<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣ ಭಾರಿ ಏರಿಕೆ : ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣ ಭಾರಿ ಏರಿಕೆ : ಆರೋಗ್ಯ ಇಲಾಖೆ ಎಚ್ಚರಿಕೆ
Summary: Dog bite cases in Bengaluru have increased by 55% over the last year, raising concerns about public safety and health. Learn about the reasons behind this increase and preventive measures

Belagavi News:

ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ನಾಯಿ ಕಡಿತದ ಪ್ರಕರಣಗಳಲ್ಲಿ ಆತಂಕ ಕಾರ್ಯ ಏರಿಕೆ ಕಂಡು ಬಂದಿದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ 2026ರಲ್ಲಿ ನಾಯಿ ಕಡಿತದ ಪ್ರಕರಣಗಳು ಶೇ.55 ರಷ್ಟು ಹೆಚ್ಚಾಗಿವೆ. 2026ರ ಮೊದಲ 5 ತಿಂಗಳಲ್ಲೇ 18,140 ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಸುರಕ್ಷತೆ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ, ಆಸ್ಪತ್ರೆಗಳಲ್ಲಿ ನಿಖರ ದತ್ತಾಂಶ ದಾಖಲಾತಿ, ಸಣ್ಣ ಗೀರುಗಳಿಗೂ ಚಿಕಿತ್ಸೆ ಪಡೆಯುತ್ತಿರುವ ಜನರ ಜಾಗೃತಿ ಹಾಗೂ ವರದಿಯಾಗುವ ಪ್ರಕರಣಗಳ ಸಂಖ್ಯೆಯ ಹೆಚ್ಚಳ ಈ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ನಾಗರಿಕರ

ಆತಂಕವೂ ಗಮನ ಸೆಳೆದಿದೆ.

ತಜ್ಞರ ಅಭಿಪ್ರಾಯದಂತೆ, ನಾಯಿ ಕಡಿತದ ಘಟನೆಗಳನ್ನು ತಡೆಯಲು ಬೀದಿ ನಾಯಿಗಳ ನಿರ್ವಹಣೆ, ಲಸಿಕಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಗೆ ಸವಾಲಾಗಿ ಪರಿಣಮಿಸುತ್ತಿವೆ.

ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣಗಳಲ್ಲಿ ಶೇ. 55 ರಷ್ಟು ಏರಿಕೆ; ಐದು ತಿಂಗಳಲ್ಲಿ 18,140 ಪ್ರಕರಣ ದಾಖಲು:

ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ನಡುವೆ, ನಾಯಿ ಕಡಿತದ ಪ್ರಕರಣಗಳ ಸಂಖ್ಯೆಯು ಆತಂಕ ಕಾರ್ಯ ಮಟ್ಟದಲ್ಲಿ ಏರಿಕೆಯಾಗಿದೆ. 2026ರ ಮೊದಲ ಐದು ತಿಂಗಳಲ್ಲೇ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ 18,140 ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.55 ರಷ್ಟು ಹೆಚ್ಚಳ ಕಂಡು ಬಂದಿದೆ.

ಅಧಿಕೃತ ಅಂಕಿ ಅಂಶಗಳ ಪ್ರಕಾರ, 2025ರ ಮೊದಲ ಐದು ತಿಂಗಳಲ್ಲಿ ಹಳೆಯ ಬಿಬಿಎಂಪಿ ವ್ಯಾಪ್ತಿಯಲ್ಲಿ 11,647 ಪ್ರಕರಣಗಳು ದಾಖಲಾಗಿದ್ದವು. ಆದರೆ 2026ರಲ್ಲಿ ಈ ಸಂಖ್ಯೆ 18,140 ಕ್ಕೆ ಏರಿಕೆಯಾಗಿದ್ದು, ನಗರದ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವ ನಾಗರಿಕರ ಸುರಕ್ಷತೆ ಕುರಿತು ಪ್ರಶ್ನೆಗಳು ಉದ್ಭವಿಸಿದೆ.

ಆರೋಗ್ಯ ಇಲಾಖೆಯ ಪ್ರಕಾರ, ಆಸ್ಪತ್ರೆಗಳಲ್ಲಿ ನಿಖರವಾದ ದತ್ತಾಂಶ ದಾಖಲಾತಿ, ಸಣ್ಣಗಿರುಗಳಿಗೂ ಚಿಕಿತ್ಸೆ ಪಡೆಯಲು ಜನರು ಮುಂದೆ ಬರುತ್ತಿರುವ ಹಾಗೂ ಸಾರ್ವಜನಿಕ ಜಾಗೃತಿ ಹೆಚ್ಚಿರುವುದು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಗೆ ಕಾರಣವಾಗಿದೆ. ಅದಾಗ್ಯೂ ಬಿದಿ ನಾಯಿಗಳ ನಿಯಂತ್ರಣ ಮತ್ತು ಸಾರ್ವಜನಿಕ ಸುರಕ್ಷತೆ ಕುರಿತು ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳು ಸಾರ್ವಜನಿಕ ಆರೋಗ್ಯ ಮತ್ತು ನಾಗರಿಕ ಸುರಕ್ಷತೆಯ ಪ್ರಮುಖ ಸವಾಲಾಗಿ ಪರಿಣಮಿಸಿದ್ದು, ಸಂಬಂಧಿಕ ಇಲಾಖೆಗಳು ತುರ್ತು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣಗಳ ಆತಂಕಕಾರಿ ಏರಿಕೆ :

