<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಜಯದೇವ ಆಸ್ಪತ್ರೆ ವಿರುದ್ಧ ನಿರ್ಲಕ್ಷ್ಯದ ಆರೋಪ : ಶಸ್ತ್ರ ಚಿಕಿತ್ಸೆ ವಿಳಂಬದಿಂದ ಮಹಿಳೆ ಸಾವು?

ಜಯದೇವ ಆಸ್ಪತ್ರೆ ವಿರುದ್ಧ ನಿರ್ಲಕ್ಷ್ಯದ ಆರೋಪ : ಶಸ್ತ್ರ ಚಿಕಿತ್ಸೆ ವಿಳಂಬದಿಂದ ಮಹಿಳೆ ಸಾವು?
Summary: A woman has died amid allegations that she was negligent in providing heart treatment despite being required to undergo it. Serious allegations have been made against Jayadeva Heart Hospital in this regard, and the family has demanded a thorough investigation into the incident and justice. The hospital administration's response and official information on the case are awaited.

belagavi news :

ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿರುದ್ಧ ವೈದ್ಯಕೀಯ ನಿರ್ಲಕ್ಷದ ಗಂಭೀರ ಆರೋಪ ಕೇಳಿ ಬಂದಿದೆ. 65 ವರ್ಷದ ಮಾಯಮ್ಮ ಎಂಬ ಮಹಿಳೆಗೆ ತುರ್ತು ಹೃದಯ ಶಸ್ತ್ರಚಿಕಿತೆ ಅಗತ್ಯವಿದ್ದರೂ, ಸಮಯಕ್ಕೆ ಚಿಕಿತ್ಸೆ ನೀಡದೆ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಟುಂಬದವರ ಹೇಳಿಕೆ ಪ್ರಕಾರ, ಮಾಯಮ್ಮ ಅವರನ್ನು ಹೃದಯ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದರು, ನಿಗದಿತ ಸಮಯದಲ್ಲಿ ಶಸ್ತ್ರ ಚಿಕಿತ್ಸೆ ನಡೆಸದೆ ವಿಳಂಬ ಮಾಡಲಾಗಿದೆ ಎಂದು ಅವರು ದೂರಿದ್ದಾರೆ. ಈ ವಿಳಂಬದಿಂದ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟು ಕೊನೆಗೆ ಮೃತಪಟ್ಟಿದ್ದಾರೆ ಎಂಬುದು ಕುಟುಂಬದ ಆರೋಪವಾಗಿದೆ.

ಘಟನೆಯ ಬಳಿಕ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ, ವೈದ್ಯಕೀಯ ನಿರ್ಲಕ್ಷದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ತತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತದಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಇದೆ.

ಕುಟುಂಬಸ್ಥರ ಪ್ರಕಾರ, ಕಳೆದ ಶುಕ್ರವಾರ ಮಾಯಮ್ಮ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಗಳ ಬಳಿಕ ತಕ್ಷಣ ಓಪನ್ ಹಾರ್ಟ್ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ರವಾನಿಸಿದ್ದರು.

ಆದರೆ ಜಯದೇವ ಆಸ್ಪತ್ರೆಗೆ ದಾಖಲಾದ ನಂತರ ಸೋಮವಾರ ರಾತ್ರಿ ತನಕ ಅಗತ್ಯ ಚಿಕಿತ್ಸೆಯನ್ನು ಸಮಯಕ್ಕೆ ನೀಡಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತುರ್ತು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದರೂ ವಿಳಂಬ ಮಾಡಲಾಗಿದೆ. ಇದರಿಂದ ಮಾಯಮ್ಮ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟು, ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ವೈದ್ಯಕೀಯ ನಿರ್ಲಕ್ಷದ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ತಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು

ಆಗ್ರಹಿಸಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಮೃತೆಯ ಪುತ್ರ ಹಾಗೂ ಸೊಸೆಯ ಆರೋಪದ ಪ್ರಕಾರ, ಆಸ್ಪತ್ರೆಯ ಆಪರೇಷನ್ ಯೂನಿಟ್ ಬಳಕೆಯ ವಿಚಾರವಾಗಿ ಇಬ್ಬರು ವೈದ್ಯರ ನಡುವೆ ಉಂಟಾದ ಬಿನ್ನಾಭಿಪ್ರಾಯ ಮತ್ತು ಪೈಪೋಟಿಯ ಪರಿಣಾಮ ಮಾಯಮ್ಮ ಅವರಿಗೆ ನಿಗದಿತ ಸಮಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಲಿಲ್ಲ. ತುರ್ತು ಓಪನ್ ಹಾರ್ಟ್ ಶಸ್ತ್ರ ಚಿಕಿತ್ಸೆಅಗತ್ಯವಿದ್ದರೂ ವೈದ್ಯಕೀಯ ತಂಡದ ಸಮನ್ವಯದ ಕೊರತೆಯಿಂದ ಚಿಕಿತ್ಸೆ ವಿಳಂಬವಾಯಿತು ಎಂದು ಅವರು ದೂರಿದ್ದಾರೆ.

ಈ ವಿಳಂಬಕ್ಕೆ ಮಾಯಮ್ಮ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಡಲು ಮತ್ತು ಅಂತಿಮವಾಗಿ ಸಾವಿಗೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತ ಅಥವಾ ಸಂಬಂಧಿತ ವೈದ್ಯರಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಕುಟುಂಬಸ್ಥರ ಹೇಳಿಕೆ ಪ್ರಕಾರ, ಸೋಮವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮಾಯಮ್ಮ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತುರ್ತು ಹೃದಯ ಶಸ್ತ್ರ ಚಿಕಿತ್ಸೆ ಮತ್ತು ಅಗತ್ಯ ಚಿಕಿತ್ಸೆ ಸಮಯಕ್ಕೆ ದೊರೆತಿದ್ದರೆ ಅವರ ಜೀವ ಉಳಿಯುವ ಸಾಧ್ಯತೆ ಇತ್ತು ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ.

ಚಿಕಿತ್ಸೆಯಲ್ಲಿ ವಿಳಂಬ ಮತ್ತು ವೈದ್ಯಕೀಯ ನಿರ್ಲಕ್ಷವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿರುವ ಕುಟುಂಬಸ್ಥರು, ಪ್ರಕರಣದ ಕುರಿತು ನ್ಯಾಯ ಸಮ್ಮತ ಹಾಗೂ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆಡಳಿತ ಹಾಗೂ ಸಂಬಂಧಪಟ್ಟ ವೈದ್ಯರ ಪಾತ್ರದ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಯ ನಡೆದಿದೆಯೇ ಎಂಬುದನ್ನು ಪರಿಶೀಲಿಸಿ, ತಪ್ಪು ಸಾಬಿತಾದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರ ಮತ್ತು ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಪ್ರಕರಣವು ವೈದ್ಯಕೀಯ ಸೇವೆಗಳ ಗುಣಮಟ್ಟ ಹಾಗೂ ತುರ್ತು ಚಿಕಿತ್ಸೆಯ ನಿರ್ವಹಣೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದ್ದು, ಪ್ರಕರಣದ ಸತ್ಯಾಸತ್ಯತೆ ಬಳಿಕವೇ ಸ್ಪಷ್ಟವಾಗಲಿದೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಜಯದೇವ ಆಸ್ಪತ್ರೆ ಆಡಳಿತ ಅಥವಾ ಸಂಬಂಧಪಟ್ಟ ವೈದ್ಯರಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬೇರಬೇಕಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online