<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ಆರೋಪ

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ಆರೋಪ
Summary: Union Education Minister Dharmendra Pradhan has accused Rahul Gandhi and the Congress of using students as political tools. Here is the full story of the main allegations and the latest political developments behind this statement.

belagavi news :

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ರಾಜಕೀಯ ದಾಳಗಳಾಗಿ ಬಳಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಧಾನಮಂತ್ರಿ ನಿವಾಸದ ಹೊರಗೆ ನಡೆದ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಭದ್ರತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರ ನೀಟ್ ವಿಷಯದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆಗೆ ಸಿದ್ಧವಿದೆ ಎಂದು ತಿಳಿಸಿದ ನಂತರವೂ, ಕಾಂಗ್ರೆಸ್ ಪ್ರಜಾಸತ್ತಾತ್ಮಕ ಚರ್ಚೆಯ ಬದಲು ರಾಜಕೀಯ ಪ್ರದರ್ಶನ ನಡೆಸುತ್ತಿದೆ ಎಂದು ಪ್ರಧಾನ ಹೇಳಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವುದಕ್ಕಿಂತ ರಾಜಕೀಯ ಪ್ರಚಾರವೇ ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ಆರೋಪಿಸಿದ ಅವರು, ನೀಟ್ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ನ್ಯಾಯಸಮ್ಮತ ಆತಂಕಗಳಿಗೆ ಸಂಸತ್ತಿನಲ್ಲೇ ಉತ್ತರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳು ಯಾವುದೇ ರಾಜಕೀಯ ಅಭಿಯಾನದ ಸಾಧನವಾಗಬಾರದು. ಅವರಿಗೆ ನಿಶ್ಚಿತತೆ, ಸುಧಾರಣೆ, ಹೊಣೆಗಾರಿಕೆ ಮತ್ತು ಪರಿಣಾಮಕಾರಿ ಪರಿಹಾರಗಳು ದೊರೆಯಬೇಕು. ಸರ್ಕಾರವು ಅದಕ್ಕಾಗಿ ಸಂಪೂರ್ಣ ಬದ್ಧವಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಇದರ ನಡುವೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದವು. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಸುಮಾರು ಮೂರೂವರೆ ಗಂಟೆಗಳ ಕಾಲ ನಡೆದ ಪ್ರತಿಭಟನೆಯ ಬಳಿಕ ದೆಹಲಿ ಪೊಲೀಸ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದರು. ನಂತರ ರಾಹುಲ್ ಗಾಂಧಿಯನ್ನು ಛತ್ರಸಾಲ್ ಕ್ರೀಡಾಂಗಣದಿಂದ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಮಂದಿರ್ ಮಾರ್ಗ ಪೊಲೀಸ್ ಠಾಣೆಯಿಂದ ಬಿಡುಗಡೆ ಮಾಡಲಾಯಿತು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online