<?= $pageTitle ?>
Logo
ಮುಖಪುಟ ಓದುವುದು ಕೇಳು
Trending

NDA ಸರ್ಕಾರ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲಿದೆ : ಪಿಯೂಷ್ ಗೋಯಲ್

NDA ಸರ್ಕಾರ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲಿದೆ : ಪಿಯೂಷ್ ಗೋಯಲ್
Summary: ತಮಿಳುನಾಡಿನಲ್ಲಿ AIADMK ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕೃತವಾಗಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
Belagavi news :

ಪ್ರಧಾನಿ ನರೇಂದ್ರ ಮೋದಿ ಜನವರಿ 23ರಂದು ಚೆನ್ನೈಗೆ ಆಗಮಿಸುವ ಹಿನ್ನೆಲೆಯಲ್ಲಿ, ಎನ್ ಡಿ ಎ ಮೈತ್ರಿಕೂಟದ ನಿರ್ಣಾಯಕ ಮಾತುಕತೆ ಇಂದು ನಡೆಯಿತು. ಈ ಸಭೆಯಲ್ಲಿ ಮೈತ್ರಿಕೂಟದ ಪ್ರಮುಖ ನಾಯಕರನ್ನು ಸೇರಿ ಮುಂದಿನ ರಾಜಕೀಯ ತೀರ್ಮಾನಗಳು ಮತ್ತು ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಯಿತು.


ಮೈತ್ರಿ ಕಷ್ಟದ ಒಳಗಿನ ಪಕ್ಷಗಳು ಮುಂದಿನ ಚುನಾವಣಾ ಪ್ರಕ್ರಿಯೆ, ಅಖಿಲ ಭಾರತೀಯ ಮಟ್ಟದಲ್ಲಿ ಹೊಂದಾಣಿಕೆ, ಮತ್ತು ಸ್ಥಳೀಯ ರಾಜಕೀಯ ಧಾರಣೆಗಳನ್ನು ದೃಢಪಡಿಸುವುದರ ಕುರಿತು ತೀರ್ಮಾನ ತೆಗೆದುಕೊಂಡಿದ್ದು, ಪ್ರಧಾನಿ ಭೇಟಿ ಸುತ್ತದ ಕಾರ್ಯಕ್ರಮಗಳ ಯೋಜನೆಗಳ ಬಗ್ಗೆ ಕೂಡ ಚರ್ಚೆ ನಡೆಸಲಾಗಿದೆ.


ಈ ಸಭೆಯ ನಿರ್ಣಯಗಳು ಎನ್ ಡಿ ಎ ಮೈತ್ರಿಕೂಟದ ಮುಂದಿನ ತಂತ್ರಗಳನ್ನು ನಿರ್ಧರಿಸುವ ಪ್ರಮುಖ ಸೂಚಕವಾಗಿದ್ದು, ರಾಜಕೀಯ ದೃಷ್ಟಿಕೋನದಿಂದ ಈ ವಾರವೇ ಪ್ರಮುಖ ಬೆಳವಣಿಗೆಗಳ ಸಂಭವಿಸಬಹುದೆಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.


ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ತಮಿಳುನಾಡು ಸಜ್ಜಾಗಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯ ಸೀಟು ಹಂಚಿಕೆ ಸೇರಿದಂತೆ ಇತರೆ ಮಹತ್ವದ ವಿಷಯಗಳ ಕುರಿತು ನಿರ್ಣಾಯಕ ಮಾತುಕತೆ ಮುಗಿದಿದ್ದು, ರಾಜಕೀಯ ವಲಯದಲ್ಲಿ ಪ್ರಮುಖ ಬೆಳವಣಿಗೆಗೆ ದಾರಿ ಮಾಡಿದೆ.


ಈ ಸಂದರ್ಭದಲ್ಲಿ ಮಾತನಾಡಿದ ತಮಿಳುನಾಡು ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಏಪ್ರಿಲ್ ನಲ್ಲಿ ಬಲಿಷ್ಠ ಎಐಎಡಿಎಂಕೆ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ"ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅವರು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಮೂಲಕ ತಮಿಳುನಾಡಿನ ಭವಿಷ್ಯ ಬದಲಾಯಿಸಲಿದೆ ಎಂದು ತಿಳಿಸಿದರು.


ಮಾತುಕತೆಯ ಬಳಿಕ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ,ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು,"ಡಿಎಂಕೆಯ ಭ್ರಷ್ಟ ಆಡಳಿತವನ್ನು ಕೊನೆಗೊಳಿಸಲು ನಾವು ಬಿಜೆಪಿ ಜೊತೆ ಸೇರಿ ಚುನಾವಣೆ ಎದುರಿಸಲಿದ್ದೇವೆ. ರಾಜ್ಯದ ಜನರ ಕಲ್ಯಾಣ ಮತ್ತು ವೈಭವವನ್ನು ಮರು ಸ್ಥಾಪಿಸುವುದು ನಮ್ಮ ಉದ್ದೇಶ"ಎಂದು ತಿಳಿಸಿದ್ದಾರೆ.


ರಾಜಕೀಯ ತಜ್ಞರು ಈ ಮೈತ್ರಿ ಸರ್ಕಾರಿ ಅನುಭವ ಮತ್ತು ಚುನಾವಣಾ ತಂತ್ರಗಳನ್ನು ಪರಿಗಣಿಸಿ, ತಮಿಳುನಾಡಿನ ಚುನಾವಣೆ ಪ್ರಕ್ರಿಯೆಯನ್ನು ಪ್ರಭಾವಿತ ಮಾಡುವ ಮಹತ್ವದ ಬೆಳವಣಿಗೆಗೆ ಎಂದು ವಿಶ್ಲೇಷಿಸಿದ್ದಾರೆ.


ಜನವರಿ 23ಕ್ಕೆ ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ:
ಜನವರಿ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈಗೆ ಆಗಮಿಸಲಿದ್ದು, ಈ ಭೇಟಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯವಾಗಿ ಮಹತ್ವ ಪಡೆದಿದೆ. ಪ್ರಧಾನಿ ಭೇಟಿ ಮುನ್ನವೇ ರಾಜ್ಯದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಅಂತಿಮ ರೂಪ ನೀಡುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.


ಇದರ ಭಾಗವಾಗಿ, ತಮಿಳುನಾಡು ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಅವರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಇಂದು ಬೆಳಗ್ಗೆ ಚೆನ್ನೈನ ಗ್ರೀನ್ ವೆಸ್ ರಸ್ತೆಯ ನಿವಾಸದಲ್ಲಿ ಭೇಟಿ ಮಾಡಿ ಉಪಹಾರ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಸೀಟು ಹಂಚಿಕೆ, ಪ್ರಚಾರ ತಂತ್ರ ಮತ್ತು ಮೈತ್ರಿಕೂಟದ ಭವಿಷ್ಯ ರಣತಂತ್ರಗಳ ಕುರಿತು ಚರ್ಚೆ ನಡೆದಿರುವುದು ತಿಳಿದುಬಂದಿದೆ.


ರಾಜ್ಯದಲ್ಲಿ ಎನ್ ಡಿ ಎ ನೇತೃತ್ವವನ್ನು ಎಐಎಡಿಎಂಕೆ ವಹಿಸಲಿದೆ ಎಂದು ಸ್ಪಷ್ಟವಾಗಿದ್ದು, ಮೈತ್ರಿಕೂಟದಲ್ಲಿ ಬಿಜೆಪಿ, ಪಿಎಂಕೆ, ಎಎಂಎಂಕೆ, ಮತ್ತು ಮಾಜಿ ಕೇಂದ್ರ ಸಚಿವರ ನೇತೃತ್ವದ ತಮಿಳ್ ಮಾನಿಲಾ ಕಾಂಗ್ರೆಸ್ ಪಕ್ಷಗಳು ಸೇರವೆ.


ಪ್ರಧಾನಿ ಮೋದಿ ಅವರ ಚೆನ್ನೈ ಭೇಟಿ ಮತ್ತು ಮೈತ್ರಿಕೂಟದ ಅಂತಿಮ ರೂಪ, ತಮಿಳುನಾಡಿನ ರಾಜಕೀಯ ಚಿತ್ರಣವನ್ನು ಪರಿಗಣಿಸಲಾಗುತ್ತಿದೆ.


ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಪಿಯೂಷ್ ಗೋಯಲ್:
ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ , ಡಿಎಂಕೆ ನಾಯಕ ಹಾಗೂ ಉಪಮುಖ್ಯಮಂತ್ರಿ ಉದಯ್ ನಿಧಿ ಸ್ಟಾಲಿನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸನಾತನ ಧರ್ಮ ಕುರಿತು ನೀಡಿದ್ದ ಹೇಳಿಕೆ ಸಂಬಂಧ ಮದ್ರಾಸ್ ಹೈಕೋರ್ಟ್ ದ್ವೇಷ ಭಾಷಣದ ವಿರುದ್ಧ ಆದೇಶ ಹೊರಡಿಸಿರುವುದನ್ನು ಉಲ್ಲೇಖಿಸಿ, ಉದಯ ನಿಧಿ ಅವರನ್ನು ತಕ್ಷಣವೇ ರಾಜ್ಯ ಸರ್ಕಾರದಿಂದ ಪದಶ್ಚಿತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.


ಉದಯನಿಧಿಯ ಹೇಳಿಕೆಗಳು ದೇಶ ವಿರೋಧಿ ಸ್ವರೂಪದ್ದಾಗಿವೆ ಎಂದು ಆರೋಪಿಸಿದ ಗೋಯಲ್, ಇಂಥ ಹೇಳಿಕೆಗಳನ್ನು ನಾವು ಕಟುವಾಗಿ ವಿರೋಧಿಸುತ್ತೇವೆ. ಜನರನ್ನು ವಿಭಜಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಮತ್ತು ದ್ವೇಷವನ್ನು ಹರಡುವ ಭಾಷಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.


ಇದೇ ವೇಳೆ, ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ಮಗನ ಹೇಳಿಕೆಗಳ ಬಗ್ಗೆ ಫಸ್ಟ್ ನಿಲುವು ತಾಳಬೇಕು ಎಂದು ಸರ್ಕಾರದ ಜವಾಬ್ದಾರಿಯನ್ನು ತೋರಬೇಕು ಎಂದು ಗೊಯಲ್ ಒತ್ತಾಯಿಸಿದರು. ಈ ಹೇಳಿಕೆಗಳೊಂದಿಗೆ ತಮಿಳುನಾಡಿನ ರಾಜಕೀಯ ವಾತಾವರಣ ಮತ್ತಷ್ಟು ಬಿಸಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರ ದೊಡ್ಡ ರಾಜಕೀಯ ಸಂಘರ್ಷಕ್ಕೆ ದಾರಿ ಮಾಡಿ ಕೊಡುವ ಸಾಧ್ಯತೆ ಇದೆ.


ಇನ್ನಷ್ಟು ಓದಿರಿ:


World Bank Career Opportunity: ವಿಶ್ವ ಬ್ಯಾಂಕಿನಲ್ಲಿ ಉದ್ಯೋಗ ಪಡೆಯುವ ಸುವರ್ಣ ಅವಕಾಶ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online