<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ರಾಜಕೀಯ ಕಿಚ್ಚು : ಬಿಜೆಪಿ ಶಾಸಕರ ಅಡ್ಡ ಮತದಾನ ಬಗ್ಗೆ ಜೋಶಿ ವಿವಾದಾತ್ಮಕ ಹೇಳಿಕೆ

ರಾಜಕೀಯ ಕಿಚ್ಚು : ಬಿಜೆಪಿ ಶಾಸಕರ ಅಡ್ಡ ಮತದಾನ ಬಗ್ಗೆ ಜೋಶಿ ವಿವಾದಾತ್ಮಕ ಹೇಳಿಕೆ
Summary: Joshi made an explosive statement on BJP MLAs' cross-voting, saying, "We did it secretly." This statement has led to heated debate in the political circles.

Belagavi News :

ರಾಜ್ಯದ ವಿಧಾನ ಪರಿಷತ್ ನಲ್ಲಿ ನಡೆದ ಅಡ್ಡ ಮತದಾನ ಇದೀಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಣೆ ಪ್ರಮಾಣದ ರಾಜಕೀಯವು ತೀವ್ರಗೊಂಡಿದ್ದು, ಹಲವು ನಾಯಕರು ಪರಸ್ಪರ ಆರೋಪ - ಪ್ರತ್ಯಾಾರೋಪಗಳಲ್ಲಿ ತೊಡಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಅವರು, ಬಿಜೆಪಿ ಶಾಸಕರಿಂದ ಅಡ್ಡ ಮತದಾನ ನಡೆದಿರುವುದು "ದುರ್ದೈವದ ಸಂಗತಿ" ಎಂದು ಹೇಳಿದ್ದಾರೆ. ದುಡ್ಡಿನ ಆಸೆಗಾಗಿ ಕೆಲವರು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಅವರು ಮುಂದಿಟ್ಟಿದ್ದಾರೆ.

ಈ ಪ್ರಕರಣವನ್ನು ಕೇಂದ್ರ ನಾಯಕತ್ವವು ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ತನಿಖೆ ನಡೆಸಲು ಸತ್ಯಶೋಧನಾ ಸಮಿತಿಯನ್ನು ರಚಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ಘಟನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ತನಿಖೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Sponsored

ಇದೇ ವೇಳೆ,"ಸೀಕ್ರೆಟ್ ಆಗಿ ಮಾಡಿದ್ದೇವೆ ಎಂದು ಕೆಲವರು ಭಾವಿಸಿದ್ದಾರೆ, ಆದರೆ ಕೆಲವೇ ದಿನಗಳಲ್ಲಿ ಯಾರು ಈ ಕಾರ್ಯ ಮಾಡಿದ್ದಾರೆ ಎಂಬುದು ಬಹಿರಂಗವಾಗಲಿದೆ" ಎಂದು ಜೋಶಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ವಿಧಾನ ಪರಿಷತ್ ಅಡ್ಡ ಮತದಾನ ಪ್ರಕರಣವು ಈಗ ಬಿಜೆಪಿ ಹೊಳ ರಾಜಕೀಯಕ್ಕೂ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ತನಿಕಾ ವರದಿ ಯಾವ ದಿಕ್ಕಿಗೆ ಸಾಗುತ್ತದೆ ಎಂಬುದರ ಮೇಲೆ ಗಮನ ಕೇಂದ್ರೀಕೃತವಾಗಿದೆ.

ಒಟ್ಟಿನಲ್ಲಿ, ಅಡ್ಡ ಮತದಾನ ವಿವಾದವು ರಾಜ್ಯ ರಾಜಕೀಯದಲ್ಲಿ ಹೊಸ ಕಿಚ್ಚು ಹಚ್ಚಿದ್ದು, ನಾಯಕರು ಪರಸ್ಪರ ನಿಲುವುಗಳನ್ನು ಕಠಿಣಗೊಳಿಸುತ್ತಿದ್ದಾರೆ.

ವಿಧಾನ ಪರಿಷತ್ ಅಡ್ಡ ಮತದಾನ ವಿವಾದ - "ದುಡ್ಡಿನ ಆಸೆಗೆ ಕ್ರಾಸ್ ವೋಟಿಂಗ್" - ಜೋಶಿ ಗಂಭೀರ ಆರೋಪ:

Sponsored

ರಾಜ್ಯದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ನಡೆದಿದೆ ಎಂಬ ಆರೋಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಹೇಳಿಕೆ ನೀಡಿದ್ದು, "ದುಡ್ಡಿನ ಆಸೆಗೆ ಕ್ರಾಸ್ ವೋಟಿಂಗ್ ನಡೆದಿದೆ" ಎಂದು ಆರೋಪಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದವರು, ಪಕ್ಷದಿಂದ ಗೆದ್ದು ಬಂದ ನಂತರ ಪಕ್ಷದ ಪರವಾಗಿಯೇ ಮತ ಹಾಕಬೇಕು ಎಂಬುದು ಮೂಲ ನಿಯಮ. ಆದರೆ ಕೆಲವರು ಪಕ್ಷದ ವಿಶ್ವಾಸವನ್ನು ಕಾಪಾಡದೇ ಅಡ್ಡ ಮತದಾನ ಮಾಡಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣವನ್ನು ಕೇಂದ್ರ ಬಿಜೆಪಿ ನಾಯಕತ್ವ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಲು ಸತ್ಯ ಶೋಧನ ಸಮಿತಿಯನ್ನು ರಚಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಈ ವಿಚಾರವಾಗಿ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೋಶಿ ತಿರುಗೇಟು :

Sponsored

ಈ ವೇಳೆ ಗೃಹ ಸಚಿವ ಪ್ರಿಯಾಂಕ ರ್ ಗೆ ಅವರು RSS ಮುಖ್ಯಸ್ಥ ಮೋಹನ್ ಭಗವತ್ ಅವರಿಗೆ ಬರೆದಿರುವ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಅವರ ಹೇಳಿಕೆಯನ್ನು ಹಳೆಯ "ಗ್ರಾಮಾಫೋನ್" ಎಂದು ಕರೆದಿದ್ದಾರೆ. ಅವರ ಪತ್ರಕ್ಕೆ ಯಾವುದೇ ಮಹತ್ವವಿಲ್ಲ ಎಂದು ಅವರು ಹೇಳಿದ್ದರು.

ಡಿಕೆ ಶಿವಕುಮಾರ್ ನಂತರ ಮುಖ್ಯಮಂತ್ರಿ ಆಗಬೇಕು ಎಂಬ ಆಸೆಯಿಂದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ ಜೋಶಿ, RSS ಬಗ್ಗೆ ಮಾತನಾಡುವ ಅಧಿಕಾರ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಒಟ್ಟಿನಲ್ಲಿ, ಅಡ್ಡ ಮತದಾನ ವಿವಾದ ಹಾಗೂ ಪರಸ್ಪರ ರಾಜಕೀಯ ವಾಗ್ದಾಳಿಗಳಿಂದ ರಾಜ್ಯ ರಾಜಕೀಯ ವಾತಾವರಣ ಮತ್ತಷ್ಟು ಕುದಿಯುತ್ತಿದೆ.

"ರಾಜ್ಯಾಧ್ಯಕ್ಷ ರೇಸ್ ನಲ್ಲಿ ನಾನು ಇಲ್ಲ" - ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಪ್ರಲ್ಹಾದ್ ಜೋಶಿ ಸ್ಪಷ್ಟನೆ:

Sponsored

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳ ನಡುವೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. "ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನು ಇಲ್ಲ" ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದವರು, ತಾವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ ಜವಾಬ್ದಾರಿಗಳತ್ತ ಗಮನಹರಿಸುತ್ತಿರುವುದಾಗಿ ಹೇಳಿದರು. ರಾಜ್ಯ ರಾಜಕೀಯದ ಹುದ್ದೆಗಳ ಸ್ಪರ್ಧೆಯಲ್ಲಿ ತಾವು ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯದಲ್ಲಿ ಅನೇಕ ಸಮರ್ಥ್ಯ ನಾಯಕರು ಇದ್ದಾರೆ ಎಂದು ಹೇಳಿದ ಜೋಶಿ, ಪಕ್ಷದಲ್ಲಿ ನಾಯಕತ್ವಕ್ಕೆ ಅರ್ಹರಾದ ಹಲವರು ಹಿರಿಯ ಹಾಗೂ ಅನುಭವಿಗಳಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ತಾತ್ಕಾಲಿಕ ವಿರಾಮ ನೀಡುವಂತಾಗಿದೆ. ಪಕ್ಷದ ಒಳಗಿನ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಊಹಾಪೋಹಗಳ ನಡುವೆ ಜೋಶಿಯ ಈ ಸ್ಪಷ್ಟನೆ ಗಮನ ಸೆಳೆದಿದೆ.

Sponsored

ಒಟ್ಟಿನಲ್ಲಿ, ರಾಜ್ಯಾಧ್ಯಕ್ಷ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಅಂತ್ಯ ಹಂತ ನೀಡುವ ರೀತಿಯಲ್ಲಿ ಜೋಶಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮಳೆ ಕೊರತೆ ಕುರಿತು ಪ್ರಲ್ಹಾದ್ ಜೋಶಿ ಆತಂಕ - "40% ಕಡಿಮೆ ಮಳೆ, ಸರ್ಕಾರ ಕ್ರಮ ಕೈಗೊಳ್ಳಬೇಕು" - ಸಂಪುಟ ವಿಸ್ತರಣೆಗೂ ಒತ್ತಾಯ:

ರಾಜ್ಯದಲ್ಲಿ ಮಳೆ ಕೊರತೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ ಶೇಕಡ 40ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಮೇವು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು. ಸರ್ಕಾರದ ಬಳಿ ಸಾಕಷ್ಟು ಆಹಾರಧಾನ್ಯ ಸಂಗ್ರಹವಿದ್ದರೂ, ಮುಂಚಿತವಾಗಿ ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

Sponsored

ಸಿಎಂ ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಲ್ಲಿ ತಕ್ಷಣ ಸಂಪುಟ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದವರು, ಯಾವುದೇ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರದ ಕಾರ್ಯವೈಕರಿಯನ್ನು ಟೀಕಿಸಿದ ಜೋಶಿ, ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿಯೂ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದೇ ವೇಳೆ ಇತರ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದವರು, ಯುವ ಸೇನೆ ಮತ್ತು ಟಿಎಂಸಿ ಪಕ್ಷಗಳಿಂದ ನಾಯಕರು ಬೇರೆ ಪಕ್ಷಗಳಿಗೆ ಸೇರುವುದಕ್ಕೆ ಕಾರಣ ಆ ಪಕ್ಷಗಳಲ್ಲಿ ಭವಿಷ್ಯ ಇಲ್ಲ ಎಂಬ ಭಾವನೆ ಎಂದು ಹೇಳಿದರು.

ಕರ್ನಾಟಕದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದವರು, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿರುವುದರಿಂದ ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದಾರೆ ಎಂದು ಟೀಕಿಸಿದರು. ಒಟ್ಟಿನಲ್ಲಿ, ಮಳೆ ಕೊರತೆ, ಆಡಳಿತ ಕಾರ್ಯಕ್ಷಮತೆ ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತು ಜೋಶಿಯ ತೀವ್ರ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿವೆ.

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online