Belagavi News:
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುವ ಬಡ ಹಾಗೂ ಮಾಧ್ಯಮ ವರ್ಗದ ರೋಗಿಗಳಿಗೆ ಅನುಕೂಲವಾಗುವಂತೆ ಆರೋಗ್ಯ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳು, ಸೇವಾ ಕೊರತೆ, ಸಿಬ್ಬಂದಿಗಳ ವರ್ತನೆ ಹಾಗೂ ಆಡಳಿತಾತ್ಮಕ ಗೊಂದಲಗಳ ಬಗ್ಗೆ ದೂರು ಸಲ್ಲಿಸಲು 24×7 ಹೆಲ್ಪ್ ಲೈನ್ ವ್ಯವಸ್ಥೆ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಈ ಸಹಾಯವಾಣಿ ಆರೋಗ್ಯ ಸಚಿವರ ಕಚೇರಿಯಿಂದಲೇ ನೇರವಾಗಿ ಮೇಲ್ವಿಚಾರಣೆಗೊಳಗಾಗಲಿದ್ದು, ರೋಗಿಗಳ ದೂರುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶ ಹೊಂದಿದೆ. ಸಾರ್ವಜನಿಕರಿಂದ ಬರುವ ದೂರುಗಳನ್ನು ದಾಖಲಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ರವಾನಿಸುವ ಮೂಲಕ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ಸೇವಾ ಗುಣಮಟ್ಟ ಹೆಚ್ಚುವುದರ ಜೊತೆಗೆ ರೋಗಿಗಳ ವಿಶ್ವಾಸವು ಮತ್ತಷ್ಟು ಬಲವಾಗುವ ನಿರೀಕ್ಷೆಯಿದೆ.
ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಸೌಲಭ್ಯಗಳು, ಸಿಬ್ಬಂದಿಗಳ ನಡೆ ಹಾಗೂ ಇತರ ಸೇವೆಗಳ ಕುರಿತು ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ದಾಖಲಿಸಬಹುದಾದ ಈ ವ್ಯವಸ್ಥೆ, ಆರೋಗ್ಯ ಕ್ಷೇತ್ರದಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಸರ್ಕಾರದ ಈ ಹೊಸ ಉಪಕ್ರಮದಿಂದ ಲಕ್ಷಾಂತರ ರೋಗಿಗಳಿಗೆ ಹೆಚ್ಚು ಪರಿಣಾಮಕಾರಿ ಮತ್ತು ಜನಸ್ನೇಹಿ ಆರೋಗ್ಯ ಸೇವೆ ದೊರೆಯುವ ಸಾಧ್ಯತೆ ಇದೆ.
ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವ ಸಾರ್ವಜನಿಕರ ದೂರುಗಳು ಹಾಗೂ ಗೊಂದಲಗಳನ್ನು ಪರಿಹರಿಸಲು ಸಚಿವರ ಕಚೇರಿಯಿಂದಲೇ ನೇರವಾಗಿ ಕಾರ್ಯನಿರ್ವಹಿಸುವ 24×7 ಉಚಿತ ಸಹಾಯವಾಣಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ನೂತನ ಆರೋಗ್ಯ ಸಚಿವ ಯುಟಿ ಖಾದರ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಅಕ್ರಮಗಳನ್ನು ತಡೆಗಟ್ಟಲು ಈ ಕೂಡ ಇದರಿಂದ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
ಮುಖ್ಯಾಂಶಗಳು:
ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದಕ್ಕೆ ಬ್ರೇಕ್.
ಆಯುಷ್ಮಾನ್ ಭಾರತ ಯೋಜನೆಯಡಿ ಉಚಿತ ಚಿಕಿತ್ಸೆ ಖಾತರಿಪಡಿಸಲು ಕಠಿಣ ಕ್ರಮ.
ನೂತನ ಆರೋಗ್ಯ ಸಚಿವ ಯುಟಿ ಖಾದರ್ ಬಿಗ್ ಬ್ರೇಕ್ ಥ್ರೂ.
ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳು ಮತ್ತು ಅವರ ಕುಟುಂಬಸ್ಥರಿಗೆ ಚಿಕಿತ್ಸೆ, ನೋಂದಣಿ, ವಿವಿಧ ಆರೋಗ್ಯ ಯೋಜನೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಅನೇಕ ಪ್ರಶ್ನೆಗಳು ಹಾಗೂ ಅನುಮಾನಗಳು ಎದುರಾಗುತ್ತವೆ. ಆದರೆ ಹಲವು ಸಂದರ್ಭಗಳಲ್ಲಿ ಆಸ್ಪತ್ರೆ ಸಿಬ್ಬಂದಿಯಿಂದ ಸಮರ್ಪಕ ಮಾಹಿತಿ ಅಥವಾ ಸ್ಪಂದನೆ ದೊರೆಯುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ಸಾರ್ವಜನಿಕರಿಗೆ ನೆರವಾಗಲು 24×7 ಉಚಿತ ಸಹಾಯವಾಣಿ ಆರಂಭಿಸಲು ಮುಂದಾಗಿದೆ.
ಆರೋಗ್ಯ ಸಚಿವ ಯು ಟಿ ಖಾದರ್ ಅವರು ಒಂದು ವಿಶೇಷ ಸಂದರ್ಶನದಲ್ಲಿ, ಹೊಸದಾಗಿ ಆರಂಭವಾಗಲಿರುವ ಸಹಾಯವಾಣಿ ಸಂಖ್ಯೆಯನ್ನು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲಾಗುವುದು ಎಂದು ತಿಳಿಸಿದ್ದಾರೆ. ಇದರಿಂದ ರೋಗಿಗಳು ತಮ್ಮ ದೂರುಗಳು ಗೊಂದಲಗಳು ಹಾಗೂ ಸಮಸ್ಯೆಗಳನ್ನು ನೇರವಾಗಿ ದಾಖಲಿಸಲು ಅವಕಾಶ ಸಿಗಲಿದೆ .
ಇದೇ ವೇಳೆ, ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗಿರುವ ವಿಳಂಬ, ಫಲಾನುಭವಿಗಳಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಡುವುದು ಅಥವಾ ಯೋಜನೆಯ ಸೌಲಭ್ಯಗಳನ್ನು ನಿರಾಕರಿಸುವಂತಹ ಪ್ರಕರಣಗಳ ವಿರುದ್ಧ ಸಾರ್ವಜನಿಕರು ಈ ಹೆಲ್ಪ್ ಲೈನ್ ಮೂಲಕ ನೇರವಾಗಿ ದೂರ ಸಲ್ಲಿಸಬಹುದಾಗಿದೆ. ಇಂತಹ ದೂರಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳುವ ವ್ಯವಸ್ಥೆಯನ್ನು ಆರೋಗ್ಯ ಇಲಾಖೆ ರೂಪಿಸುತ್ತಿದೆ.
ಫಲಾನುಭವಿಗಳಿಂದ ಯಾವುದೇ ಕಾರಣಕ್ಕೂ ಹಣ ವಸೂಲಿ ಮಾಡಬಾರದು ಎಂಬ ಸ್ಪಷ್ಟ ಸೂಚನೆ ನೀಡಲಾಗಿದೆ. ಆಸ್ಪತ್ರೆಗಳೊಂದಿಗೆ ಉಂಟಾಗುವ ವಿವಾದಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ' ಆರೋಗ್ಯ ಮಿತ್ರ' ಸಿಬ್ಬಂದಿಯ ಮೇಲಿದೆ ಎಂದು ಸಚಿವರು ಹೇಳಿದ್ದಾರೆ. ಜೊತೆಗೆ, ಉಚಿತ ಚಿಕಿತ್ಸಾ ಸೌಲಭ್ಯಗಳ ಕುರಿತು ಜನರಿಗೆ ಅರಿವು ಮೂಡಿಸಲು ಆಸ್ಪತ್ರೆಗಳಲ್ಲಿ ಮಾಹಿತಿ ಫಲಕಗಳು ಮತ್ತು ಜಾಹೀರಾತುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಸುಲಭ, ಪಾರದರ್ಶಕ ಹಾಗೂ ಜವಾಬ್ದಾರಿಯುತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ಹೊಸ 24×7 ಸಹಾಯವಾಣಿ ವ್ಯವಸ್ಥೆ ಮುಂಬರುವ ವಾರಗಳಲ್ಲಿ ರಾಜ್ಯಾದ್ಯಂತ ಜಾರಿಗೆ ಬರಲಿದ್ದು, ರೋಗಿಗಳ ದೂರುಗಳಿಗೆ ತ್ವರಿತ ಪರಿಹಾರ ಕಲ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.
ಹೃದಯ ಶಸ್ತ್ರಚಿಕಿತ್ಸೆಗಳ ವೆಚ್ಚದ ಮೇಲೆ ಮಿತಿ ವಿಧಿಸುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಯುಟಿ ಖಾದರ್, ಈಗಾಗಲೇ ಜಾರಿಯಲ್ಲಿರುವ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಚಿಕಿತ್ಸಾ ಶುಲ್ಕಗಳಿಗೆ ನಿಗದಿತ ಮಿತಿಯನ್ನು ನಿಗದಿಪಡಿಸಲಾಗಿದ್ದು, ಯಾವುದೇ ಆಸ್ಪತ್ರೆಯೂ ಅದನ್ನು ಮೀರಬಾರದು ಎಂದು ಸ್ಪಷ್ಟಪಡಿಸಿದರು.
ಈ ಕುರಿತು ವಿವರಿಸಿದ ಸಚಿವರು, ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ನೆರವಾಗಲು ಸರ್ಕಾರ ಹಲವು ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು. ವಿಶೇಷವಾಗಿ ಸಂಜೀವಿನಿ -ಪುನೀತ್ ರಾಜಕುಮಾರ್ ಯೋಜನೆ ಅಡಿಯಲ್ಲಿ ಇಸಿಜಿ, ಚುಚ್ಚುಮದ್ದು, ಆಂಜಿಯೋಗ್ರಾಮ್ ಹಾಗೂ ಆಂಜಿಯೋಪ್ಲ್ಯಾಸ್ತಿ ಸೇರಿದಂತೆ ಹಲವು ಪ್ರಮುಖ ಹೃದಯ ಚಿಕಿತ್ಸಾ ಸೇವೆಗಳನ್ನು ಅನೇಕ ಸಂದರ್ಭಗಳಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಉಚಿತ ಆಂಜಿಯೋಗ್ರಾಮ್ ಸೌಲಭ್ಯಗಳನ್ನು ಇನ್ನಷ್ಟು ವಿಸ್ತರಿಸುವ ಹಾಗೂ ಆರೋಗ್ಯ ಸೇವೆಗಳು ವಿತರಣೆಯನ್ನು ಪರಿಣಾಮಕಾರಿಯಾಗಿ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಮತ್ತೊಮ್ಮೆ ಸಾರ್ವಜನಿಕರಿಗೆ ಹೆಚ್ಚು ಪ್ರಯೋಜನವಾಗುವಂತೆ ಆರೋಗ್ಯ ಸೇವೆಗಳ ವ್ಯಾಪ್ತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.
ಇದಲ್ಲದೆ, ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಯೋಜನೆಗಳನ್ನು ಒಗ್ಗೂಡಿಸುವ ಮೂಲಕ ಸೇವೆಗಳ ಪರಿಣಾಮಕಾರಿತ್ವ ಹೆಚ್ಚಿಸುವ ಸಾಧ್ಯತೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. ವಿವಿಧ ಯೋಜನೆಗಳ ಸಂಪತ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ರೋಗಿಗಳಿಗೆ ಸುಲಭವಾಗಿ ಮತ್ತು ವೇಗವಾಗಿ ಆರೋಗ್ಯ ಸೇವೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಯುಟಿ ಖಾದರ್ ತಿಳಿಸಿದ್ದಾರೆ.
ಸರ್ಕಾರದ ಈ ಕ್ರಮಗಳು ಆರೋಗ್ಯ ಸೇವೆಗಳನ್ನು ಮತ್ತಷ್ಟು ಸುಲಭ ಪಾರದರ್ಶಕ ಮತ್ತು ಜನಸ್ನೇಹಿಯಾಗಿ ರೂಪಿಸುವತ್ತ ಮಹತ್ವದ ಹೆಜ್ಜೆಯಾಗಿದ್ದು ವಿಶೇಷವಾಗಿ ಹೃದಯ ಸಂಬಂಧಿ ಚಿಕಿತ್ಸೆಗಳ ವೆಚ್ಚದ ಭಾರವನ್ನು ಕಡಿಮೆ ಮಾಡಲು ನೆರವಾಗುವ ನೀರಿಕ್ಷೆಯಿದೆ.
Also Read:
ಕರ್ನಾಟಕ ಬಸ್ ಟಿಕೆಟ್ ದರದಲ್ಲಿ ಭಾರಿ ಏರಿಕೆ ? 25% ಹೆಚ್ಚಳಕ್ಕೆ ಬೇಡಿಕೆ