<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಸಿಎಂ ವಿಜಯ್ ಗೆ ವಿದ್ಯಾರ್ಥಿಯ ಮನವಿ ಪತ್ರ : "ವಿಜಯ್ ಅಂಕಲ್, ತಕ್ಷಣ ಕ್ರಮ ಕೈಗೊಳ್ಳಿ" ಎಂದ ಬಾಲಕ

ಸಿಎಂ ವಿಜಯ್ ಗೆ ವಿದ್ಯಾರ್ಥಿಯ ಮನವಿ ಪತ್ರ : "ವಿಜಯ್ ಅಂಕಲ್, ತಕ್ಷಣ ಕ್ರಮ ಕೈಗೊಳ್ಳಿ" ಎಂದ ಬಾಲಕ
Summary: "Please take action immediately, Vijay Uncle," a school student has written a letter to the CM and appealed. The student's letter has now attracted attention.

Belagavi News :

ತಮಿಳುನಾಡಿನಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಮುಖ್ಯಮಂತ್ರಿಗೆ ಬರೆದಿರುವ ಮನವಿ ಪತ್ರವೊಂದು ಇದೀಗ ಗಮನ ಸೆಳೆದಿದೆ. ತಿರುಚಂದೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿ ಒಬ್ಬರು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಪತ್ರ ಬರೆದು, ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಸರ್ಕಾರಿ ಬಸ್ಗಳ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

ತಿರುಚಂದೂರಿನ ಸೆಂಥಿಲ್ ಅಂಡಾವರ್ ತರಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಈ ಪತ್ರ ಬರೆದಿದ್ದಾನೆ. ಪತ್ರದಲ್ಲಿ ವಿದ್ಯಾರ್ಥಿಯು ಮುಖ್ಯಮಂತ್ರಿಯನ್ನು ಪ್ರೀತಿಯಿಂದ "ವಿಜಯ್ ಅಂಕಲ್" ಎಂದು ಸಂಬೋಧಿಸಿದ್ದು, ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೀಸಲಾದ ಸರ್ಕಾರಿ ಬಸ್ಗಳ ವ್ಯವಸ್ಥೆಯನ್ನು ಮಾಡುವಂತೆ ಕೋರಿದ್ದಾನೆ.

ಪ್ರಸ್ತುತ ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆ ಎದುರಿಸುತ್ತಿದ್ದು, ಇದರಿಂದ ಶಾಲೆಗೆ ತೆರಳಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿ ತನ್ನ ಮನವಿಯಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿಯ ಸರಳ ಮನವಿ ಹಾಗೂ ಮುಖ್ಯಮಂತ್ರಿ ಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಶಾಲಾ ಮಕ್ಕಳ ಸಾರಿಗೆ ಸಮಸ್ಯೆ ಯತ್ತ ಗಮನ ಸೆಳೆದಿದೆ.

ಸಿಎಂ ವಿಜಯ್ ಗೆ 9ನೇ ತರಗತಿಯ ವಿದ್ಯಾರ್ಥಿಯ ಪತ್ರ - ಶಾಲಾ ಮಕ್ಕಳಿಗೆ ಸರ್ಕಾರಿ ಬಸ್ ವ್ಯವಸ್ಥೆಗೆ ಮನವಿ :

ಶಾಲಾ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ 9ನೇ ತರಗತಿ ವಿದ್ಯಾರ್ಥಿ ಒಬ್ಬ ಬರೆದಿರುವ ಪತ್ರ ಗಮನ ಸೆಳೆದಿದೆ.

ತೂತುಕುಡಿ ಜಿಲ್ಲೆಯ ತಿರುಚಂದೂರಿನ ಸೆಂಥಿಲ್ ಅಂಡಾವರ್ ತರಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಅಶೋಕ್, ಮುಖ್ಯಮಂತ್ರಿ ಗೆ ಪತ್ರ ಬರೆದು ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾನೆ.

ಈ ಶಾಲೆಯಲ್ಲಿ 6ರಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದ್ದು, ತಿರುಚಂದೂರಿನ ಸುತ್ತಮುತ್ತಲಿನ ಹಲವು ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೂರದ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಅಶೋಕ್ ಈ ಮನವಿ ಸಲ್ಲಿಸಿದ್ದಾನೆ.

ಇದೇ ಪ್ರದೇಶದಲ್ಲಿರುವ ಸೆಂಥಿಲ್ ಮುರುಗನ್ ಬಾಲಕೀಯರ ಹೈಯರ್ ಸೆಕೆಂಡರಿ ಶಾಲೆಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿನಿಯರು ಆಗ್ರಹಿಸುತ್ತಿದ್ದಾರೆ. ಹೀಗಾಗಿ ಶಾಲಾ ಸಮಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಸೇವೆ ಕಲ್ಪಿಸುವಂತೆ ವಿದ್ಯಾರ್ಥಿ ಪತ್ರದಲ್ಲಿ ಕೋರಿದ್ದಾನೆ.

ಮುಖ್ಯಮಂತ್ರಿಯನ್ನು ಪ್ರೀತಿಯಿಂದ "ವಿಜಯ್ ಅಂಕಲ್ " ಎಂದು ಸಂಬೋಧಿಸಿರುವ ವಿದ್ಯಾರ್ಥಿಯ ಪತ್ರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದ್ದು, ಶಾಲಾ ಮಕ್ಕಳ ಸಾರಿಗೆ ಸಮಸ್ಯೆ ಯತ್ತ ಗಮನಿಸಿದೆ.

'ಅಂಕಲ್ ವಿಜಯ್, ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಿ ' - ಸಿಎಂ ಗೆ 9ನೇ ತರಗತಿ ವಿದ್ಯಾರ್ಥಿಯ ಮನವಿ :

ಶಾಲೆಗೆ ತೆರಳಲು ಎದುರಾಗುತ್ತಿರುವ ಸಾರಿಗೆ ಸಮಸ್ಯೆ ಕುರಿತು ಒಂಬತ್ತನೇ ತರಗತಿಯ ವಿದ್ಯಾರ್ಥಿ ಒಬ್ಬ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದು ವಿಶೇಷ ಸರ್ಕಾರಿ ಬಸ್ಗಳ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾನೆ.

ತಿರುಚಂದೂರಿನ ಸೆಂಥಿಲ್ ಅಂಡಾವರ್ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಅಶೋಕ್, ತನ್ನ ಪತ್ರದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿದಿನ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾನೆ.

" ನನ್ನ ಶಾಲೆ ನಮ್ಮ ಗ್ರಾಮದಿಂದ ಸುಮಾರು 7 km ದೂರದಲ್ಲಿದೆ. ಉದಂಗುಡಿ ಕುಡಿ ಕುಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ನನ್ನಂತೆಯೇ ಹಲವು ವಿದ್ಯಾರ್ಥಿಗಳು ಶಾಲೆಗೆ ಬರಲು 20 ಕಿಲೋಮೀಟರ್ ವರೆಗೆ ಪ್ರಯಾಣಿಸುತ್ತಿದ್ದಾರೆ " ಎಂದು ವಿದ್ಯಾರ್ಥಿ ಪತ್ರದಲ್ಲಿ ತಿಳಿಸಿದ್ದಾನೆ.

ವಿದ್ಯಾರ್ಥಿಗಳ ಪ್ರಯಾಣದ ಕಷ್ಟವನ್ನು ವಿವರಿಸಿರುವ ಅಶೋಕ್, ಬೆಳಿಗ್ಗೆ ಎಂಟು ಗಂಟೆಗೆ ಬಸ್ ಹತ್ತುವ ವಿದ್ಯಾರ್ಥಿಗಳು ಶಾಲೆಗೆ ತಲುಪಲು ಸುಮಾರು 9 ಗಂಟೆಯಾಗುತ್ತದೆ ಎಂದು ಹೇಳಿದ್ದಾರೆ. ಸಂಜೆ 4 ಗಂಟೆಗೆ ಶಾಲೆ ಮುಗಿದ ಬಳಿಕ ಮನೆಗೆ ತಲುಪಲು ಒಂದು ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತಿದೆ ಎಂದು ಮನವಿ ಉಲ್ಲೇಖಿಸಿದ್ದಾರೆ.

ಅಲ್ಲದೆ, ಸರ್ಕಾರಿ ಬಸ್ಗಳಲ್ಲಿ ಹೆಚ್ಚಿನ ಜನರಟನೆ ಇರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿದಿರುವ ವಿದ್ಯಾರ್ಥಿ, " ವಿಜಯ್ ಅಂಕಲ್, ದಯವಿಟ್ಟು ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾದ ಬಸ್ ಗಳನ್ನು ಓಡಿಸಲು ಕ್ರಮ ಕೈಗೊಳ್ಳಿ " ಎಂದು ಮನವಿ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿಯ ಸರಳ ಮನವಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಸಾರಿಗೆ ಸಮಸ್ಯೆ ಬಗ್ಗೆ ಚರ್ಚೆ ಆರಂಭವಾಗಿದೆ.

ಸಿಎಂ ವಿಜಯ್ ಗೆ ವಿದ್ಯಾರ್ಥಿಯ ಪತ್ರ ವೈರಲ್ - ಶಾಲಾ ಮಕ್ಕಳ ಬಸ್ ಸಮಸ್ಯೆಗೆ ಮತ್ತೆ ಗಮನ ಹೇಳಿದ ಮನವಿ :

ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಪ್ರೀತಿಯಿಂದ ಅಂಕಲ್ ಎಂದು ಸಂಭೋಧಿಸಿ ಶಾಲಾ ವಿದ್ಯಾರ್ಥಿ ಒಬ್ಬ ಬರೆದಿರುವ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿಯ ಆತ್ಮವಿಶ್ವಾಸದ ಮನವಿ ಸಾರ್ವಜನಿಕರ ಗಮನ ಸೆಳೆಯುವುದರ ಜೊತೆಗೆ ಹಲವರ ಮೆಚ್ಚುಗೆಗೂ ಪಾತ್ರವಾಗಿದೆ.

ತಿರುಚಂದೂರಿನ ಸೆಂಥಿಲ್ ಅಂಡಾವರ್ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯ ಅಶೋಕ್, ಸಾಲಿಗೆ ತೆರಳುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯನ್ನು ವಿವರಿಸಿ ಮುಖ್ಯಮಂತ್ರಿ ಗೆ ಪತ್ರ ಬರೆದಿದ್ದಾರೆ.

ದೂರದ ಗ್ರಾಮಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳು ಬಸ್ಗಳ ಕೊರತೆ ಮತ್ತು ಹೆಚ್ಚಿನ ಜನದಟ್ಟಣೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿರುವ ಅಶೋಕ್, ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರ್ಕಾರಿ ಬಸ್ಗಳ ವ್ಯವಸ್ಥೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ.

ಈ ಹಿಂದೆ ಶಾಲಾ ವಿದ್ಯಾರ್ಥಿಗಳ ಪ್ರಯಾಣದ ತೊಂದರೆಗಳನ್ನು ಕಡಿಮೆ ಮಾಡಲು ಮೀಸಲಾದ ಬಸ್ ಗಳನ್ನು ಓಡಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ರಾಜ್ ಮೋಹನ್ ಘೋಷಣೆ ಮಾಡಿದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಯ ಮನವಿ ಇದೀಗ ಮತ್ತಷ್ಟು ಗಮನ ಸೆಳೆದಿದೆ.

ವಿದ್ಯಾರ್ಥಿಯ ಸರಳವಾದ ಪತ್ರವು ಶಾಲಾ ಮಕ್ಕಳ ದೈನಂದಿನ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online