Belagavi news:
ಜೆಡಿಎಸ್ ಪಕ್ಷದಲ್ಲಿ ಕರುನಾಡ ಜಗಳದ ಚರ್ಚೆಗಳು ಮತ್ತೆ ಗರಿಗೆದರಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಭಾರಿ ರಾಜಕೀಯ ಶಾಕ್ ಎದುರಾಗಿದೆ ಎನ್ನಲಾಗುತ್ತಿದೆ. ಸ್ವಪಕ್ಷದ ಕೆಲ ಶಾಸಕರನ್ನು ದೂರವಿಟ್ಟು ಜೆಡಿಎಸ್ ಸಮಾವೇಶ ಆಯೋಜನೆ ಮಾಡಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಪಕ್ಷದ ಪ್ರಮುಖ ಸಮಾವೇಶದಲ್ಲಿ ಕೆಲವು ಶಾಸಕರಿಗೆ ಆಹ್ವಾನ ನೀಡದಿರುವುದು ಅಥವಾ ಅವರನ್ನು ದೂರ ಬಿಟ್ಟಿರುವ ಬೆಳವಣಿಗೆ ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ನಡೆ ಜಿ ಟಿ ದೇವೇಗೌಡ ಅವರ ಅಸಮಾಧಾನ ಕ್ಕೆ ಕಾರಣವಾಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.
ಜೆಡಿಎಸ್ ಒಳಗಿನ ಗುಂಪುಗಾರಿಕೆ ಹಾಗೂ ನಾಯಕತ್ವದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಮಾವೇಶದ ರಾಜಕೀಯ ಮಹತ್ವದ ಬಗ್ಗೆ ವಿಶ್ಲೇಷಣೆಗಳು ಆರಂಭವಾಗಿವೆ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಮಾವೇಶದ ಸುತ್ತ ನಡೆದ ರಾಜಕೀಯ ಚಟುವಟಿಕೆಗಳು ಪಕ್ಷದ ಒಳ ರಾಜಕೀಯದ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿವೆ.
ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ ಟಿ ದೇವೇಗೌಡರ ತವರು ಅಂಗಳದಲ್ಲಿ ಇದೀಗ ಜನತಾದಳ ಸಮಾವೇಶ ಆಯೋಜನೆಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ವಿಶೇಷವೆಂದರೆ, ಈ ಸಮಾವೇಶದಲ್ಲಿ ಶಾಸಕ ಜಿಟಿ ದೇವೇಗೌಡ ಅವರು ದೂರ ಉಳಿದಿದ್ದರೆ ಅವರ ಪುತ್ರ ಜಿಟಿ ಹರೀಶ್ ಗೌಡ ಕಾರ್ಯಕ್ರಮದ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಈ ಬೆಳವಣಿಗೆ ಜೆಡಿಎಸ್ ಕೊಳ ರಾಜಕೀಯದಲ್ಲಿ ಹೊಸ ಕುತೂಹಲ ಹುಟ್ಟಿಸಿದ್ದು, ಪಕ್ಷದೊಳಗಿನ ಬದಲಾವಣೆಗಳ ಬಗ್ಗೆ ಹಲವು ಪ್ರಶ್ನೆಗಳು ಎಬ್ಬಿಸುವೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಪ್ರಭಾವದ ನಡುವೆಯೇ ನಡೆದ ಈ ಸಮಾವೇಶಕ್ಕೆ ಸ್ಥಳೀಯ ಕಾರ್ಯಕರ್ತರು ಹಾಗೂ ದಳಪತಿಗಳು ಉತ್ತಮ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ. ಸಮಾವೇಶದ ಮೂಲಕ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಬಲ ಪಡಿಸುವ ಮತ್ತು ಉದ್ದೇಶ ಹೊಂದಲಾಗಿದೆ ಎಂದು ಹೇಳಲಾಗುತ್ತದೆ.
ಇತ್ತ, ಜಿ ಟಿ ದೇವೇಗೌಡ ಪಕ್ಷದಿಂದ ದೂರ ಉಳಿದಿರುವ ನಡುವೆ ಅವರ ಪುತ್ರ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯ ರಾಗಿರುವುದು ರಾಜಕೀಯ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ. ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಸಮಾವೇಶ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಮಾವೇಶದ ಬ್ಯಾನರ್ ಗಳು ಮತ್ತು ಕಟೌಟ್ಗಳಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜಿಟಿ ದೇವೇಗೌಡ ಅವರ ಫೋಟೋಗೆ ಕೋಕ್ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು, ಇತ್ತೀಚಿಗಷ್ಟೇ ಜಿಟಿ ದೇವೇಗೌಡ ಅವರ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ಬಳಿಕ ಜಿಟಿಡಿ ಮತ್ತೆ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಅವರದ್ದೇ ಕ್ಷೇತ್ರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಜಿಟಿಡಿ ಅನ್ನು ಮಾಡಿರುವ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ವಿಶೇಷವೆಂದರೆ, ಈ ಸಮಾವೇಶವನ್ನು ಜಿಕೆಡಿ ಪುತ್ರ ಜಿಟಿ ಹರೀಶ್ ಗೌಡ ನೇತೃತ್ವದಲ್ಲಿ ಆಯೋಜಿಸಲಾಗಿದೆ. ತಂದೆಯನ್ನು ಬಿಟ್ಟು ಮಗನಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಜೆಡಿಎಸ್ ಒಳ ರಾಜಕೀಯದಲ್ಲಿ ಹೊಸ ಸಮೀಕರಣಗಳ ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸಮಾವೇಶಕ್ಕೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಜಿಟಿಡಿ ಫೋಟೋ ಕೈ ಬಿಟ್ಟಿರುವ ವಿಚಾರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Also Read:
ಬಾಲಿವುಡ್ ನಲ್ಲಿ ಅಚ್ಚರಿ ಬೆಳವಣಿಗೆ : ರಣವೀರ್ ಸಿಂಗ್ ಮತ್ತು ಆದಿತ್ಯ ಚೋಪ್ರಾ ರಹಸ್ಯ ಭೇಟಿ