<?= $pageTitle ?>
Logo
ಮುಖಪುಟ ಓದುವುದು ಕೇಳು
Entertainment

ನಟ ಗಣೇಶ್ ಹುಟ್ಟುಹಬ್ಬಕ್ಕೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನ

ನಟ ಗಣೇಶ್ ಹುಟ್ಟುಹಬ್ಬಕ್ಕೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನ
Summary: On the special day of his birthday, Golden Star Ganesh visited Tirupati temple and had darshan of the deity. This moment of devotion has caught the attention of his fans.

Belagavi News :

ಕನ್ನಡ ಚಿತ್ರರಂಗದ ಜನಪ್ರಿಯ ನಟ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹುಟ್ಟು ಹಬ್ಬದ ದಿನ ವಿಶೇಷ ಭಕ್ತಿ ಭಾವದೊಂದಿಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಹುಟ್ಟು ಹಬ್ಬದ ಈ ವಿಶೇಷ ದಿನವನ್ನು ಸಂಭ್ರಮದ ಬದಲಿಗೆ ದೇವರ ದರ್ಶನದೊಂದಿಗೆ ಆರಂಭಿಸಿದ ಗಣೇಶ್ ಅವರ ನಡೆ ಅಭಿಮಾನಿಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ದೇವಸ್ಥಾನದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿ ವರ್ಷವೂ ತಮ ಹುಟ್ಟು ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸುವ ಗಣೇಶ್, ಈ ಬಾರಿ ಧಾರ್ಮಿಕ ಮನೋಭಾವದಿಂದ ತಿರುಪತಿಗೆ ಭೇಟಿ ನೀಡಿದ್ದು ವಿಶೇಷವಾಗಿದೆ. ದೇವಸ್ಥಾನದಲ್ಲಿ ಅವರ ಉಪಸ್ಥಿತಿ ಕಂಡು ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಗಣೇಶ್ ಅವರ ಈ ಭಕ್ತಿಭಾವದ ನಡೆ ಸಾಮಾಜಿಕ ಜಾಲತಾಣಗಳಲ್ಲಿಯೂ ಗಮನ ಸೆಳೆಯುತ್ತಿದ್ದು, ಅಭಿಮಾನಿಗಳು ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು (ಜುಲೈ 2) ತಮ್ಮ ಹುಟ್ಟು ಹಬ್ಬದ ಸಂಭ್ರಮವನ್ನು ಭಕ್ತಿ ಭಾವ ದೊಂದಿಗೆ ಆಚರಿಸಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಗಣೇಶ್ ಅವರು ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ದೇವರ ಆಶೀರ್ವಾದ ಪಡೆಯುವ ಮೂಲಕ ಅವರು ತಮ್ಮ ವಿಶೇಷ ದಿನವನ್ನು ಆರಂಭಿಸಿದ್ದಾರೆ.

ಪ್ರತಿ ವರ್ಷವೂ ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸುವ ಗಣೇಶ್, ಈ ಬಾರಿ ಧಾರ್ಮಿಕ ದರ್ಶನದೊಂದಿಗೆ ದಿನವನ್ನು ಆರಂಭಿಸಿದ್ದು ಅಭಿಮಾನಿಗಳ ಗಮನ ಸೆಳೆದಿದೆ. ದೇವಸ್ಥಾನದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ ಬಳಿಕ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಗಣೇಶ್ ಅವರ ಈ ಭಕ್ತಿಭಾವದ ಭೇಟಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಶುಭಾಶಯಗಳನ್ನು ಕೋರಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ 48ನೇ ಹುಟ್ಟುಹಬ್ಬ - 'ಪಿನಾಕ್' ಸಿನಿಮಾದ ರಿಲೀಸ್ ದಿನಾಂಕ ಘೋಷಣೆ :

ಕನ್ನಡ ಚಿತ್ರರಂಗ ಜನಪ್ರಿಯ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಂದು 48ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ದೇಶ ವಿದೇಶ ಅಭಿಮಾನಿಗಳು ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜನ್ಮದಿನದ ಶುಭಾಶಯಗಳು ಕೋರಿದ್ದಾರೆ.

ಹುಟ್ಟು ಹಬ್ಬದ ವಿಶೇಷ ದಿನದಲ್ಲಿ ಅಭಿಮಾನಿಗಳಿಗೆ ಡಬಲ್ ಗಿಫ್ಟ್ ಕೂಡ ಸಿಕ್ಕಿದೆ. ನಟ ಗಣೇಶ ಅಭಿನಯದ ಮುಂದಿನ ಸಿನಿಮಾ 'ಪಿನಾಕ್ ' ಚಿತ್ರದ ರಿಲೀಸ್ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಮಾಹಿತಿಯ ಪ್ರಕಾರ, 'ಪಿನಾಕ್' ಸಿನಿಮಾ ಅಕ್ಟೋಬರ್ ಎರಡರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಘೋಷಣೆಯಿಂದ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿದೆ.

ಗಣೇಶ್ ಅವರ ಹುಟ್ಟು ಹಬ್ಬದ ಸಂಭ್ರಮದ ನಡುವೆ ಸಿನಿಮ ರಿಲೀಸ್ ದಿನಾಂಕ ಪ್ರಕಟವಾಗಿರುವುದು ಅಭಿಮಾನಿಗಳಿಗೆ ವಿಶೇಷ ಸಂತೋಷ ತಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಟ್ರೆಂಡ್ ಆಗಿದ್ದು, ಚಿತ್ರದ ತಂಡಕ್ಕೂ ಶುಭಾಶಯಗಳು ಸುರಿಮಳೆ ಹರಿಯುತ್ತಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು - ಪಿನಾಕ್ ಬಳಿಕ 'ಬೃಂದಾವಿಹಾರಿ ' ರಿಲೀಸ್ ಘೋಷಣೆ :

ಕನ್ನಡ ಚಿತ್ರರಂಗದ ಜನಪ್ರಿಯ ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡಲಿದ್ದಾರೆ. ಅವರ ಅಭಿನಯದ ಎರಡು ಸಿನಿಮಾಗಳು ಕೇವಲ 14 ದಿನಗಳ ಅಂತರದಲ್ಲಿ ಬಿಡುಗಡೆಯಾಗಲಿವೆ ಎಂಬ ಸುದ್ದಿ ಇದೀಗ ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ.

ಮಾಹಿತಿಯ ಪ್ರಕಾರ, ಗಣೇಶ್ ಅಭಿನಯದ ಪೀನಾಕ್ ಸಿನಿಮಾ ಅಕ್ಟೋಬರ್ ಎರಡರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದ್ದು, ನಂತರ ಬೃಂದಾವಿಹಾರಿ ಸಿನಿಮಾ ಅಕ್ಟೋಬರ್ 16ರಂದು ಬಿಡುಗಡೆಯಾಗಲಿದೆ.

ಈ ಬ್ಯಾಕ್ ಟು ಬ್ಯಾಕ್ ರಿಲೀಸ್ ಘೋಷಣೆಯಿಂದ ಅಭಿಮಾನಿಗಳಿಗೆ ಒಂದೇ ತಿಂಗಳಲ್ಲಿ ಎರಡು ಸಿನಿಮಾಗಳನ್ನು ನೋಡುವ ಅವಕಾಶ ದೊರಕಲಿದೆ. ಇದರಿಂದ ಚಿತ್ರರಂಗದಲ್ಲಿ ಗಣೇಶ್ ಅವರ ಸಿನಿಮಾಗಳ ಬಗ್ಗೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹಂಚಿಕೊಂಡು ಸಂತೋಷ ವ್ಯಕ್ತಪಡಿಸುತ್ತಿದ್ದು, ಎರಡು ಸಿನಿಮಾಗಳ ಯಶಸ್ಸಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online