Belagavi News:
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ನಂತರ ಕರ್ನಾಟಕದ ಸರ್ಕಾರಿ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಉಚಿತ ಪ್ರಯಾಣ ಸೌಲಭ್ಯದಿಂದ ಲಕ್ಷಾಂತರ ಮಹಿಳೆಯರು ಪ್ರತಿದಿನ KSRTC ಬಸ್ಸುಗಳನ್ನು ಅವಲಂಬಿಸುತ್ತಿದ್ದಾರೆ. ಆದರೆ ಇದರ ನಡುವೆಯೇ ಮಹಿಳೆಯರ ಸುರಕ್ಷತೆ ಕುರಿತು ಆತಂಕಕಾರಿ ಘಟನೆಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ.
ಇತ್ತೀಚೆಗೆ ಸೋಲೂರು ಭಾಗದಲ್ಲಿ ನಡೆದ ಮಹಿಳಾ ಕಿರುಕುಳ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದ್ದರೆ, ಇದೀಗ ಕುಣಿಗಲ್ ತಾಲೂಕಿನ ಬಿಲಿದೇವಾಲಯದ ಸಮೀಪ ಸಂಚರಿಸುತ್ತಿದ್ದ KSRTC ಬಸ್ ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿ ಒಬ್ಬನಿಗೆ ಸಹ ಪ್ರಯಾಣಿಕರು ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆಗೆ ಅಸಭ್ಯವಾಗಿ ವರ್ತಿಸಿದನೆಂಬ ಆರೋಪದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆತನನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕವಾಗಿ ಶಿಕ್ಷಿಸಿರುವ ದೃಶ್ಯಗಳು ಕಾಣಿಸುತ್ತವೆ. ಘಟನೆಯ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.
ಈ ವಿಡಿಯೋವನ್ನು ಕರ್ನಾಟಕ ಪೋರ್ಟ್ಫೋಲಿಯೋ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಘಟನೆಯ ಕುರಿತು ಪೊಲೀಸ್ ಇಲಾಖೆ ಹಾಗೂ ಸಾರಿಗೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಹಿಳಾ ಸುರಕ್ಷತೆಗೆ ಹೆಚ್ಚುತ್ತಿರುವ ಸವಾಲು :
ಶಕ್ತಿ ಯೋಜನೆಯಿಂದ ಮಹಿಳೆಯರು ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿದಂತೆ, ಬಸ್ಗಳಲ್ಲಿ ಸುರಕ್ಷಿತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯತೆ ಎದುರಾಗಿದೆ. ಸಿಸಿಟಿವಿ ಕ್ಯಾಮೆರಾ ಗಳು, ತುರ್ತು ಸಹಾಯವಾಣಿ, ಮಹಿಳಾ ಸುರಕ್ಷಿತ ಸಿಬ್ಬಂದಿ ನಿಯೋಜನೆ ಹಾಗೂ ಜಾಗೃತಿ ಕಾರ್ಯಕ್ರಮಗಳ ಮೂಲಕ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.
ಮಹಿಳೆಯರು ನಿರ್ಭೀತಿಯಿಂದ ಪ್ರಯಾಣಿಸಲು ಸುರಕ್ಷಿತ ವಾತಾವರಣ ನಿರ್ಮಿಸುವುದು ಸರ್ಕಾರ, ಸಾರಿಗೆ ಇಲಾಖೆ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರಗಿಸಿದಾಗ ಮಾತ್ರ ಇಂತಹ ಕೃತ್ಯಗಳಿಗೆ ತಡೆ ಬೀಳಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
KSRTC ಬಸ್ ನಲ್ಲಿ ಮಹಿಳೆಗೆ ಕಿರುಕುಳ ಆರೋಪ - ಸಿಬ್ಬಂದಿ ಎಂದು ಸುಳ್ಳು ಹೇಳಿ ಬಸ್ ಹತ್ತಿದ ವ್ಯಕ್ತಿಗೆ ಪ್ರಯಾಣಿಕರಿಂದ ಧರ್ಮದೇಟು:
KSRTC ಬಸ್ ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಪ್ರತಿಯೊಬ್ಬನಿಗೆ ಸಹಪ್ರಾಣಿಕರು ಚಪ್ಪಲಿಯಿಂದ ತಿಳಿಸಿರುವ ಘಟನೆ ಕುಣಿಗಲ್ ತಾಲೂಕಿನ ಬಿಲಿದೇವಾಲಯ ಸಮೀಪ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಚರ್ಚೆಗಳು ನಡೆಯುತ್ತಿವೆ.
ವರದಿಯ ಪ್ರಕಾರ, ಆರೋಪಿ ತನು ಸಾರಿಗೆ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿ ನಿರ್ವಾಹಕನನ್ನು ದಾರಿ ತಪ್ಪಿಸಿ ಬಸ್ ಹತ್ತಿದ್ದಾನೆ ಎನ್ನಲಾಗಿದೆ. ಬಸ್ ಪ್ರಯಾಣ ಆರಂಭವಾದ ಕೆಲವೇ ಸಮಯದಲ್ಲಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯರೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ ಆತ, ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಆರೋಪಿಯ ವರ್ತನೆ ಗಮನಕ್ಕೆ ಬಂದ ತಕ್ಷಣ ಮಹಿಳೆ ಜೋರಾಗಿ ವಿರೋಧ ವ್ಯಕ್ತಪಡಿಸಿದ್ದು, ಬಸ್ ನಲ್ಲಿದ್ದ ಇತರೆ ಪ್ರಯಾಣಿಕರು ಕೂಡಲೇ ಎಚ್ಚೆತ್ತುಕೊಂಡಿದ್ದಾರೆ. ಬಳಿಕ ಆತನನ್ನು ತರಾಟೆಗೆ ತೆಗೆದುಕೊಂಡು, ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಪ್ರಯಾಣಿಕರು ಆರೋಪಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯಗಳು ವೈರಲ್ ವಿಡಿಯೋದಲ್ಲಿ ಕಂಡು ಬಂದಿವೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಮಹಿಳಾ ಸುರಕ್ಷತೆಗಾಗಿ ಸಾರಿಗೆ ಬಸ್ಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.
ಶಕ್ತಿ ಯೋಜನೆ ಬಳಿಕ ಹೆಚ್ಚಿದ ಮಹಿಳೆ ಪ್ರಯಾಣಿಕರು, ಸುರಕ್ಷತೆ ಬಗ್ಗೆ ಹೆಚ್ಚಿದ ಆತಂಕ :
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸರ್ಕಾರಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಆದರೆ ಮಹಿಳೆಯರ ಮೇಲೆ ಕಿರುಕುಳ, ಅಸಭ್ಯ ವರ್ತನೆ ಮತ್ತು ಸುರಕ್ಷತೆಗೆ ಧಕ್ಕೆ ತರುವ ಘಟನೆಗಳು ಬೆಳಕಿಗೆ ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಸಾರ್ವಜನಿಕ ಸಾರಿಗೆಯಲ್ಲಿ ಸಿಸಿಟಿವಿ ವ್ಯವಸ್ಥೆ, ಭದ್ರತಾ ಸಿಬ್ಬಂದಿ, ಗುರುತು ಸಹಾಯವಾಣಿ ಮತ್ತು ಕಠಿಣ ಕಾನೂನು ಕ್ರಮಗಳ ಮೂಲಕ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
KSRTC ಬಸ್ ನಲ್ಲಿ ಮಹಿಳೆಯರೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿ ಒಬ್ಬನಿಗೆ ಸಹ ಪ್ರಯಾಣಿಕರು ಬಸ್ ಒಳಗೆ ಚಪ್ಪಲಿಯಿಂದ ಧರ್ಮದೇಟು ನೀಡಿರುವ ಘಟನೆ ಕುಣಿಗಲ್ ತಾಲೂಕಿನ ಬಿಲಿದೇವಾಲಯದ ಸಮೀಪ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.
ವರದಿಗಳ ಪ್ರಕಾರ, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮಹಿಳೆಗೆ ಒಳಗೆ ತರಾಟೆಗೆ ತೆಗೆದುಕೊಂಡು ಚಪ್ಪಲಿಯಿಂದ ಥಳಿಸಿದ್ದಾರೆ ಎನ್ನಲಾಗಿದೆ.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ್ತ ಆರೋಪಿ ಬಸ್ ನಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಕಿರುಕುಳ ಒಳಗಾದ ಮಹಿಳೆಯ ಪತಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಹಿಳಾ ಸುರಕ್ಷತೆ ಬಗ್ಗೆ ಮತ್ತೆ ಎದ್ದ ಪ್ರಶ್ನೆಗಳು :
ಶಕ್ತಿ ಯೋಜನೆಯ ಬಳಿಕ ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಇಂತಹ ಘಟನೆಗಳು ಮಹಿಳಾ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿಸುತ್ತಿವೆ. ಬಸ್ ಗಳಲ್ಲಿ ಕಿರುಕುಳ, ಅಸಭ್ಯ ವರ್ತನೆ ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಇನ್ನಷ್ಟು ಕಟ್ಟು ನಿಟ್ಟಿನ ಭದ್ರತಾ ಕ್ರಮಗಳ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ :
ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳ ವಿರುದ್ಧ ಪೋಲಿಸ್ ಇಲಾಖೆ ಹಾಗೂ ಸಾರಿಗೆ ಸಂಸ್ಥೆ ಕಠಿಣ ಕಾನೂನು ಕ್ರಮ ಜರಗಿಸಬೇಕು. ಆಗ ಮಾತ್ರ ಇತರರಿಗೆ ಇದು ಎಚ್ಚರಿಕೆಯ ಪಾಠವಾಗುತ್ತದೆ. ಮಹಿಳೆಯರ ನಿರ್ಭೀತಿಯಿಂದ ಬಸ್ಗಳಲ್ಲಿ ಸಂಚರಿಸಲು ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು" ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಲು ಸಿಸಿಟಿವಿ ಕ್ಯಾಮೆರಾ ಗಳು, ತುರ್ತು ಸಹಾಯವಾಣಿ, ಭದ್ರತಾ ಸಿಬ್ಬಂದಿ ನಿಯೋಜನೆ ಹಾಗೂ ವೇಗದ ಕಾನೂನು ಕ್ರಮಗಳ ಜಾರಿ ಅಗತ್ಯವೆಂದು ನಾಗರಿಕರು ಒತ್ತಾಯಿಸಿದ್ದಾರೆ.
Also Read:
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನ: ಸರ್ಕಾರದ ನೀತಿಗೆ ತೇಜಸ್ವಿ ಸೂರ್ಯ ಆಕ್ಷೇಪ