Belagavi News:
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಹಾಗೂ ಖಾಸಗಿ ವ್ಯಕ್ತಿಗಳ ಜಮೀನುಗಳ ಆರ್ ಟಿಸಿ (RTC) ದಾಖಲೆಗಳಲ್ಲಿ ಯಾವುದೇ ಪೂರ್ವಸೂಚನೆ ಇಲ್ಲದೆ ವಕ್ಪ್ ಉಲ್ಲೇಖ ಕಾಣಿಸಿಕೊಂಡಿರುವ ವಿಚಾರ ಈ ಹಿಂದೆ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇದೇ ವಿಷಯ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯದ 1.80 ಲಕ್ಷಕ್ಕೂ ಹೆಚ್ಚು ರೈತರ ಆರ್ ಟಿಸಿಗಳಲ್ಲಿ ವಕ್ಪ್ ಉಲ್ಲೇಖ ದಾಖಲಾಗಿರುವುದಾಗಿ ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಭೂಹಕ್ಕುಗಳಿಗೆ ಸಂಬಂಧಿಸಿದ ಗಂಭೀರ ವಿಷಯವನ್ನು ಸರ್ಕಾರ ನಿರ್ಲಕ್ಷಿಸುತ್ತಿದ್ದು, ಈ ಬೆಳವಣಿಗೆಯಿಂದ ಸಾವಿರಾರು ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
" ರೈತರ ಭೂಮಿಯನ್ನು ವಕ್ಪ್ ವಿವಾದಕ್ಕೆ ಸಿಲುಕಿಸಿ ಕಾಂಗ್ರೆಸ್ ಸರ್ಕಾರ ಯಾರ ಹಿತ ಕಾಯುತ್ತಿದೆ? ರೈತರ ಹಕ್ಕುಗಳನ್ನು ರಕ್ಷಿಸುವ ಬದಲು ಅವರನ್ನು ಸಂಕಷ್ಟಕ್ಕೆ ತಳ್ಳುವ ಕೆಲಸ ನಡೆಯುತ್ತಿದೆ" ಎಂದು ಆರ್. ಅಶೋಕ್ ಪ್ರಶ್ನಿಸಿದ್ದಾರೆ.
ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಆರ್ ಟಿಸಿ ದಾಖಲೆಗಳಲ್ಲಿ ವಕ್ಪ್ ಉಲ್ಲೇಖ ಹೇಗೆ ಮತ್ತು ಯಾವ ಆಧಾರದ ಮೇಲೆ ಸೇರ್ಪಡೆಯಾಗಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು. ಅಲ್ಲದೆ, ರೈತರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Waqf Row: ರೈತರ RTC ವಿವಾದಕ್ಕೆ ರಾಜಕೀಯ ಕಾವು!
ರಾಜ್ಯದಲ್ಲಿ 1.80 ಲಕ್ಷಕ್ಕೂ ಹೆಚ್ಚು ರೈತರ ಆರ್ ಟಿಸಿಗಳಲ್ಲಿ (RTC) ವಕ್ಪ್ ಹೆಸರು ಉಲ್ಲೇಖವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ರೈತರ ಅಸ್ತಿತ್ವಕ್ಕೆ ಕುತ್ತು ತರುತ್ತಿದೆ ಎಂದು ಹೇಳಿದ್ದಾರೆ.
" ಅನ್ನ ನೀಡುವ ರೈತನನ್ನು ತಮ್ಮದೇ ಭೂಮಿ ಹಕ್ಕಿಗಾಗಿ ಸರ್ಕಾರಿ ಕಚೇರಿಗಳ ಮುಂದೆ ನಿಲ್ಲಿಸಿದರೆ ಅವರ ಶಾಪ ತಟ್ಟದೇ ಇರದು" ಎಂದು ಅವರು ಎಚ್ಚರಿಕೆ ನೀಡಿದ್ದು ಈ ವಿವಾದ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ತೀವ್ರತೆ ಪಡೆದಿದೆ.
ಮುಖ್ಯಾಂಶಗಳು;
ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ' ವಕ್ಪ್ ' ವಿವಾದ
1.80 ಲಕ್ಷಕ್ಕೂ ಹೆಚ್ಚು ರೈತರ RTC ಗಳಲ್ಲಿ ವಕ್ಪ್ ಹೆಸರು
ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
' ರೈತರ ಅಸ್ತಿತ್ವಕ್ಕೆ ಕುತ್ತು' - RTC ವಿವಾದ ತೀವ್ರತೆ!
ರಾಜ್ಯ ಸರ್ಕಾರದ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಈಗ ನಾಡಿನ ರೈತರ ಅಸ್ತಿತ್ವಕ್ಕೆ ಕುತ್ತು ತರುವ ಹಂತಕ್ಕೆ ತಲುಪಿದೆ ಎಂದು ಗಂಭೀರ ಆರೋಪಗಳು ಕೇಳಿಬಂದಿವೆ.
ರಾಜ್ಯಾದಾದ್ಯಂತ ರೈತರ RTC ಗಳ ಕಾಲಂ 11ರಲ್ಲಿ ವಕ್ಪ್ ಉಲ್ಲೇಖಗಳನ್ನು ದಾಖಲಿಸಲಾಗುತ್ತಿದೆ ಎಂದು ವರದಿಗಳು ಹೊರಬಿದ್ದು, ಲಕ್ಷಾಂತರ ರೈತರಲ್ಲಿ ಆತಂಕ ಹೆಚ್ಚಾಗಿದೆ.
ಇದು ಕೇವಲ ದಾಖಲೆ ಬದಲಾವಣೆಯ ವಿಷಯವಲ್ಲ, ರೈತರ ಮಾಲೀಕತ್ವದ ಹಕ್ಕು, ಬದುಕು ಮತ್ತು ಭವಿಷ್ಯದ ಪ್ರಶ್ನೆ ಎಂದು ಹೇಳಲಾಗಿದೆ.
ಆರೋಪಗಳ ಪ್ರಕಾರ, ರಾಜ್ಯದ 1.80 ಲಕ್ಷಕ್ಕೂ ಹೆಚ್ಚು RTCಗಳಲ್ಲಿ ಈಗಾಗಲೇ ವಕ್ಪ್ ಉಲ್ಲೇಖ ದಾಖಲಾಗಿದೆ. ಜೊತೆಗೆ ಒಟ್ಟು 3 ಲಕ್ಷ RTCಗಳನ್ನು ಈ ಪ್ರಕ್ರಿಯೆಯ ವ್ಯಾಪ್ತಿಗೆ ತರಲು ಕ್ರಮ ನಡೆಯುತ್ತಿದೆ ಎಂದು ಮಾತುಗಳು ಕೇಳಿಬರುತ್ತಿವೆ.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ರಾಜ್ಯದ 31 ಜಿಲ್ಲೆಗಳ ರೈತರು ಪರಿಣಾಮದ ಆತಂಕದಲ್ಲಿದ್ದಾರೆ ಎಂದು ಹೇಳಲಾಗಿದೆ.
ಜಿಲ್ಲಾವಾರು ಅಂಕಿ-ಅಂಶ:
ಉತ್ತರ ಕನ್ನಡ - 73,000 RTC ಗಳು
ದಕ್ಷಿಣ ಕನ್ನಡ - 48,000 RTC ಗಳು
ಶಿವಮೊಗ್ಗ - 38,000 RTC ಗಳು
ಬೆಂಗಳೂರು ದಕ್ಷಿಣ - 18,000 RTC ಗಳು
ಕಲಬುರಗಿ - 17,000 RTC ಗಳು
ಬಾಗಲಕೋಟೆ - 17,000 RTC ಗಳು
ರೈತ ಹಕ್ಕುಗಳ ಬಗ್ಗೆ ತೀವ್ರ ವಾಗ್ದಾಳಿ - ಆರ್. ಅಶೋಕ್ ಪ್ರಶ್ನೆ:
ರೈತರು ತಮ್ಮದೇ ಭೂಮಿಯನ್ನು ಮಾರಾಟ ಮಾಡಲು, ಬ್ಯಾಂಕ್ ಸಾಲ ಪಡೆಯಲು ಅಥವಾ ಮಾಲೀಕತ್ವದ ಹಕ್ಕು ಚಲಾಯಿಸಲು ಅನಿಶ್ಚಿತತೆ ಎದುರಿಸುವ ಪರಿಸ್ಥಿತಿ ಏಕೆ ನಿರ್ಮಾಣವಾಯಿತು? ರೈತರನ್ನು ತಮ್ಮದೇ ಜಮೀನಿನಲ್ಲಿ ಭಿಕ್ಷುಕರನ್ನಾಗಿ ಮಾಡಲು ಹೊರಟಿದ್ದೀರಾ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ರೈತರ ಹಿತ ಮುಖ್ಯವೇ, ಅಥವಾ ತುಷ್ಟಿಕರಣದ ರಾಜಕಾರಣ ಮುಖ್ಯವೇ? ಎಂದು ಅವರು ತೀವ್ರವಾಗಿ ಟೀಕಿಸಿದ್ದಾರೆ.
ರೈತನು ಅನ್ನ ಬೆಳೆಯುತ್ತಾನೆ, ಇಡೀ ದೇಶದ ಹಸಿವನ್ನು ನೀಗಿಸುತ್ತಾನೆ. ಅಂತಹ ರೈತನನ್ನು ತನ್ನದೇ ಭೂಮಿಯ ಹಕ್ಕಿಗಾಗಿ ಸರ್ಕಾರಿ ಕಚೇರಿಗಳ ಮುಂದೆ ನಿಲ್ಲಿಸಿದರೆ ಅನ್ನದಾತನ ಶಾಪ ತಟ್ಟದೆ ಇರದು ಎಂದು ಅವರು ಎಚ್ಚರಿಸಿದ್ದಾರೆ.
Also Read:
ಸಿ ಎಂಡಿಗೆ ಶಿವಕುಮಾರ್ ಮೊದಲ ಬೃಹತ್ ಸಮಾವೇಶ ಯಶಸ್ವಿಯಾಯ್ತಾ? ಇಲ್ಲಿದೆ ಸಂಪೂರ್ಣ ವರದಿ