belagavi news :
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ (ಜುಲೈ 4) ಅವರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರದಿಂದಲೇ ಅವರು ಲಘು ಜ್ವರ, ಮೈಕೈ ನೋವು ಹಾಗೂ ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯಕೀಯ ಮೂಲಗಳ ಪ್ರಕಾರ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿರವಾಗಿದ್ದು, ಅಗತ್ಯ ತಪಾಸಣೆಗಳು ನಡೆಯುತ್ತಿವೆ. ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಶಿವಸೇನೆ (ಶಿಂಧೆ ಬಣ) ಮುಖ್ಯಸ್ಥ ಏಕನಾಥ್ ಶಿಂಧೆ ಅವರು ತೀವ್ರ ಜ್ವರ ಮತ್ತು ಸುಸ್ತು ಹಿನ್ನೆಲೆಯಲ್ಲಿ ಶನಿವಾರ ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರದಿಂದಲೇ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಲಘು ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಕಾರಣ ವೈದ್ಯರ ಸಲಹೆಯ ಮೇರೆಗೆ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ವೈದ್ಯರು ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದ್ದಾರೆ.
ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.
ಮುಖ್ಯಾಂಶಗಳು:
ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆ ದಾಖಲು
ಜ್ವರ ಮತ್ತು ಮೈಕೈ ನೋವಿನಿಂದ ಬಳಲಿಕೆ
ಆರೋಗ್ಯ ಸ್ಥಿರ, ಶೀಘ್ರದಲ್ಲೇ ಡಿಸ್ಚಾರ್ಜ್
ನಿಯಮಿತ ಆರೋಗ್ಯ ತಪಾಸಣೆ: ಆತಂಕ ಬೇಡ ಎಂದ ವೈದ್ಯರು
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದ ಕುರಿತು ಆಸ್ಪತ್ರೆಯ ಮೂಲಗಳು ಸ್ಪಷ್ಟನೆ ನೀಡಿದ್ದು, ಸದ್ಯ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ (ರೂಟಿನ್ ಹೆಲ್ತ್ ಚೆಕಪ್ ) ನಡೆಸಲಾಗುತ್ತಿದೆ ಎಂದು ತಿಳಿಸಿದೆ.
ವೈದ್ಯರ ಪ್ರಕಾರ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿರವಾಗಿದ್ದು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಜ್ವರ ಮತ್ತು ಸುಸ್ತಿಗೆ ನಿಖರ ಕಾರಣ ತಿಳಿಯಲು ವೈದ್ಯರ ತಂಡವು ವಿವಿಧ ರಕ್ತ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಲಾಯಿತು.
ಸದ್ಯಕ್ಕೆ ಆಸ್ಪತ್ರೆಯ ಕಡೆಯಿಂದಲೂ ಅಥವಾ ಉಪಮುಖ್ಯಮಂತ್ರಿಗಳ ಕಚೇರಿಯಿಂದಲೂ ಯಾವುದೇ ಅಧಿಕೃತ ವೈದ್ಯಕೀಯ ಬುಲೆಟಿನ್ ಬಿಡುಗಡೆಯಾಗಿಲ್ಲ. ಚಿಕಿತ್ಸೆ ಹಾಗೂ ತಪಾಸಣೆಗಳು ಮುಂದುವರೆದಿವೆ.
ಶೀಘ್ರದಲ್ಲೇ ಕೆಲಸಕ್ಕೆ ವಾಪಸ್:
ಮಹಾರಾಷ್ಟ್ರದಲ್ಲಿ ಸದ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ಜ್ವರ ಮತ್ತು ವೈರಸ್ ಇನ್ಫೆಕ್ಷನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಉಪಮುಖ್ಯಮಂತ್ರಿಗಳು ಏಕನಾಥ್ ಶಿಂಧೆ ಅವರಿಗೂ ಹವಾಮಾನ ಬದಲಾವಣೆಯಿಂದ ಉಂಟಾಗುವ ಜ್ವರದ ಲಕ್ಷಣಗಳು ಕಾಣಿಸಿಕೊಂಡಿರಬಹುದು ಎಂದು ಮೂಲಗಳು ತಿಳಿಸಿವೆ.
ಶಿಂಧೆ ಅವರ ಆರೋಗ್ಯದ ಬಗ್ಗೆ ಶಿವಸೇನೆಯ ಹಿರಿಯ ನಾಯಕರು ಹಾಗೂ ಸರ್ಕಾರಿ ಅಧಿಕಾರಿಗಳು ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಸದ್ಯ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಪಕ್ಷದ ಮೂಲಗಳ ಪ್ರಕಾರ, ಅಗತ್ಯ ವೈದ್ಯಕೀಯ ತಪಾಸಣೆಗಳು ಪೂರ್ಣಗೊಂಡ ನಂತರ ಅವರನ್ನು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವ ಸಾಧ್ಯತೆ ಇದೆ. ಬಳಿಕ ಅವರು ಮರಳಿ ತಮ್ಮ ದೈನಂದಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.