belagavi news:
ಬೆಂಗಳೂರು, ಮೇ 6: ಕರ್ನಾಟಕದ ನಾಯಕತ್ವದ ಕುರಿತು ನಡೆಯುತ್ತಿರುವ ಗೊಂದಲಕ್ಕೆ ಸಂಬಂಧಿಸಿದಂತೆ ಸಚಿವ ಡಿ. ಜಿ. ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣೆ ಪ್ರಕ್ರಿಯೆಗಳು ಮುಗಿದಿರುವ ಹಿನ್ನೆಲೆಯಲ್ಲಿ ಈ ವಿಷಯ ಶೀಘ್ರದಲ್ಲೇ ಅಂತ್ಯವಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ರಾಜ್ಯದ ಪ್ರಮುಖ ಆದ್ಯತೆ ಸಮರ್ಪಕ ಆಡಳಿತವನ್ನು ನೀಡುವುದು ಆಗಿದ್ದು, ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ರಾಜಕೀಯ ಚರ್ಚೆಗಳು ಮುಂದುವರಿದಿದ್ದರೂ, ಆಡಳಿತದ ಸ್ಥಿರತೆ ಮತ್ತು ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನವೇ ಮುಖ್ಯ ಗುರಿಯಾಗಿರಬೇಕು ಎಂದು ಪರಮೇಶ್ವರ್ ಹೇಳಿದ್ದಾರೆ.
ಹಲವಾರು ನಾಯಕರು ಮುಂಚೂಣಿಯಲ್ಲಿ ಇರುವ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಸಚಿವ ಡಿ.ಜಿ. ಪರಮೇಶ್ವರ್ ಹೇಳಿದ್ದಾರೆ.
ಆದರೆ ಈಗ ಚುನಾವಣೆಗಳ ಗಜಿಬಿಜಿ ಇಲ್ಲದಿರುವುದರಿಂದ ಹೈಕಮಾಂಡ್ ಈ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದೆ ಮತ್ತು ಕೈಗೊಳ್ಳಬೇಕು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ರಾಜ್ಯದ ಆಡಳಿತಾತ್ಮಕ ನಿರ್ಧಾರಗಳಲ್ಲಿ ವಿಳಂಬವಾಗಬಾರದು ಎಂದು ಕೂಡ ಅವರ ಅಭಿಪ್ರಾಯಪಟ್ಟಿದ್ದಾರೆ.
ಆಂತರಿಕ ಭಿನ್ನಾಭಿಪ್ರಾಯಗಳು ಆಡಳಿತದ ಮೇಲೆ ದುಷ್ಟರಿಣಾಮ ಎಂಬುದನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಸಚಿವ ಡಿ.ಜಿ. ಪರಮೇಶ್ವರ್ ಹೇಳಿದ್ದಾರೆ.
ಕಳೆದ ನಾಲ್ಕು ವರ್ಷಗಳ ರಾಜಕೀಯ ಅನುಭವದಲ್ಲಿ ಇಂತಹ ಅನೇಕ ಸಂದರ್ಭ ಗಳನ್ನು ನೋಡಿದ್ದೇನೆ ಎಂದು ಅವರು ಸ್ಮರಿಸಿದರು. ಸಂಪುಟ ಚುನಾರಚನ್ನೆ ಸೇರಿದಂತೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಸೇರಿ ಚರ್ಚಿಸಿ ಕೈಗೊಳ್ಳಲಾಗುತ್ತದೆ ಎಂದವರು ಸ್ಪಷ್ಟಪಡಿಸಿದರು.
Also Read: