Belagavi news:
ಬಿಗ್ ಬಾಸ್ ಖ್ಯಾತಿಯ ನಟಿ ಕಾವ್ಯ ಶೈವ ಅವರಿಗೆ ಕಲಬುರ್ಗಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಅಸಹಜ ಘಟನೆ ನಡೆದಿದೆ. ವೇದಿಕೆ ಮೇಲೆ ಮಾತನಾಡುತ್ತಿದ್ದ ವೇಳೆ ಅವರ ಕೈಯಿಂದಲೇ ಮೈಕ್ ಅನ್ನು ಕಸಿದುಕೊಳ್ಳಲಾಗಿದ್ದು, ಈ ಘಟನೆ ವೇದಿಕೆಯಲ್ಲಿ ಕೆಲಕಾಲ ಗೊಂದಲಕ್ಕೆ ಕಾರಣವಾಗಿದೆ.
ಮಾಹಿತಿಯ ಪ್ರಕಾರ, ಕಾರ್ಯಕ್ರಮದಲ್ಲಿ ಕಾವ್ಯಾ ಶೈವ ಅವರು ಮಾತನಾಡುತ್ತಿದ್ದಾಗ ಪ್ರತಿಯೊಬ್ಬರು ಅಚಾನಕ್ ಆಗಿ ಮೈ ಕಸಿದುಕೊಂಡಿದ್ದಾರೆ. ಈ ವೇಳೆ ಸಂಘಟಕರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯನ್ನು ಸಂಘಟಕರು ಗಂಭೀರವಾಗಿ ಪ್ರಶ್ನಿಸಿದ್ದಾರೆ.
ಈ ಘಟನೆಯಾ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದ್ದು, ಹಲವಾರು ಚರ್ಚೆಗೆ ಕಾರಣವಾಗಿದೆ. ಅಭಿಮಾನಿಗಳು ಈ ವರ್ತನೆಯನ್ನು ಖಂಡಿಸುತ್ತಿದ್ದು, ವೇದಿಕೆಯಲ್ಲಿ ಇಂತಹ ನಡೆ ಅನುವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಘಟನೆಯಿಂದ ಕಾವ್ಯಾ ಶೈವ ಸ್ವಲ್ಪ ಶಾಕ್ ಆಗಿದ್ದರು, ಅವರು ಯಾವುದೇ ರೀತಿಯ ಕೋಪ ಅಥವಾ ಪ್ರತಿಕ್ರಿಯೆ ನೀಡದೆ ಶಾಂತವಾಗಿ ನಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಬಿಗ್ ಬಾಸ್ ಖ್ಯಾತಿಯ ನಟಿ ಕಾವ್ಯಾ ಶೈವಗೆ ಅವರು ಕಲಬುರ್ಗಿಯ ಎಸ್ಎಂ ಪಂಡಿತ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದರು. ವೇದಿಕೆ ಮೇಲೆ ಮಾತನಾಡುತ್ತಿದ್ದಾಗಲೇ ಅನಿರೀಕ್ಷಿತ ಘಟನೆ ಸಂಭವಿಸಿದ್ದು, ಈ ಘಟನೆ ಇದೀಗ ಚರ್ಚೆಗೆ ಕಾರಣವಾಗಿದೆ.
ಮಾಹಿತಿ ಪ್ರಕಾರ, ಕಾರ್ಯಕ್ರಮದ ವೇಳೆ ವೇದಿಕೆ ಸಂಪೂರ್ಣವಾಗಿ ಜನರಿಂದ ತುಂಬಿ ತುಳುಕುತ್ತಿತ್ತು. ನಿಲ್ಲಲು ಸಹ ಸರಿಯಾದ ಜಾಗ ಇಲ್ಲದ ಪರಿಸ್ಥಿತಿಯಲ್ಲೂ ಕಾವ್ಯಾ ಶೈವ ಅವರು ವೇದಿಕೆಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಯಕಿ ವೇದಿಕೆಗೆ ಬಂದ ವ್ಯಕ್ತಿಯೊಬ್ಬರು ಅವರ ಕೈಯಲ್ಲಿದ್ದ ಮೈಕ್ ಅನ್ನು ಕಸಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಬಳಿಕ ವೇದಿಕೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಸಂಘಟಕರು ತಕ್ಷಣ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವೇದಿಕೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಕಾವ್ಯಾ ಶೈವಗೆ ಅವಮಾನಕಾರಿ ಘಟನೆ :
ಬಿಗ್ ಬಾಸ್ ಖ್ಯಾತಿಯ ನಟಿ ಕಾವ್ಯಾ ಶೈವ ಅವರು ಕಲಬುರ್ಗಿಯ ಎಸ್ ಎಂ ಪಂಡಿತ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ವೇಳೆ ಅಸಹಜ ಘಟನೆ ನಡೆದಿದೆ. ವೇದಿಕೆ ಮೇಲೆ ಮಾತನಾಡುತ್ತಿದ್ದಾಗಲೇ ಏಕಾಯಕಿ ವ್ಯಕ್ತಿಯೊಬ್ಬರು ಅವರ ಕೈಯಲ್ಲಿದ್ದ ಮೈಕನ್ನು ಕಸಿದುಕೊಂಡಿದ್ದು, ಈ ಘಟನೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಮಾಹಿತಿ ಪ್ರಕಾರ, ವೇದಿಕೆ ಸಂಪೂರ್ಣವಾಗಿ ಜನರಿಂದ ತುಂಬಿ ತುಳುಕುತ್ತಿತ್ತು. ನಿಲ್ಲಲು ಸಹಜ ಸರಿಯಾದ ಜಾಗವಿಲ್ಲದ ಪರಿಸ್ಥಿತಿಯಲ್ಲೂ ಕಾವ್ಯಶೈವ ಅವರು ತಮ್ಮ ಮಾತು ಮುಂದುವರಿಸುತ್ತಿದ್ದರು. ಇದೇ ವೇಳೆ ಅಚಾನಕ್ ಆಗಿ ವೇದಿಕೆಯ ಮೇಲೆ ಬಂದ ವ್ಯಕ್ತಿ ಒಬ್ಬರು ಮೈಕ್ ಕಿತ್ತುಕೊಂಡಿದ್ದಾರೆ. ಈ ಘಟನೆಯಿಂದ ಕಾವ್ಯಾ ಶೈವ ಕೆಲ ಕಾಲ ಶಾಕ್ ಆಗಿದ್ದರು, ಅವರು ಯಾವುದೇ ರೀತಿಯ ಕೋಪ ಅಥವಾ ಅಸಮಾಧಾನವನ್ನು ವೇದಿಕೆಯಲ್ಲಿ ವ್ಯಕ್ತಪಡಿಸಲಿಲ್ಲ.
ಈ ಘಟನೆ ಬಳಿಕ ವೇದಿಕೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸಂಘಟಕ ರೊಬ್ಬರು ಈ ಅನಾಗರಿಕ ವರ್ತನೆಯನ್ನು ಪ್ರಶ್ನಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೈಕ್ ಕಿತ್ತುಕೊಂಡ ವ್ಯಕ್ತಿ ಹಾಗೂ ವೇದಿಕೆಯ ಮೇಲಿದ್ದ ಸಂಘಟಕರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ನಂತರ ನಿಯಂತ್ರಣಕ್ಕೆ ತರಲಾಗಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಹಲವರು ವೇದಿಕೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಟೀಕಿಸುತ್ತಿದ್ದು, ಇಂತಹ ಘಟನೆಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪುನರಾವರ್ತಿಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾವ್ಯಾ ಶೈವ ಅವರು ಕಿರುತೆರೆಯಲ್ಲಿ ತಮ್ಮ ವೃತ್ತಿ ಆರಂಭಿಸಿ ಜನಪ್ರಿಯತೆ ಪಡೆದವರು. ಅವರು 'ಕೆಂಡಸಂಪಿಗೆ' ಧಾರಾವಾಹಿಯಲ್ಲಿ ನಟಿಸಿದ್ದಾರೆ. ಜೊತೆಗೆ 'ಕೊತ್ತಲವಾಡಿ' ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.
Also Read:
ಶೃಂಗೇರಿ ಶಾರದಾಂಬೆ ಭಕ್ತರಿಗೆ ಖುಷಿ ಸುದ್ದಿ : ಮಂಗಳೂರು ಸಂಪರ್ಕಕ್ಕೆ ಹೊಸ ರೈಲು ಸೇವೆ