Belagavi News:
ನಟ ದರ್ಶನ್ ಅವರು ಪ್ರತಿ ಆಷಾಢ ಶುಕ್ರವಾರದಂದು ತಪ್ಪದೆ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಹಲವು ವರ್ಷಗಳಿಂದಲೂ ಈ ಧಾರ್ಮಿಕ ಪದ್ಧತಿಯನ್ನು ಅವರು ಮುಂದುವರಿಸಿಕೊಂಡು ಬಂದಿದ್ದರು.
ಆದರೆ ರೇಣುಕಾ ಸ್ವಾಮಿ ಪ್ರಕರಣ ಬಳಿಕ ಈ ಬಾರಿ ಆಷಾಢ ಶುಕ್ರವಾರದಂದು ದರ್ಶನ್ ಅವರಿಗೆ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಇದರ ನಡುವೆ ಆಷಾಡ ಮಾಸದ ಮೊದಲ ಶುಕ್ರವಾರದಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮತ್ತು ಅರ್ಚನೆಗಳನ್ನು ನೆರವೇರಿಸಿದ್ದಾರೆ.
ಪತಿ ದರ್ಶನ್ ಹಾಗೂ ಪುತ್ರ ವಿನೀಶ್ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ, ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಹಲವು ವರ್ಷಗಳ ದರ್ಶನ್ ಅವರ ಧಾರ್ಮಿಕ ಆಚರಣೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ವಿಜಯಲಕ್ಷ್ಮಿ ಅವರ ದೇವಾಲಯ ಭೇಟಿ ಗಮನ ಸೆಳೆದಿದೆ.
ಚಾಮುಂಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ವಿಶೇಷ ಪೂಜೆ ಹಾಗೂ ಇದರ ಹಿನ್ನೆಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ...
ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ ಅವರ ಪತ್ನಿ ವಿಜಯಲಕ್ಷ್ಮಿ ಅವರು, ವಿವಿಐಪಿ ಸಾಲಿನಲ್ಲಿ ನಿಂತು ದೇವ ದರ್ಶನ ಪಡೆದರು.
ಈ ವೇಳೆ ಪತಿ ದರ್ಶನ್ ಹಾಗೂ ಪುತ್ರ ವಿನೀಶ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆಗಳನ್ನು ಮಾಡಿಸಿದರು. ಕುಟುಂಬದ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಜಯಲಕ್ಷ್ಮಿ ಭಕ್ತಿಭಾವದಿಂದ ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದರು.
ದರ್ಶನ್ ಅವರು ಪ್ರತಿ ವರ್ಷ ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವ ಪದ್ಧತಿಯನ್ನು ಹೊಂದಿದ್ದರು. ಆದರೆ ಈ ಬಾರಿ ವಿಜಯಲಕ್ಷ್ಮಿ ಅವರು ದೇವಾಲಯಕ್ಕೆ ಆಗಮಿಸಿ, ಪೂಜೆ ನೆರವೇರಿಸಿರುವುದು ಗಮನ ಸೆಳೆದಿದೆ.
ವಿಜಯಲಕ್ಷ್ಮಿ ಅವರ ದೇವಾಲಯ ಭೇಟಿ, ವಿಶೇಷ ಪೂಜೆ ಹಾಗೂ ಚಾಮುಂಡೇಶ್ವರಿ ದರ್ಶನದ ವಿಡಿಯೋ ಇಲ್ಲಿದೆ... ನೋಡಿ.