Belagavi news:
ರಾಜ್ಯ ರಿಜಿಸ್ಟ್ರೇಷನ್ ಹೊಂದಿರುವ ವಾಹನಗಳು ರಾಜ್ಯದಲ್ಲಿ ನಿರ್ದಿಷ್ಟ ಅವಧಿಗೆ ಮೀರಿದ ಬಳಿಕ ಸ್ಥಳೀಯ ನೊಂದಣಿ ಅಥವಾ ತೆರಿಗೆ ಪಾವತಿ ನಿಯಮಗಳನ್ನು ಪಾಲಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ. ಇದರಿಂದ ನಿಯಮ ಉಲ್ಲಂಘನೆ ಮಾಡುವ ವಾಹನ ಮಾಲೀಕರಿಗೆ ದಂಡ ಹಾಗೂ ಇತರ ಕ್ರಮಗಳು ಎದುರಾಗುವ ಸಾಧ್ಯತೆ ಇದೆ.
ಈ ಹೊಸ ಕ್ರಮದಿಂದ ರಾಜ್ಯದಲ್ಲಿ ವಾಹನ ನಿಯಂತ್ರಣ ವ್ಯವಸ್ಥೆ ಬಲಪಡಿಸುವ ಜೊತೆಗೆ ತೆರಿಗೆ ವಂಚನೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಹೊರ ರಾಜ್ಯ ವಾಹನ ಮಾಲೀಕರಲ್ಲಿ ಈ ಬಗ್ಗೆ ಆತಂಕವು ವ್ಯಕ್ತವಾಗುತ್ತಿದೆ.
ಕರ್ನಾಟಕ ಸರ್ಕಾರವು ರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಮಹತ್ವದ ಸುಗ್ರೀವಾಜ್ಞೆ ಹೊರಡಿಸಿದೆ. ಇದರ ಮೂಲಕ ರಾಜ್ಯದಲ್ಲಿ ಖಾಯಂವಾಗಿ ಬಳಸಲಾಗುವ ಇತರ ರಾಜ್ಯಗಳಲ್ಲಿ ನೋಂದಣಿಯಾದ ವಾಹನಗಳ ಮಾಲೀಕರು ಇನ್ನು ಮುಂದೆ ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ.
ಕರ್ನಾಟಕ ಮೋಟರು ವಾಹನಗಳ ತೆರಿಗೆ ವಿಧಿಸುವಿಕೆ ತಿದ್ದುಪಡಿ ಸುಗ್ರೀವಾಜ್ಞೆ ಜಾರಿಗೆ ಬಂದ ನಂತರ, ರಾಜ್ಯ ನಂದಣಿಯ ವಾಹನಗಳು ದೀರ್ಘಾವಧಿಗೆ ರಾಜ್ಯದಲ್ಲಿ ಸಂಚರಿಸಿದರೇ ಅವುಗಳ ಮೇಲೆ ತೆರಿಗೆ ಅನ್ವಯವಾಗಲಿದೆ. ವಿಶೇಷವಾಗಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೊಂದಣಿಯಾದ ವಾಹನಗಳು ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಹೆಚ್ಚಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರದ ಪ್ರಕಾರ, ಹೆಚ್ಚುತ್ತಿರುವ ವಾಹನ ಸಂಚಾರದಿಂದ ಪರಿಸರ ಮಾಲಿನ್ಯ ಮತ್ತು ತೆರಿಗೆ ವಂಚನೆ ಸಮಸ್ಯೆ ಹೆಚ್ಚಾಗಿದೆ. ಇನ್ನು ನಿಯಂತ್ರಿಸಲು ಹಾಗೂ ರಾಜ್ಯದ ಆದಾಯವನ್ನು ಹೆಚ್ಚಿಸಲು ಈ ಹೊಸ ತೆರಿಗೆ ನೀತಿ ಜಾರಿಗೆ ತರಲಾಗಿದೆ. ಇದರೊಂದಿಗೆ 25 ಲಕ್ಷ ರೂ. ಬೆಲ್ ಪಟ್ಟ ಎಲೆಕ್ಟ್ರಿಕ್ ವಾಹನಗಳಿಗೂ ತೆರಿಗೆ ಅನ್ವಯವಾಗಲಿದೆ ಎಂಬುದು ಮಹತ್ವದ ಅಂಶವಾಗಿದೆ.
ಈ ಕ್ರಮದಿಂದ ಹೊರ ರಾಜ್ಯ ನೊಂದಣಿಯ ವಾಹನಗಳ ನಿಯಂತ್ರಣ ಬಲವಾಗಲಿದ್ದು, ಪರಿಸರ ಸಂರಕ್ಷಣೆಗೂ ಸಹಾಯವಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ. ಆದರೆ ವಾಹನ ಮಾಲೀಕರಿಗೆ ಹೆಚ್ಚುವರಿ ಆರ್ಥಿಕ ಭಾರದ ಬಗ್ಗೆ ಚರ್ಚೆ ನಡೆಯುತ್ತಿದೆ.
ಕರ್ನಾಟಕ ಸರ್ಕಾರವು ಹೊರ ರಾಜ್ಯಗಳಲ್ಲಿ ನೋಂದಣಿಯಾಗಿ ರಾಜ್ಯದಲ್ಲಿ ಸತತವಾಗಿ ಸಂಚಾರಿಸುವ ಕಾರು, ಜೀಪು, ಮಿನಿ ಬಸ್ ಹಾಗೂ ದ್ವಿಚಕ್ರ ವಾಹನಗಳ ಮೇಲೆ ಹೊಸ ತೆರಿಗೆ ನಿಯಮಗಳನ್ನು ಜಾರಿಗೆ ತಂದಿದೆ. ಈ ಮೂಲಕ ತೆರಿಗೆ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಹಾಗೂ ರಾಜ್ಯದ ಆದಾಯವನ್ನು ಹೆಚ್ಚಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಹೊಸ ನಿಯಮದ ಪ್ರಕಾರ, 10 ಲಕ್ಷ ರೂ ದಿಂದ 15 ಲಕ್ಷ ರೂ. ಮೌಲ್ಯದ ವಾಹನಗಳಿಗೆ ಶೇ.15ರಷ್ಟು ತೆರಿಗೆ ವಿಧಿಸಲಾಗುತ್ತಿದೆ. 15 ಲಕ್ಷ ರೂ ಗಿಂತ ಹೆಚ್ಚು ಮೌಲ್ಯದ ವಾಹನಗಳಿಗೆ ಶೇ.18 ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಹೊರ ರಾಜ್ಯ ನೋಂದಣಿಯ ವಾಹನಗಳು ದೀರ್ಘಾವಧಿಗೆ ಕರ್ನಾಟಕದಲ್ಲಿ ಬಳಸಲ್ಪಡುವುದನ್ನು ಗಮನದಲ್ಲಿಟ್ಟುಕೊಂಡು ಈ ತೆರಿಗೆ ರೂಪಿಸಲಾಗಿದೆ.
ಹಳೆಯ ವಾಹನಗಳ ವಿಷಯದಲ್ಲಿ ಅವುಗಳ ವಯಸ್ಸು ಮತ್ತು ಸವೆತದ ಆಧಾರದ ಮೇಲೆ ತೆರಿಗೆ ದರದಲ್ಲಿ ವ್ಯತ್ಯಾಸ ಇರಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದರಿಂದ ವಾಹನದ ಸ್ಥಿತಿ ಮತ್ತು ಬಳಕೆಯನ್ನು ಆಧರಿಸಿ ನ್ಯಾಯ ಸಮ್ಮತ ತೆರಿಗೆ ವ್ಯವಸ್ಥೆ ರೂಪಿಸಲಾಗುತ್ತದೆ.
ಪರ ರಾಜ್ಯ ವಾಹನಗಳ ಅತಿಯಾದ ಬಳಕೆ, ತೆರಿಗೆ ವಂಚನೆ ಹಾಗೂ ಹೆಚ್ಚುತ್ತಿರುವ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ಈ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಹೊಸ ನೀತಿ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ನಿರೀಕ್ಷಿಸಲಾಗಿದೆ.
ಕರ್ನಾಟಕ ಸರ್ಕಾರವು ಹೊರ ರಾಜ್ಯ ನೋಂದಣಿಯ ವಾಹನಗಳ ಮೇಲೆ ಹೊಸ ತೆರಿಗೆ ವಿಧಿಸುವ ನಿರ್ಧಾರಕ್ಕೆ ಪ್ರಮುಖ ಕಾರಣಗಳನ್ನು ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಸಾವಿರಾರು ವಾಹನಗಳು ಬೇರೆ ರಾಜ್ಯಗಳಲ್ಲಿ ದೀರ್ಘಾವಧಿಗೆ ಸಂಚರಿಸುತ್ತಿದ್ದರು, ಅವುಗಳಿಂದ ರಾಜ್ಯದ ಬೊಕ್ಕಸಕ್ಕೆ ಯಾವುದೇ ತೆರಿಗೆ ಆದಾಯ ಬರುತ್ತಿರಲಿಲ್ಲ ಎಂಬುದು ಪ್ರಮುಖ ಸಮಸ್ಯೆಯಾಗಿದೆ.
ಅನೇಕ ವಾಹನ ಮಾಲೀಕರು ತೆರಿಗೆ ತಪ್ಪಿಸಲು ನೆರೆಯ ರಾಜ್ಯಗಳಲ್ಲಿ ವಾಹನ ನೊಂದಣಿ ಮಾಡಿಸಿ, ನಂತರ ಕರ್ನಾಟಕದಲ್ಲಿ ನಿರಂತರವಾಗಿ ಬಳಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದ ರಾಜ್ಯಕ್ಕೆ ಆಗಬೇಕಿದ್ದ ತೆರಿಗೆ ಆದಾಯದಲ್ಲಿ ನಷ್ಟ ಉಂಟಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತೆರಿಗೆ ವಂಚನೆ ನಡೆಯಲು ಮತ್ತು ರಾಜ್ಯದ ಆದಾಯವನ್ನು ಹೆಚ್ಚಿಸಲು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ರಾಜ್ಯ ನೊಂದಣಿಯ ವಾಹನಗಳು ರಾಜ್ಯದಲ್ಲಿ ಖಾಯಂ ಬಳಕೆಯಾಗುತ್ತಿದ್ದರೆ ಅವುಗಳ ಮೇಲೆ ತೆರಿಗೆ ವಿಧಿಸುವ ಮೂಲಕ ನ್ಯಾಯ ಸಮ್ಮತ ವ್ಯವಸ್ಥೆ ರೂಪಿಸಲಾಗುತ್ತಿದೆ.
ಇದಲ್ಲದೆ, ಈ ವಾಹನಗಳಿಂದ ರಾಜ್ಯದಲ್ಲಿ ಪರಿಸರ ಮಾಲಿನ್ಯ ಹಚ್ಚುತ್ತಿರುವುದು ಮತ್ತೊಂದು ಪ್ರಮುಖ ಕಾರಣವಾಗಿದೆ. ಹೆಚ್ಚಿದ ವಾಹನ ಸಂಚಾರದಿಂದ ಗಾಳಿಯ ಗುಣಮಟ್ಟ ಕುಸಿಯುತ್ತಿರುವುದು ಮತ್ತು ನಗರ ಪ್ರದೇಶಗಳಲ್ಲಿ ಒತ್ತಡ ಹೆಚ್ಚುತ್ತಿರುವುದು ಸರ್ಕಾರದ ಕ್ರಮಕ್ಕೆ ಪ್ರೇರಣೆಯಾಗಿದೆ.
ಒಟ್ಟಾರೆ, ತೆರಿಗೆ ವಂಚನೆ ತಡೆ , ರಾಜ್ಯದ ಆದಾಯ ವೃದ್ಧಿ ಮತ್ತು ಪರಿಸರ ಸಂರಕ್ಷಣೆ ಈ ಮೂರು ಉದ್ದೇಶಗಳಿಗಾಗಿ ಈ ಕಟ್ಟುನಿಟ್ಟಿನ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
Also Read: