲ್ಲಿ ಕೊನೆಗೆ ತೆರಳುವ ವಾಹನಗಳಿಗೆ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಗತ್ಯವಿದ್ದ ವಾಹನಗಳನ್ನು ಮುಂಬೈ ಕಡೆಗೆ ಮರು ದಾರಿಗೊಳಿಸಲಾಯಿತು.

ಮಹಾರಾಷ್ಟ್ರದ ಕರಾವಳಿ ಮತ್ತು ಕೊಂಕಣ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿಗಳು, ತಗ್ಗು ಪ್ರದೇಶಗಳು ಹಾಗೂ ನದಿ ತೀರದ ಭಾಗಗಳಲ್ಲಿ ವಾಸಿಸುವ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈಗಾಗಲೇ ದೀರ್ಘಕಾಲದಿಂದ ಕಳಪೆ ರಸ್ತೆ ಪರಿಸ್ಥಿತಿ ಮತ್ತು ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳಿಂದ ಕಷ್ಟದಲ್ಲಿದ್ದ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ ಇದೀಗ ಭಾರಿ ಮಳೆಯಿಂದ ಮತ್ತಷ್ಟು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದೆ. ನಿರಂತರ ಮಳೆಯಿಂದಾಗಿ ರಸ್ತೆಯ ಹಲಗಡೆ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದ್ದು,

ಪ್ರಯಾಣಿಕರು ಮತ್ತು ವಾಹನ ಚಾಲಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಮಂಗಾವ್ ಮತ್ತು ಕಾರ್ನಾಡ್ ಘಾಟ್ ಸೇರಿದಂತೆ ಹೆದ್ದಾರಿಯ ಪ್ರಮುಖ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯ ಮೇಲೆ ಸಂಗ್ರಹವಾಗುತ್ತಿದೆ ಎಂದು ವಾಹನ ಚಾಲಕರು ದೂರಿದ್ದಾರೆ. ಇದರಿಂದಾಗಿ ಹಲವಾರು ಕಡೆಗಳಲ್ಲಿ ವಾಹನಗಳ ಸಂಚಾರ ನಿಧಾನಗೊಂಡಿದ್ದು, ಕೆಳಗಡೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಪರಿಸ್ಥಿತಿಯಲ್ಲೂ ಉಂಟಾಗಿದೆ.

ಸ್ಥಳೀಯರು ಮತ್ತು ಪ್ರಯಾಣಿಕರ ಪ್ರಕಾರ, ಹೆದ್ದಾರಿಯಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆಯೇ ಪ್ರತಿ ಮಳೆಗಾಲದಲ್ಲೂ ಪುನರಾವರ್ತಿತ ಪ್ರವಾಹ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ನಿರಂತರವಾಗಿ ಉಂಟಾಗುತ್ತಿರುವ ಈ ಸಮಸ್ಯೆಯಿಂದ ದೀರ್ಘ ಪ್ರಮಾಣದ ವಾಹನಗಳು ಗಂಟೆಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕಿಕೊಳ್ಳಬೇಕಾಗುತ್ತದೆ.

ಭಾರಿ ಮಳೆಯೊಂದಿಗೆ ರಸ್ತೆ ಕಾಮಗಾರಿಗಳ ನಿಧಾನಗತಿ ಹಾಗೂ ಅಸಮರ್ಪಕ ಡ್ರೈನೇಜ್ ವ್ಯವಸ್ಥೆ ಕೂಡ ಸೇರಿಕೊಂಡಿರುವುದರಿಂದ, ಮುಂಬೈ - ಗೋವಾ ಹೆದ್ದಾರಿ ಪ್ರತಿ ವರ್ಷ ಮಳೆಗಾಲದಲ್ಲಿ "ಸಂಕಟ ಮಾರ್ಗ" ವಾಗಿ ಪರಿಣಮಿಸುತ್ತಿದೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online