ರಾಜ್ಯ ರಾಜಧಾನಿಯಲ್ಲಿರುವ ಬಿದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಯಿ ಕಡಿತದ ಪ್ರಕರಣಗಳು ಆತಂಕಕಾರಿ ಮಟ್ಟ ತಲುಪಿದೆ. 2026ರ ಮೊದಲ 5 ತಿಂಗಳಲ್ಲಿ 18 ಸಾವಿರಕ್ಕೂ ಹೆಚ್ಚು ಜನರು ನಾಯಿ ಕಡಿತಕ್ಕೆ ಒಳಗಾಗಿದ್ದು, ಪ್ರತಿ ದಿನ ಸರಾಸರಿ ನೂರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಕಳವಳಕ್ಕೆ ಕಾರಣವಾಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಾಯಿಗಳ ದಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ವಿಧಿ ನಾಯಿಗಳ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ರೇಬಿಸ್ ಮುಕ್ತ ಯೋಜನೆ ಮತ್ತು ಸಂತಾನಹರಣ ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಕುರಿತು ಪ್ರಶ್ನೆಗಳು ಉದ್ಭವಿಸಿವೆ. ಅಧಿಕೃತ ಅಂಕಿ ಅಂಶಗಳು ಈ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಫಲ ನೀಡುತ್ತಿಲ್ಲ ಎಂಬ ಸೂಚನೆ ನೀಡುತ್ತಿವೆ.

ಆದರೆ, ಪ್ರಕರಣಗಳ ಸಂಖ್ಯೆಯಲ್ಲಿ ಕಂಡು ಬಂದಿರುವ ಭಾರಿ ಏರಿಕೆಗೆ ನಾಯಿಗಳ ದಾಳಿ ಮಾತ್ರ ಕಾರಣವಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಾಗಿರುವುದರಿಂದ, ನಾಯಿಗಳಿಂದ ಸಣ್ಣ ನೀರು ಅಥವಾ ಕಡಿತಕ್ಕೊಳಗಾದರೂ ಜನರು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಆಸ್ಪತ್ರೆಗಳಲ್ಲಿ ನಿಖರವಾದ ದತ್ತಾಂಶ ದಾಖಲಾತಿ ಮತ್ತು ವರದಿ ವ್ಯವಸ್ಥೆ ಬಲಗೊಂಡಿರುವುದು ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಕಾರಣವಾಗಿದೆ.

ತಜ್ಞರ ಪ್ರಕಾರ, ಬೀದಿ ನಾಯಿಗಳ ನಿಯಂತ್ರಣ , ರೇಬಿಸ್ ತಡೆ ಲಸಿಕಾ ಅಭಿಯಾನ ಹಾಗೂ ಸಾರ್ವಜನಿಕ ಸುರಕ್ಷಿತ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳು ಬೆಂಗಳೂರಿನ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಹೊಸ ಸವಾಲಾಗಿ ಪರಿಣಮಿಸುತ್ತಿವೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಆಗ್ರಹ :

ನಗರದಲ್ಲಿ ನಾಯಿ ಕಡಿತ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬೀದಿ ನಾಯಿಗಳ ಮತ್ತು ಸಾರ್ವಜನಿಕ ಸುರಕ್ಷತೆ ಕುರಿತು ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಪ್ರಸ್ತುತ ಕರ್ನಾಟಕದಲ್ಲಿ ರೇಬಿಸ್ ನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕಡ್ಡಾಯವಾಗಿ ವರದಿ ಮಾಡಬೇಕಾದ ಕಾಯಿಲೆಯಾಗಿ ಘೋಷಿಸಲಾಗಿದ್ದು, ಪ್ರತಿಯೊಂದು ಪ್ರಕರಣದ ದಾಖಲೆ ಹಾಗೂ ಮೇಲ್ವಿಚಾರಣೆಗೆ ಸರ್ಕಾರ ಮತ್ತು ನೀಡುತ್ತಿದೆ.

ಆದರೂ, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾಗರಿಕರಲ್ಲಿ ಆತಂಕ ಮುಂದುವರೆದಿದೆ. ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೀದಿ ನಾಯಿಗಳ ಸಂಖ್ಯೆಯನ್ನು ಶಾಶ್ವತವಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಸ್ಥಳ ಬೇಕು ಎಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

ತಜ್ಞರ ಅಭಿಪ್ರಾಯದಂತೆ, ರೇಬಿಸ್ ತಡೆ ಲಸಿಕ ಅಭಿಯಾನ, ಸಂತಾನಹರಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ , ಕ್ಯಾಜ್ಯ ನಿರ್ವಹಣೆ ಹಾಗೂ ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ಬಲಪಡಿಸುವ ಮೂಲಕ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕಂಡುಕೊಳ್ಳಬಹುದು. ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳು ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಗೆ ಪ್ರಮುಖ ಸವಾಲಾಗಿ ಪರಿಣಮಿಸುತ್ತಿವೆ.

Also Read:

ಮೇಕೆದಾಟು ವಿಚಾರದಲ್ಲಿ ಮತ್ತೆ ರಾಜ್ಯಗಳ ಸಂಘರ್ಷ: ಮಾತುಕತೆ ಮೂಲಕ ಪರಿಹಾರಕ್ಕೆ ಡಿಕೆಶಿ ಆಹ್ವಾನ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online