Belagavi News:
ಬೆಂಗಳೂರು ನಗರದಲ್ಲಿ ಮತ್ತೆ ಭಾರಿ ಮಳೆಯಾಗುತ್ತಿದ್ದು, ಹಲವಡಿ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಧ್ಯಾನದಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇದೀಗ ನಗರದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದೆ.
ಹವಾಮಾನ ಇಲಾಖೆಯ ಪ್ರಕಾರ ಮೇ 8 ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ, ನೀಡಲಾಗಿದ್ದು, ಪ್ರಭು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ವಾಹನ ಸವಾರರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಕಳೆದ ವಾರ ನಡೆದ ಭಾರಿ ಮಳೆಯಿಂದ ನಗರದಲ್ಲಿ ಗಂಭೀರ ಅನಾಹುತಗಳು ಸಂಭವಿಸಿದ್ದವು, ಸುಮಾರು 10 ಜನರು ಸಾವನ್ನಪ್ಪಿದ ದುರ್ಘಟನೆ ಕೂಡ ವರದಿಯಾಗಿತ್ತು. ಆ ಹಿನ್ನಲೆಯಲ್ಲಿ ಈ ಬಾರಿ ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಲಾಗಿದೆ.
ಇದೀಗ ಮತ್ತೆ ಮಳೆ ಆರಂಭವಾಗಿರುವುದರಿಂದ ನಗರದಲ್ಲಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಅಧಿಕಾರಿಗಳು ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.
ಮಧ್ಯಾಹ್ನದಿಂದಲೇ ದಟ್ಟವಾದ ಮೋಡಗಳು ಆವರಿಸಿದ್ದು, ಇದೀಗ ಬೆಂಗಳೂರು ನಗರದ ಹಲವೆಡೆ ಮಳೆ ಆರಂಭವಾಗಿದೆ. ಮೆಜೆಸ್ಟಿಕ್, ಶಿವಾಜಿನಗರ, ಕೆಆರ್ ಮಾರ್ಕೆಟ್ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಲಘುನಿಂದ ಸಾಧಾರಣ ಮಳೆ ಆಗುತ್ತದೆ.
ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಕೆಲ ಗಂಟೆಗಳ ಕಾಲ ನಗರದ ಹಲವಡೆ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಪಂಜಿ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆ ಆಗುವ ನಿರೀಕ್ಷೆಯು ಇದೆ ಎಂದು ತಿಳಿಸಲಾಗಿದೆ.
ತಗ್ಗು ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಜಾಗರೂಕ ಆಗಿರಲು ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ವಾಹನ ಸಂಚಾರ ನಿಧಾನಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದುವರೆಯುವ ಮಳೆ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು ನಗರದಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡು ಬಂದಿದ್ದು, ಹಲೋ ಭಾಗಗಳಲ್ಲಿ ಲಘು ದಿಂದ ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ ಗರಿಷ್ಠ ತಾಪಮಾನವು ಸುಮಾರು 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಳಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣ ಬಳನಾಡಿನ ಭಾಗಗಳಲ್ಲಿ ಮೇ 8 ರವರೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಗುಡುಗು ಮಳೆ ಮುನ್ಸೂಚನೆ ನೀಡಲಾಗಿದೆ.
ಸದ್ಯಕ್ಕೆ ಮಳೆಯು ಚದುರಿದಂತೆ ಇರುವ ನಿರೀಕ್ಷೆ ಇದ್ದು, ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚಾರದ ದಟ್ಟನೆ ಹೆಚ್ಚಾಗುವ ಸಾಧ್ಯತೆ ಇದೆ.
ವಾಹನ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಗುಡುಗು ಸಹಿತ ಮಳೆಯ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಉಳಿಯುವಂತೆ ಹಾಗೂ ಅಗತ್ಯವಿಲ್ಲದ ಹೊರಹೋಗುವಿಕೆಯನ್ನು ತಪ್ಪಿಸುವಂತೆ ಮನವಿ ಮಾಡಲಾಗಿದೆ.
Also Read: