Belagavi News:
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸಂಸದೀಯ ಪಕ್ಷದ ಸಾಪ್ತಾಹಿಕ ಸಭೆ 'ಮಂಗಳ ಮಿಲನ್' ಇಂದು ನಡೆಯಲಿದೆ. ಈ ಬಾರಿ ಹೊಸದಾಗಿ ರಚನೆಯಾದ ನ್ಯಾಷನಲಿಸ್ಟ್ ಸಿಟಿಜನ್ ಪಾರ್ಟಿ ಆಫ್ ಇಂಡಿಯಾ (ಎನ್ ಸಿಪಿಐ) ಮೊದಲ ಬಾರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.
ಸಂಸದೀಯ ಗ್ರಂಥಾಲಯದ ಕಟ್ಟಡದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಎನ್ ಸಿಪಿಐ ಸಂಸದರು ಭಾಗವಹಿಸುವ ನಿರೀಕ್ಷೆಯಿದೆ. ಟಿಎಂಸಿಯಿಂದ ಹೊರಬಂದು ಎನ್ಸಿಪಿಐ ಸೇರಿಸುವ ನಾಯಕರು ಇದೇ ಮೊದಲ ಬಾರಿಗೆ ಎನ್ಡಿಎ ಸಭೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುದೀಪ ಬಂಡೋಪಾಧ್ಯಾಯ, ಕಾಕೋಲಿ ಘೋಷ್, ಶತಾಬ್ದಿ ರಾಯ್, ಶರ್ಮಿಳಾ ಸರ್ಕಾರ್, ಮಿತಾಲಿ ಬಾಗ್ ಸೇರಿದಂತೆ ಹಲವು ಸಂಸದರು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಪ್ರತಿಭಟನೆ ಮತ್ತು ಗದ್ದಲದ ನಡುವೆ ನಡೆಯುತ್ತಿರುವ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ, ಪರೀಕ್ಷಾ ಸುಧಾರಣೆಗಳು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮದ ಆರೋಪಗಳು ಪ್ರಮುಖ ಚರ್ಚಾ ವಿಷಯಗಳಾಗುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎನ್ ಡಿಎ ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಬೇಕು ಮುನ್ನ ಮಾತನಾಡಿದ ಸಂಸದೀಯ ಸಚಿವ ಕಿರಣ್ ರಿಜಿಜು, ಪ್ರಧಾನಿ ಮೋದಿ ಅವರು ವಿದ್ಯಾರ್ಥಿಗಳ ಪರ ನಿಲ್ಲಲಿದ್ದು, ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದಾರೆ ಎಂದು ಹೇಳಿದರು. ಪ್ರಶ್ನೆ ಪತ್ರಿಕೆ ಸೋರಿಕೆ ರಾಷ್ಟ್ರೀಯ ಮಟ್ಟದ ಕಳವಳಕಾರಿ ವಿಷಯವಾಗಿದ್ದು ಇದನ್ನು ರಾಜಕೀಯಗೊಳಿಸಬಾರದು ಎಂದು ಅವರು ತಿಳಿಸಿದರು.
ಇದಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಆಫ್ ಇಂಡಿಯಾ ಗೆ ಸರ್ಕಾರ ಆಹ್ವಾನ ನೀಡಿದ್ದನ್ನು ವಿರೋಧಿಸಿ ವಿಪಕ್ಷ ನಾಯಕರು ಕೆಲಕಾಲ ಸಭೆಯಿಂದ ಹೊರನಡೆದಿದ್ದರು.
ಇದೇ ವೇಳೆ, ಇಂಡಿಯಾ ಒಕ್ಕೂಟದ ನಾಯಕರ ಸಭೆ ಸಂಸತ್ ಭವನದಲ್ಲಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಸಂಸತ್ತಿನ ಉಭಯ ಸದನಗಳ ಕಲಾಪದಲ್ಲಿ ಅನುಸರಿಸಬೇಕಾದ ಏಕೀಕೃತ ಕಾರ್ಯತಂತ್ರ ಹಾಗೂ ನಿಲುವುಗಳ ಕುರಿತು ನಾಯಕರು ಚರ್ಚಿಸಲಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವ ಸಂದರ್ಭದಲ್ಲಿ ಎರಡು ಕಡೆಯ ಸಭೆಗಳು ಮಹತ್ವ ಪಡೆದಿವೆ.
Also Read :
ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ವಿವಾದ ಅಂತ್ಯ: ಲೋಕಸಭೆಯಲ್ಲಿ ಇಂದು ಚರ್ಚೆ