BELAGAVI NEWS :
ಭಾರತ ವೆನಿಜುವೆಲಾ ಸಂಬಂಧಗಳಿಗೆ ಹೊಸ ಉತ್ತೇಜನ: ಮೋದಿ - ಡೆಲ್ಸಿ ರೊಡ್ರಿಗಸ್ ಮಾತುಕತೆ
ವೆನಿಜುವಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಕುರಿತು ಮಹತ್ವದ ಮಾತುಕತೆ ನಡೆಸಿದರು. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜಯಶಂಕರ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮೆಸ್ರಿ ಕೂಡ ಭಾಗವಹಿಸಿದ್ದರು
ಭಾರತದ ವಿದೇಶಾಂಗ ಸಚಿವಾಲಯದ ಪ್ರಕಾರ, ಈ ಸಭೆಯಲ್ಲಿ ಭಾರತ ವೆನಿಲ್ಲಾ ಸಂಬಂಧಗಳ ಸಮಗ್ರ ಪರಿಶೀಲನೆ ನಡೆಸಲಾಗಿದ್ದು, ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಔಷಧೋದ್ಯಮ, ಆರೋಗ್ಯ ಸೇವೆ, ಸಾರಿಗೆ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸರ್ಕಾರವನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ಚರ್ಚೆ ನಡೆಸಲಾಯಿತು.
ರೋಟರಿಗಸ್ ಅವರು ಜೂನ್ ಮೂರರಿಂದ ಏಳರವರೆಗೆ ಭಾರತಕ್ಕೆ ಐದು ದಿನಗಳ ಅಧಿಕೃತ ಕಾರ್ಯ ಭೇಟಿ ಕೈಗೊಂಡಿದ್ದು, ಈ ಭೇಟಿ ಭಾರತ ಮತ್ತು ವೆನಿಜುವೆಲಾ ನಡುವಿನ ಪರಂಪರೆ ಸ್ನೇಹಪೂರ್ವ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ. ಇತ್ತೀಚಿನ ತಿಂಗಳುಗಳಲ್ಲಿ ಭಾರತವು ವೆನಿಜುಲಾ ದಿಂದ ಕಚ್ಚಾ ತೈಲ ಆಮದು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಈ ಭೇಟಿ ವಿಶೇಷ ಮಹತ್ವ ಲಭಿಸಿದೆ. ಈ ಉನ್ನತ ಮಟ್ಟದ ಮಾತುಕತೆಯಿಂದ ಇಂಧನ ಕ್ಷೇತ್ರದ ಜೊತೆಗೆ ತಂತ್ರಜ್ಞಾನ, ಆರೋಗ್ಯ,ಹೂಡಿಕೆ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿಯೂ ಹೊಸ ಸಹಕಾರದ ಅವಕಾಶಗಳು ಮೂಡುವ ನಿರೀಕ್ಷೆ ಇದೆ.
ಇದಕ್ಕೂ ಮುನ್ನ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ರೊಡ್ರಿಗಸ್ ರನ್ನು ಭೇಟಿಯಾಗಿದ್ದು, ದಕ್ಷಿಣ ಅಮೇರಿಕಾ ದೇಶಗಳೊಂದಿಗೆ ಭಾರತದ ಸಂಬಂಧ ಬಲಪಡಿಸುವ ಬದ್ಧತೆಯನ್ನು ಪುನರ್ ಉಚ್ಚರಿಸಿದರು.
ಈ ಬೇಟಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವ ಎಸ್ ಜಯಶಂಕರ್, ವೆನಿಜುವೆಲ್ಲಾದ ನಡುವೆ ದೀರ್ಘ ಕಾಲದ ಸ್ನೇಹ ಪರ ಮತ್ತು ಸಹಕಾರದ ಸಂಬಂಧಗಳನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಡೆಲ್ಸಿ ರೊಡ್ರಿಗಸ್ ನಡುವಿನ ಮಾತುಕತೆಯು ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಹಯೋಗಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೊಂದೆಡೆ, ವೆನಿಜುವೆಲ್ಲಾ ನಿಯೋಗವನ್ನು ಸ್ವಾಗತಿಸಿ ವಿದೇಶಾಂಗ ಸಚಿವಾಲಯವು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಈ ಉನ್ನತ ಮಟ್ಟದ ಭೇಟಿಯು ಭಾರತ ಮತ್ತು ವೆನಿಜುವೆಲಾ ನಡುವಿನ ದ್ವಿಪಕ್ಷಿಯ ಸಂಬಂಧಗಳನ್ನು ಇನ್ನಷ್ಟು ವಿಸ್ತರಿಸಲು ಮಹತ್ವದ ಅವಕಾಶ ಕಲ್ಪಿಸಲಿದೆ ಎಂದು ಹೇಳಿದೆ. ಇಂಧನ, ವ್ಯಾಪಾರ, ಹೂಡಿಕೆ, ಆರೋಗ್ಯ, ಔಷಧೋದ್ಯಮ, ಸಾರಿಗೆ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಮೂಲಕ ಉಭಯ ದೇಶಗಳ ಪಾಲುದಾರಿಕೆಗೆ ಹೊಸ ವೇಗ ದೊರೆಯಲಿದೆ ಎಂದು ಆಶಯವನ್ನು ವ್ಯಕ್ತಪಡಿಸಿದೆ.
ಈ ಭೇಟಿಯು ಕೇವಲ ರಾಜತಾಂತ್ರಿಕ ಸಂಬಂಧಗಳ ಪರಿಶೀಲನೆಗೆ ಸೀಮಿತವಾಗದೇ, ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ದೀರ್ಘ ಕಾಲಿಕ ಸಕಾರಕ್ಕೆ ವೇದಿಕೆ ಸೂಚಿಸುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಭಾರತ ಮತ್ತು ವೆನಿಜುವೆಲಾ ನಡುವಿನ ಬಲವಾದ ಸ್ನೇಹ ಹಾಗೂ ಅಭಿವೃದ್ಧಿ ಸಹಭಾಗಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಮಾತುಕತೆ ಮಹತ್ವದ್ದಾಗಿದೆ.
ವೆನಿಜುವಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರ ನೇತೃತ್ವದ ನಿಯೋಗ ಜೂನ್ ೩ ರಿಂದ ಜೂನ್ ೭ರವರೆಗೆ ಭಾರತದ ಅಧಿಕೃತ ಪ್ರವಾಸದಲ್ಲಿದ್ದಾರೆ. ಈ ಭೇಟಿಯು ಭಾರತ -ವೆನಿಜುವೆಲಾ ನಡುವಿನ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನ್ನು ನೀಡುವ ನಿರೀಕ್ಷೆ ಮೂಡಿಸಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ, ಆರ್ಥಿಕ ಮತ್ತು ತಾಂತ್ರಿಕ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಈ ಪ್ರವಾಸ ಆಯೋಜಿಸಲಾಗಿದೆ.
ಮೂಲತಃ ರೊಡ್ರಿಗಸ್ ಅವರು ಜೂನ್ ಒಂದರಂದು ನವದೆಹಲಿಯಲ್ಲಿ ನಡೆಯಬೇಕಿದ್ದ ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ ಅಲೈಯನ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ ಕಾರ್ಯಕ್ರಮವನ್ನು ನಂತರ ಮುಂದೂಡಲಾದ ಕಾರಣ, ಅವರ ಅಧಿಕೃತ ಭಾರತ ಭೇಟಿಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಈ ಬಾರಿ ರೊಡ್ರಿಗಸ್ ರೊಂದಿಗೆ ವೆನಿಜುವಲದ ಇದರಿಂದ ವಿವಿಧ ಪ್ರಮುಖ ಸಚಿವಾಲಯಗಳನ್ನು ಪ್ರತಿನಿಧಿಸುವ ಉನ್ನತ ಮಟ್ಟದ ನಿಯೋಗ ಭಾರತಕ್ಕೆ ಆಗಮಿಸಿದೆ. ನಿಯೋಗದ ವಿದೇಶಾಂಗ ವ್ಯವಹಾರಗಳು, ಆರ್ಥಿಕತೆ ಮತ್ತು ಹಣಕಾಸು, ವಿಜ್ಞಾನ ಮತ್ತು ತಂತ್ರಜ್ಞಾನ, ಸಂವಹನ ಮತ್ತು ಮಾಹಿತಿ ಹಾಗೂ ಸಾರಿಗೆ ಕ್ಷೇತ್ರಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸೇರಿದ್ದಾರೆ. ಇದರಿಂದ ಉಭಯ ದೇಶಗಳ ನಡುವೆ ಹಲವು ಕ್ಷೇತ್ರಗಳಲ್ಲಿ ಸಮಗ್ರ ಚರ್ಚೆ ನಡೆಸಲು ಮತ್ತು ಹೊಸ ಸಹಕಾರದ ಅವಕಾಶಗಳನ್ನು ಅನ್ವಯಿಸಲು ವೇದಿಕೆ ಸಿಕ್ಕಿದೆ.
ಭಾರತ ಮತ್ತು ವೆನಿಜುವೆಲಾ ನಡುವಿನ ಮಾತುಕತೆಯಲ್ಲಿ ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಆರೋಗ್ಯ ಸೇವೆ, ಔಷಧೋದ್ಯಮ, ನವೀಕರಿಸಬಹುದಾದ ಇಂಧನ, ವಿಜ್ಞಾನ ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಷಯಗಳು ಚರ್ಚೆಗೆ ಬಂದಿವೆ. ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಎರಡು ದೇಶಗಳು ಒತ್ತಿ ಹೇಳುತ್ತಿವೆ.
Also Read:
ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಡ್ರೋನ್ ಗಳನ್ನು ಹೊಡೆದೂರುಳಿಸಿದ ಕುವೈತ್, USನಿಂದ ಪ್ರತಿದಾಳಿ!