BELAGAVI NEWS :
ನವದೆಹಲಿ: ಬಕ್ರೀದ್ ಸೇರಿದಂತೆ ಯಾವುದೇ ದಿನ ತಮಿಳುನಾಡಿನಲ್ಲಿ ಗೋವು ಅಥವಾ ಕರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ "ವಿಕ್ರಮ್ ನಾಥ್" ಮತ್ತು "ಸಂದೀಪ್ ಮೆಹ್ತಾ " ಅವರನ್ನೊಳಗೊಂಡ ಪೀಠವು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿ, ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮದ್ರಾಸ್ ಹೈಕೋರ್ಟ್ ತನ್ನ ಆದೇಶದ ಕೊನೆಯ ಪ್ಯಾರಾಗ್ರಾಫ್ ನಲ್ಲಿ ಮಾಡಿರುವ ನಿರ್ದೇಶನಗಳನ್ನು ಪ್ರಾಥಮಿಕವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.
ತಮಿಳುನಾಡು ಸರ್ಕಾರದ ಪರವಾಗಿ ವಾದ ಮಂಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆಯನ್ನು ತಡೆಯುವ ಉದ್ದೇಶಕ್ಕೆ ಮಾತ್ರ ಕ್ರಮ ಕೈಗೊಳ್ಳಲು ಅವಕಾಶವಿದೆ. ಆದರೆ ಸಂಪೂರ್ಣ ನಿಷೇಧ ವಿಧಿಸುವುದು ರಾಜ್ಯದ ಶಾಸನಬದ್ಧ ಚೌಕಟ್ಟಿಗೆ ವಿರುದ್ಧವಾಗಿದೆ ಎಂದು ತಿಳಿಸಲಾಗಿದೆ.
ಗೋಹತ್ಯೆ ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನುಗಳು ನಿಷೇಧಕ್ಕಿಂತ ನಿಯಂತ್ರಣಕ್ಕೆ ಅವಕಾಶ ನೀಡುತ್ತವೆ ಎಂಬ ಅಂಶವನ್ನು ರಾಜ್ಯ ಸರ್ಕಾರ ನ್ಯಾಯಾಲಯದ ಗಮನಕ್ಕೆ ತಂದಿದೆ. ಪ್ರಕರಣದ ಮುಂದಿನ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮುಂದುವರಿಯಲಿದೆ.
ಹಿಂದೂ ಮಕ್ಕಳ್ ಕಚ್ಚಿಯ ಪ್ರಧಾನ ಕಾರ್ಯದರ್ಶಿ ಕೆ. ಸೂರ್ಯ ಪ್ರಶಾಂತ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಧಾರದ ಮೇಲೆ ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠವು ಮೇ 27ರಂದು ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ಹೊರಡಿಸಿತ್ತು. ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಮತ್ತು ನ್ಯಾಯಮೂರ್ತಿ ವಿ. ಲಕ್ಷ್ಮೀನಾರಾಯಣ್ ಅವರನ್ನೊಳಗೊಂಡ ಪೀಠವು ಬಕ್ರಿದ್ ಹಬ್ಬದ ಮುನ್ನಾದಿನ ಈ ಆದೇಶ ನೀಡಿತ್ತು.
ಅರ್ಜಿದಾರರು ತಮ್ಮ ಅರ್ಜಿಯಲ್ಲಿ, ಗೊತ್ತುಪಡಿಸಿದ ಸ್ಥಳಗಳಲ್ಲಿ ಮಾತ್ರ ಪ್ರಾಣಿವಧೆ ನಡೆಯುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ಆದೇಶವು ಯಾವುದೇ ದಿನ ಮತ್ತು ಯಾವುದೇ ಸ್ಥಳದಲ್ಲಿ ಹಕ್ಕುಗಳು ಹಾಗೂ ಕರಗಳ ವಧೆಯನ್ನು ನಿಷೇಧಿಸುವ ರೀತಿಯಲ್ಲಿ ವ್ಯಾಪಕವಾಗಿದೆ ಎಂದು ಅವರು ಆಕ್ಷೇಪಿಸಿದ್ದರು.
ಗೋಹತ್ಯೆ ನಿಷೇಧವು ಹಾಲು ಉತ್ಪಾದನೆ ಹೆಚ್ಚಳ ಮತ್ತು ಗ್ರಾಮೀಣ ಆರ್ಥಿಕತೆಯ ಸುಧಾರಣೆಗೆ ಸಹಕಾರಿಯಾಗಲಿದೆ ಎಂಬ ಸರ್ಕಾರದ ಆದೇಶವನ್ನು ಹೈಕೋರ್ಟ್ ಪರಿಗಣಿಸಿತ್ತು ಎಂದು ಅರ್ಜಿದಾರರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಮೇಲೆ ಎಲ್ಲರ ಗಮನ ನೆಟ್ಟಿದೆ.