belagavi news:
ಕೊಲ್ಕತ್ತಾ: ಪಶ್ಚಿಮ ಬಂಗಾಳನಲ್ಲಿ ಬಿಜೆಪಿಯ ಸರ್ಕಾರ ರಚನೆಯಾಗಿದೆ ಎಂಬ ವರದಿಗಳ ನಡುವೆ ನಾಯಕ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಕಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರ್. ಎನ್.ರವಿ ಪ್ರತಿಜ್ಞಾವಿಧಿ ಬೋಧಿಸಿದರು.ಸುವೇಂದು ಎರಡು ಅಧಿಕಾರಿ ಜೊತೆಗೆ ಐವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಾರೆ ಎಂದು ಹೇಳಲಾಗಿದೆ.
ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರಲ್ಲಿ ದಿಲೀಪ್ ಘೋಷ, ಅಗ್ನಿಮಿತ್ರ ಪಾಲ್, ಶೋಕ್ ಕೀರ್ತನಿಯಾ, ಕ್ಷುದಿರಾಮ್ ತುಡು ಮತ್ತು ನಿಶಿತ್ ಪ್ರಮಾಣಿಕ ಸೇರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ರಚನೆಯಾಗಿದೆ ಎಂಬ ವರದಿಗಳ ನಡುವೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿರುವ ಕಾರ್ಯಕ್ರಮದಲ್ಲಿ ದೇಶದ ಪ್ರಮುಖ ನಾಯಕರು ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರಾಧ್ಯಕ್ಷ ಎಂದು ಉಲ್ಲೇಖಿಸಲಾದ ನಿತಿನ್ ನಬಿನ್ , ಹಾಗೂ ಕೇಂದ್ರ ಸಚಿವರಾದ ರಾಮ್ ಮೋಹನ್ ನಾಯ್ಡು ಮತ್ತು ಧರ್ಮೇಂದ್ರ ಪ್ರಧಾನ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ ಎಂದು ಹೇಳಲಾಗಿದೆ.
ಅದೇ ರೀತಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರ ಪ್ರದೇಶ್ ಮುಖ್ಯಮಂತ್ರಿ ಎನ್ .ಚಂದ್ರಬಾಬು ನಾಯ್ಡು, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಮತ್ತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಅರ್ಜಿಯಾಗಿದೆ.
ಇದಕ್ಕೂ ಮೊದಲು ಶುಕ್ರವಾರ ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುವೇಂದ್ರ ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿ ಆಗಿ ಘೋಷಿಸಿದ್ದರು ಎಂದು ತಿಳಿದುಬಂದಿದೆ.
ಕೊಲ್ಕತ್ತಾನಲ್ಲಿ ನಡೆದಿದ್ದ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಉತ್ತರ ಬಂಗಾಳ ಮತ್ತು ಜಾರ್ಖಂಡ್ ಸೇರಿದಂತೆ ನೆರೆಯ ಪ್ರದೇಶಗಳಿಂದ ಸಾವಿರಾರು ಬಿಜೆಪಿ ಬೆಂಬಲಿಗರು ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಮಾಣವಚನ ಕಾರ್ಯಕ್ರಮದ ಹಿನ್ನಲೆ ನಗರದ ವಿವಿಧೆಡೆ ಬಿಜೆಪಿ ಧ್ವಜಗಳು ಮತ್ತು ಕೇಸರಿ ಬ್ಯಾನರ್ ಗಳನ್ನು ಹಿಡಿದ ಬೆಂಬಲಿಗರ ಗುಂಪುಗಳು ಸೇರಿಕೊಂಡಿದ್ದು, ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸಂಚಲನ ಉಂಟಾಗಿದೆ.' ಜೈ ಶ್ರೀ ರಾಮ್' ಘೋಷಣೆಗಳು ಮತ್ತು ಬಿಜೆಪಿ ನಾಯಕರ ಪರ ಘೋಷಣೆಗಳು ಕೇಳಿ ಬಂದವು ಎಂದು ತಿಳಿದುಬಂದಿದೆ.
ಕೊಲ್ಕತ್ತಾ ನಲ್ಲಿ ನಡೆದ ಸರ್ಕಾರ ರಚನಾ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ನೋಬೆಲ್ ಪುರಸ್ಕೃತ ರವೀಂದ್ರನಾಥ್ ಟ್ಯಾಗೋರ್ ಅವರ ೧೬೫ ಜಯಂತಿ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ್ದಾರೆ. ವೇದಿಕೆಯಲ್ಲಿ ಅವರು ರಾಜ್ಯದ ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ಲಾಲ್ ಸರ್ಕಾರ ಅವರ ಆಶೀರ್ವಾದವನ್ನು ಕೂಡ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಇತ್ತೀಚಿಗೆ ಪ್ರಕಟವಾದ ವಿಧಾನಸಭೆ ಪಲಿತಾಂಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 207 ಸ್ಥಾನಗಳೊಂದಿಗೆ ಭಾರಿ ಬಹುಮತ ಪಡೆದಿದೆ ಎಂದು ವರದಿಯಾಗಿದೆ.
Also Read: