Belagavi news:
ಬೆಂಗಳೂರು ಹೋಟೆಲ್ ಅಸೋಸಿಯೇಷನ ಕಮಿಷನ್ ಎಲ್ ಪಿಜಿ ಗ್ಯಾಸ್ ದರವನ್ನು ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಹೋಟೆಲ್ ಉದ್ಯಮದ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ದರ ಏರಿಕೆಯಿಂದ ದಿನನಿತ್ಯದ ಕಾರ್ಯಾಚರಣೆ ವೆಚ್ಚಗಳು ಹೆಚ್ಚಾಗಿದ್ದು, ಸಣ್ಣ ಹಾಗೂ ಮಧ್ಯಮ ಹೋಟೆಲ್ಗಳಿಗೆ ಹೆಚ್ಚಿನ ಹೊರೆ ಉಂಟಾಗಿದೆ. ಇದರಿಂದ ಆಹಾರದ ರಗಳ ಮೇಲು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.
ಗ್ಯಾಸ್ ದರದಲ್ಲಿ ಸಮಂಜಸ ಮಟ್ಟಕ್ಕೆ ಇಳಿದರೆ ಉದ್ಯಮ ಉಳಿಯು ಹಾಗೂ ಗ್ರಾಹಕರಿಗೂ ಅನುಕೂಲವಾಗುತ್ತದೆ ಎಂದು ಹೋಟೆಲ್ ಅಸೋಸಿಯೇಷನ್ ಅಭಿಪ್ರಾಯ ಪಟ್ಟಿದೆ. ಈ ಮನವಿ ಈಗ ವ್ಯಾಪಾರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ ಏರಿಕೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಹೋಟೆಲ್ ಉದ್ಯಮದ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡುವಂತೆ ಒತ್ತಾಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಪತ್ರ ಬರೆದಿದೆ.
ಅಸೋಸಿಯೇಷನ್ ಪ್ರಕಾರ, ನೀ ಬಂದರಂದು ವಾಣಿಜ್ಯ ಸಿಲಿಂಡರ್ ದರದಲ್ಲಿ ಬರೋಬ್ಬರಿ 993 ರೂಪಾಯಿಗಳಷ್ಟು ಏರಿಕೆ ಕಂಡಿದ್ದು, ಹೋಟೆಲ್ ಉದ್ಯಮವನ್ನು ಗಂಭೀರ ಸಂಕಷ್ಟಕ್ಕೆ ತಳ್ಳಿದೆ. ದಿನನಿತ್ಯದ ಆಹಾರ ತಯಾರಿಕೆ ವೆಚ್ಚಗಳು ಹೆಚ್ಚಾಗುತ್ತಿದ್ದು, ಸಣ್ಣ ಮತ್ತು ಮಧ್ಯಮ ಹೋಟೆಲ್ ಗಳು ನಿರ್ವಹಣಾ ವೆಚ್ಚ ನಿಭಾಯಿಸಲು ಕಷ್ಟಪಡುತ್ತಿರುವುದಾಗಿ ಉದ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ.
ದರ ಏರಿಕೆಯಿಂದ ಗ್ರಾಹಕರ ಮೇಲೆ ಹೆಚ್ಚುವರಿ ಬಾರ ಬೀಳುವ ಸಾಧ್ಯತೆ ಇದ್ದು, ಆಹಾರ ದರಗಳು ಹೆಚ್ಚಾಗುವ ಭೀತಿ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯ ಗ್ಯಾಸ್ ದರವನ್ನು ತಕ್ಷಣ ಇಳಿಸುವಂತೆ ಹಾಗೂ ಉದ್ಯಮಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಸೋಸಿಯೇಷನ್ ಕೇಂದ್ರ ಸರ್ಕಾರದಿಂದ ಒತ್ತಾಯಿಸಿದೆ.
ಹೋಟೆಲ್ ಉದ್ಯಮವು ನಗರ ಆರ್ಥಿಕತೆಯ ಪ್ರಮುಖ ಭಾಗವಾಗಿರುವುದರಿಂದ, ಈ ಸಮಸ್ಯೆಗೆ ತುರ್ತು ಪರಿಹಾರ ನೀಡದಿದ್ದರೆ ಉದ್ಯಮದ ಸ್ಥಿರತೆಗೆ ಹೊಡೆತ ಬೀಳಬಹುದು ಎಂದು ಅಸೋಸಿಯೇಷನ್ ಎಚ್ಚರಿಸಿದೆ. ಈಗ ಈ ಮನವಿ ವ್ಯಾಪಾರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ವಾಣಿಜ್ಯ ಎಲ್ ಪಿಜಿ ಸಿಲೆಂಡರ್ ದರ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಉದ್ಯಮ ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ದರ ಏರಿಕೆಯಿಂದಾಗಿ ಹೋಟೆಲ್ ನಡೆಸುವುದೇ ಕಷ್ಟಕರವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಮಾಲೀಕರ ಪ್ರಕಾರ, ಸಿಲಿಂಡರ್ ಬೆಲೆ ಹೆಚ್ಚಾದಾಗ ತಿಂಡಿ ತಿನಿಸುಗಳ ದರವನ್ನು ಏರಿಸಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ದರವನ್ನು ಹೆಚ್ಚಿಸದೆ ಇದ್ದರೆ ನಾಷ್ಟ ಹೆಚ್ಚಾಗಿ ವ್ಯವಹಾರ ನಿರ್ವಹಣೆ ಕಷ್ಟವಾಗುತ್ತಿದೆ. ತಮ್ಮ ನೀನು ಕಠಿಣ ಪರಿಸ್ಥಿತಿಯಿಂದ ಅನೇಕ ಸಣ್ಣ ಹಾಗೂ ಮಧ್ಯಮ ಹೋಟೆಲ್ ಮಾಲೀಕರು ಕಂಗಾಲಾಗಿದ್ದಾರೆ.
ಹೋಟೆಲ್ ಉದ್ಯಮವು ದಿನ ನಿತ್ಯದ ಗ್ರಾಹಕ ಸೇವೆಗೆ ಅವಲಂಬಿತವಾಗಿರುವುದರಿಂದ, ಇಂತಹ ನಿರಂತರ ವೆಚ್ಚ ಏರಿಕೆಗಳು ನೇರವಾಗಿ ಅವರ ಆದಾಯದ ಮೇಲೆ ಪರಿಣಾಮ ಬೀರುತ್ತಿವೆ ಎಂದು ಉದ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ. ಸಿಬ್ಬಂದಿ ವೇತನ, ಕಚ್ಚಾ ವಸ್ತುಗಳ ದರ ಹಾಗೂ ಗ್ಯಾಸ್ ವೆಚ್ಚ ಸೇರಿ ಒಟ್ಟು ಖರ್ಚು ಹೆಚ್ಚಾಗುತ್ತಿರುವುದರಿಂದ ಲಾಭದ ಅಂಚು ಬಹಳ ಕಡಿಮೆ ಆಗುತ್ತದೆ.
ಈ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು, ಸರ್ಕಾರವು ವಾಣಿಜ್ಯ ಎಲ್ ಪಿಜಿ ದರವನ್ನು ತಕ್ಷಣ ಇಳಿಸಬೇಕು ಹಾಗೂ ಉದ್ಯಮಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ ಹೋಟೆಲ್ ವ್ಯವಹಾರ ನಿರ್ವಹಣೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಹೋಟೆಲ್ ಒಕ್ಕೂಟ ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಹೋಟೆಲ್ ಉದ್ಯಮವನ್ನು ಉಳಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದೆ.
ಒಕ್ಕೂಟದ ಪ್ರಕಾರ, ತಮ್ಮ ಸಮಸ್ಯೆಗಳನ್ನು ನೇರವಾಗಿ ಪ್ರಧಾನಿಯವರಿಗೆ ವಿವರಿಸಲು ಒಂದು ಅವಕಾಶ ನೀಡಬೇಕು ಹಾಗೂ ವಾಣಿಜ್ಯ ಗ್ಯಾಸ್ ದರವನ್ನು ತಕ್ಷಣ ಇಳಿಸುವ ಅಗತ್ಯವಿದೆ ಎಂದು ವಿನಂತಿಸಲಾಗಿದೆ. ನಿರಂತರವಾಗಿ ಏರುತ್ತಿರುವ ಗ್ಯಾಸ್ ದರದಿಂದ ಹೋಟೆಲ್ ಉದ್ಯಮದ ಕಾರ್ಯಾಚರಣೆ ವೆಚ್ಚಗಳು ಹೆಚ್ಚಾಗಿದ್ದು, ಸಣ್ಣ ಹಾಗೂ ಮಧ್ಯಮ ಹೋಟೆಲ್ ಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಉದ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ.
ದರ ಏರಿಕೆಯಿಂದಾಗಿ ತಿಂಡಿ ತಿನಿಸುಗಳ ಬೆಲೆ ಹೆಚ್ಚಿಸುವುದು ಅನಿವಾರ್ಯವಾಗುತ್ತಿದ್ದು, ಇದರಿಂದ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಭೀತಿ ಎದುರಾಗಿದೆ. ಮತ್ತೊಂದೆಡೆ ದರವನ್ನು ಹೆಚ್ಚಿಸದೆ ಇದ್ದರೆ ನಷ್ಟ ಹೆಚ್ಚಾಗಿ ವ್ಯವಹಾರವೇ ಅಸಾಧ್ಯವಾಗುವ ಪರಿಸ್ಥಿತಿ ಉಂಟಾಗಿದೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ.
ಈ ಕಠಿಣ ಪರಿಸ್ಥಿತಿಯಿಂದ ಅನೇಕ ಹೋಟೆಲ್ ಮಾಲೀಕರು ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದು, ಉದ್ಯೋಗಗಳ ಮೇಲು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಒಕ್ಕೂಟ ಎಚ್ಚರಿಸಿದೆ. ಆದ್ದರಿಂದ ಕೇಂದ್ರ ಸರ್ಕಾರವು ತಕ್ಷಣ ಮಧ್ಯ ಪ್ರವೇಶಿಸಿ ಗ್ಯಾಸ್ ದರ ಇಳಿಸುವ ಮೂಲಕ ಹೋಟೆಲ್ ಉದ್ಯಮವನ್ನು ಇಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
Also Read: