Belagavi News:
ಕೇಂದ್ರ ಸರ್ಕಾರವು "ದೀಕ್ಷಿತ್ ಭರತ್ ಜಿ ರಾಮ್ ಜಿ ಕಾಯಿಗೆ 2025" ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಈ ಮಹತ್ವದ ಯೋಜನೆ ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿದೆ. ಈ ಯೋಜನೆಯಲ್ಲಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಕಾತರಿ ಉದ್ಯೋಗ ನೀಡಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ತಿಳಿಸಿದ್ದಾರೆ.
ಭೋಪಾಲ್ ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದವರು, ಈ ಹೊಸ ಕಾಯ್ದೆಯನ್ನು ಅಧಿಕೃತವಾಗಿ ವೀಕ್ಷಿತ್ ಭಾರತ್ ಗ್ಯಾರೆಂಟಿ ಫಾರ್ ರೋಜ್ ಗಾರ್ ಮತ್ತು ಅಜೀವಿಕ ಮಿಷನ್ ಗ್ರಾಮೀಣ ಎಂದು ಹೆಸರಿಸಲಾಗಿದೆ ಎಂದು ಹೇಳಿದರು. ಈ ಯೋಜನೆ ದೀಕ್ಷಿತ್ ಭರತ್ ದೃಷ್ಟಿಕೋನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಚೌಕಟ್ಟನ್ನು ಬದಲಾಯಿಸಿ, ಅದನ್ನು ಇನ್ನಷ್ಟು ವಿಸ್ತರಿಸುತ್ತದೆ ಎಂದು ಅವರು ವಿವರಿಸಿದರು.
ಹೊಸ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ಸಿಗಲಿದ್ದು, ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಜೊತೆಗೆ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶವು ಇದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಘೋಷಣೆಯಿಂದ ಗ್ರಾಮೀಣ ಕುಟುಂಬಗಳಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಯೋಜನೆ ಜಾರಿಗೆ ಬಂದ ನಂತರ ಉದ್ಯೋಗ ಭದ್ರತೆ ಹಾಗೂ ಆದಾಯ ಹೆಚ್ಚಳಕ್ಕೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.
ಕೇಂದ್ರ ಸರ್ಕಾರವು "ವೀಕ್ಷಿತ್ ಭಾರತ್ ಜಿ ರಾಮ್ ಜಿ 2025" ಜಾರಿಗೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟನೆ ನೀಡಿದ್ದು, ಜುಲೈ 1 ರಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಹುಡುಕುತ್ತಿರುವ ಸಹೋದರ ಸಹೋದರಿಯರಿಗೆ ವರ್ಷಕ್ಕೆ 100 ಅಲ್ಲ 125 ದಿನಗಳ ಖಾತರಿ ಉದ್ಯೋಗ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾನ್ ತಿಳಿಸಿದ್ದಾರೆ.
ಯೋಜನೆಯ ಅನುಷ್ಠಾನದ ಪರಿವರ್ತನಾ ಅವಧಿಯಲ್ಲಿ ಈಗಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಎಲ್ಲಾ ನಿರ್ಬಂಧನೆಗಳು ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ. ಜುಲೈ 1ರವರೆಗೆ MGNREGA ಅಡಿಯಲ್ಲಿ ಪ್ರಾರಂಭಗೊಂಡಿರುವ ಅಪೂರ್ಣ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಹೊಸ ಯೋಜನೆ ಜಾರಿಗೆ ರಾಜ್ಯಗಳಿಗೆ ಅಗತ್ಯ ಶುದ್ಧತೆಗಳನ್ನು ಪೂರ್ಣಗೊಳಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗುತ್ತಿದೆ. ಅವಧಿಯಲ್ಲಿ ರಾಜ್ಯಗಳು ಯೋಜನೆ ಅನುಷ್ಠಾನಕ್ಕೆ ಬೇಕಾದ ವ್ಯವಸ್ಥೆಗಳನ್ನು ರೂಪಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಚೌಹಾನ್ ಅವರ ಪ್ರಕಾರ, ಜುಲೈ ಒಂದರ ನಂತರ ಯಾವುದೇ ರಾಜ್ಯ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲು ವಿಫಲವಾದರೆ,ಉದ್ಯೋಗ ಯೋಜನೆಗೆ ನೀಡುವ ಹಣಕಾಸಿನ ವ್ಯವಸ್ಥೆ ವಿಕ್ಷಿತ್ ಭಾರತ್ ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ನಿರ್ವಹಿಸಲಾಗುತ್ತದೆ.
ಈ ಹೊಸ ಕ್ರಮದಿಂದ ಗ್ರಾಮೀಣ ಉದ್ಯೋಗ ವ್ಯವಸ್ಥೆ ಮತ್ತಷ್ಟು ಬಲಪಡಿಸಿ, ನಿರುದ್ಯೋಗ ಸಮಸ್ಯೆಗೆ ದೀರ್ಘಕಾಲಿನ ಪರಿಹಾರ ಸಿಗಲಿದೆ ಎಂದು ಕೇಂದ್ರ ಸರ್ಕಾರ ನಿರೀಕ್ಷ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರವು ವಿಕ್ಷಿತ್ ಭಾರತ್ ಜಿ ರಾಮ್ ಜಿ ಕಾಯಿದೆ ಅನುಷ್ಠಾನಕ್ಕಾಗಿ ಬಜೆಟ್ ನಲ್ಲಿ ₹95,600 ಕೋಟಿಗೂ ಹೆಚ್ಚು ಹಣವನ್ನು ಹಂಚಿಕೆ ಮಾಡಿದೆ. ಈ ಮಹಾತ್ಮನ ಯೋಜನೆ ಜುಲೈ 1 ರಿಂದ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.
ಈ ಯೋಜನೆಯು ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಕಾತರಿ ಉದ್ಯೋಗ ಒದಗಿಸುವ ಉದ್ದೇಶ ಹೊಂದಿದ್ದು, ಗ್ರಾಮೀಣ ಉದ್ಯೋಗ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ನಿರೀಕ್ಷಿಸಲಾಗಿದೆ.
ಆದರೆ ಈ ಯೋಜನೆಯ ಪರಿಣಾಮ ಕೈಗಾರಿಕಾ ವಲಯದ ಮೇಲೂ ಕಾಣಿಸಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಗ್ರಾಮೀಣ ಕಾರ್ಮಿಕ ಪೂರೈಕೆಯ ಮೇಲೆ ಅವಲಂಬಿತವಾಗಿರುವ ಕೈಗಾರಿಕೆಗಳು, ಕಾರ್ಮಿಕರು ಖಾಸಗಿ ವಲಯ ಮತ್ತು ನಿರ್ಮಾಣ ಕೆಲಸಗಳಿಗಿಂತ ಸರ್ಕಾರದ ಖಾತರಿ ವೇತನ ಉದ್ಯೋಗವನ್ನು ಆಯ್ಕೆ ಮಾಡುವ ಸಾಧ್ಯತೆಯಿಂದ ಒತ್ತಡ ಎದುರಿಸಬಹುದು.
ಇನ್ನೊಂದೆಡೆ, ಗ್ರಾಮೀಣ ಪ್ರದೇಶಗಳ ಖರೀದಿ ಶಕ್ತಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಎಫ್ಎಂಸಿಜಿ ಕೃಷಿ ಸಂಬಂಧಿತ ಉತ್ಪನ್ನಗಳು ಮತ್ತು ಗ್ರಾಮೀಣ ಕೇಂದ್ರೀತ ವ್ಯವಹಾರಗಳಿಗೆ ಹೊಸ ಬೇಡಿಕೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ.
ಒಟ್ಟಾರೆ, VB-G RAM G ಕಾಯಿದೆ ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ಬಲಪಡಿಸುವ ಜೊತೆಗೆ ಆರ್ಥಿಕ ಚಲನವಲನಕ್ಕೂ, ಪ್ರಭಾವ ಬೀರುವ ಪ್ರಮುಖ ನೀತಿಯಾಗಿ ಪರಿಣಮಿಸುವ ನಿರೀಕ್ಷೆ ಇದೆ.
Also Read: