belagavi news :
ವಿಧಾನಪರಿಷ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ನಡೆಯದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಘಟನೆಯ ಸತ್ಯತೆ ಮತ್ತು ವಾಸ್ತವ ಅಂಶಗಳನ್ನು ಪರಿಶೀಲಿಸಲು ಮೂವರು ಸದಸ್ಯರ ಸತ್ಯ ಸಂಶೋಧನಾ ತಂಡವನ್ನು ರಚಿಸಿದ್ದಾರೆ.
ಸಿ.ಟಿ.ರವಿ, ಎನ್.ಮಹೇಶ್ ಹಾಗೂ ಮಹೇಶ್ ತೆಂಗಿನಕಾಯಿ ಅವರನ್ನು ಒಳಗೊಂಡಿರುವ ಈ ತಂಡಕ್ಕೆ ಜೂನ್ 25ರ ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಗುರುವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಂದ ಅಡ್ಡ ಮತದಾನ ನಡೆದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದು, ದೋಸ್ತಿ ಪಕ್ಷಗಳಿಗೆ ದೊಡ್ಡ ಆಘಾತ ತಂದಿದೆ.
ಮೂಲಗಳ ಪ್ರಕಾರ, ಬಿಜೆಪಿ ಹಾಗೂ ಜೆಡಿಎಸ್ ನ ಒಟ್ಟು 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದು, ಇದು ಪಕ್ಷದ ನಾಯಕತ್ವಕ್ಕೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ. ಅಡ್ಡ ಮತದಾನದ ಹಿಂದಿನ ಕಾರಣಗಳು ಮತ್ತು ಹೊಣೆಗಾರರನ್ನು ಪತ್ತೆ ಹಚ್ಚುವ ಉದ್ದೇಶದಿಂದ ಸತ್ಯ ಶೋಧನಾ ತಂಡ ಕಾರ್ಯ ಆರಂಭ ಮಾಡಿದ್ದು, ವರದಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಮೂವರು ಬಿಜೆಪಿ ಶಾಸಕರು ತಮ್ಮ ಪಕ್ಷದ ಅಭ್ಯರ್ಥಿ ಲಿಂಗರಾಜು ಪಾಟೀಲ್ ಗೆ ಮತ ಹಾಕದೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಡ್ಡ ಮತದಾನ ಹಾಕಿದ್ದರು. ಅದು ಬಿಟ್ಟು ಇಬ್ಬರೂ ಮೂವರು ಬಿಜೆಪಿ ಶಾಸಕರು, ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡ ಮತದಾನ ಹಾಕಿದ್ದರು. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಸತ್ಯ ಶೋಧನಾ ತಂಡವನ್ನು ರಚಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿದವರನ್ನು"ಮೀರ್ ಸಾದಿಕ್ ಗಳು" ಎಂದು ಕಿಡಿಕಾರಿರುವ ಅವರು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
"ನಮ್ಮ ಪಕ್ಷದಲ್ಲಿರುವ ಮೀರ್ ಸಾದಿಕ್ ಗಳ ಬಗ್ಗೆ ಹೈಕಮಾಂಡ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಅವರ ವಿರುದ್ಧ ಕ್ರಮ ನಿಶ್ಚಿತ" ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿಯ ಅಭ್ಯರ್ಥಿಯ ವಿರುದ್ಧ ಮತ ಹಾಕಿರುವುದು ತಾಯಿಗೆ ದ್ರೋಹ ಮಾಡಿದಂತೆಯೇ ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಪಕ್ಷದೊಳಗೆ ಕೆಲವು ಗೊಂದಲಗಳಿರುವುದು ಮತ್ತು ಅದರಿಂದ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿರುವುದು ನಿಜ. ಆದರೆ,ಬಿಜೆಪಿಯಿಂದ ಆಯ್ಕೆಯಾದ ಶಾಸಕರೇ ಅಡ್ಡ ಮತದಾನ ಮಾಡಿರುವುದನ್ನು ಪಕ್ಷ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಶಿಸ್ತು ಕಾಪಾಡಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಒಂದು ಸ್ಪಷ್ಟ ರೇಖೆ ಎಳೆಯುವ ಸಮಯ ಬಂದಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ನಾನು ರಾಷ್ಟ್ರೀಯ ನಾಯಕರ ಬೇಟಿಗೆ ಸಮಯ ಕೇಳಿದ್ದೇನೆ.ಇವತ್ತು ಅಥವಾ ಸೋಮವಾರ ಯಾವತ್ತೂ ಸಮಯ ನೀಡುತ್ತಾರೋ ಅಂದು ಹೋಗಿ ಭೇಟಿ ಮಾಡುತ್ತೇನೆ.ಅಡ್ಡ ಮತದಾನ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ವಿಜಯೇಂದ್ರ ತಿಳಿಸಿದರು.
Also Read: