ಪಿಎಂ ಕಿಸಾನ್ ಯೋಜನೆ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ನ. 19, ಬುಧವಾರ ಬಿಡುಗಡೆ ಮಾಡುತ್ತಿದ್ದಾರೆ. ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಭೇಟಿ ನೀಡುತ್ತಿರುವ ನರೇಂದ್ರ ಮೋದಿ ಮಧ್ಯಾಹ್ನ ಕೊಯಮತ್ತೂರಿಗೆ ತೆರಳುತ್ತಿದ್ದಾರೆ. ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗಸಭೆಗೆ ಚಾಲನೆ ನೀಡಿದ ಬಳಿಕ ಪಿಎಂ ಕಿಸಾನ್ನ ಹೊಸ ಕಂತಿನ ಹಣದ ಬಿಡುಗಡೆ ಮಾಡುತ್ತಾರೆ.
2025-11-19
ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದ್ದು, ಈ ವೈರಸ್ ಬಗ್ಗೆ ಎಚ್ಚರಿಕೆ ಎಚ್ಚರಿಕೆ ವಹಿಸುವಂತೆ ಸಲಹೆಗಳನ್ನು ನೀಡಿದೆ.
2025-11-19
New Aadhaar card will have display of only person's photo and QR code: ಆಧಾರ್ ಕಾರ್ಡ್ ಹಾಗೂ ಅದರಲ್ಲಿರುವ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಪ್ಪಿಸಲು ಯುಐಡಿಎಐ ಹೊಸ ಯೋಜನೆ ಹಾಕಿದೆ. ವ್ಯಕ್ತಿಯ ಆಧಾರ್ ನಂಬರ್, ಹೆಸರು, ವಿಳಾಸ ಮಾಹಿತಿ ಕಾಣದ, ಹಾಗೂ ಫೋಟೋ ಹಾಗೂ ಕ್ಯುಆರ್ ಕೋಡ್ ಮಾತ್ರ ಕಾಣುವ ಕಾರ್ಡ್ ತರಲಿದೆ. ಡಿಸೆಂಬರ್ ತಿಂಗಳಲ್ಲೇ ಯುಐಡಿಎಐ ಹೊಸ ಆಧಾರ್ ಕಾರ್ಡ್ಗಳ ವಿತರಣೆ ಆರಂಭಿಸಬಹುದು.
2025-11-19
ಯಕ್ಷಗಾನದ ಒಳಗಡೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತದೆ ಎಂಬ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು ಮಾತನಾಡಿದ್ದಾರೆ.
2025-11-19
ದೇವಸ್ಥಾನಕ್ಕೆ ಕರೆದೊಯ್ದು ಮಗಳ ಮೇಲೆ ಮಚ್ಚು ಬೀಸಿದ ಆರೋಪದಡಿ ತಾಯಿಯನ್ನು ಬಂಧಿಸಲಾಗಿದ್ದು, ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
2025-11-19
Andhra CM Chandrababu Naidu announces escrow system for investors: ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಉದ್ಯಮ ಸಂಸ್ಥೆಯ ಹೆಸರಿನಲ್ಲಿ ಎಸ್ಕ್ರೋ ಅಕೌಂಟ್ ತೆರೆಯಲಾಗುತ್ತದೆ. ಸರ್ಕಾರದಿಂದ ಆ ಸಂಸ್ಥೆಗೆ ಬರಬೇಕಾದ ಯಾವುದೇ ಹಣವು ನೇರವಾಗಿ ಆ ಅಕೌಂಟ್ಗೆ ಹೋಗುತ್ತದೆ. ಈ ಇನ್ಸೆಂಟಿವ್ ಹಣಕ್ಕಾಗಿ ಉದ್ಯಮಿಗಳು ಸರ್ಕಾರಿ ಕಚೇರಿಗಳನ್ನು ಸುತ್ತುವ ಅವಶ್ಯಕತೆಯೇ ಇರುವುದಿಲ್ಲ. ಭಾರತದಲ್ಲಿ ಇಂಥದ್ದೊಂದು ನೀತಿ ಪ್ರಪ್ರಥಮ ಬಾರಿಗೆ ಜಾರಿಯಾಗುತ್ತಿದೆ.
2025-11-19
ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ, ಸಲ್ಮಾನ್ ಖಾನ್ ಮುಂಬೈ ಮನೆ ಮೇಲಿನ ದಾಳಿ ಪ್ರಕರಣದ ಪ್ರಮುಖ ಆರೋಪಿ ಅನ್ಮೋಲ್ ಬಿಷ್ಣೋಯಿ.
2025-11-19
ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ತಾಯಿ ಮೃತಪಟ್ಟಿದ್ದರೆ, ತಂದೆ ಜೈಲು ಸೇರಿರುವ ಕಾರಣ 4 ವರ್ಷದ ಗಂಡು ಮಗು ಅನಾಥವಾಗಿದೆ. ಇತ್ತ ಬೆಂಗಳೂರಲ್ಲೂ ನೇಣು ಬಿಗಿದ ಸ್ಥಿತಿಯಲ್ಲಿ 28 ವರ್ಷದ ಗೃಹಿಣಿಯ ಮೃತದೇಹ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
2025-11-18
ಬೆಳಗಾವಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಮೃತಪಟ್ಟಿದ್ದು, ಗಳಲೆ ರೋಗದ ಶಂಕೆ ವ್ಯಕ್ತವಾಗಿದೆ. ಈ ಸಾಮೂಹಿಕ ಸಾವು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಸಿದೆ. ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಯನ್ನು ಎಚ್ಚರಿಸಿದ್ದು, ಜಾನುವಾರು ಮಾಲೀಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
2025-11-18
Karnataka Weather: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಮತ್ತುಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದ್ದರೆ, ಕಲ್ಯಾಣ ಕರ್ನಾಟಕದ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯೆತೆ ಇದೆ ಎಂದು ಇಲಾಖೆ ತಿಳಿಸಿದೆ.
2025-11-18
ನಿರಂತರ ಮಳೆ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಕರ್ನಾಟಕದಲ್ಲಿ ಕಾಫಿ ಉತ್ಪಾದನೆ ಭಾರಿ ಕುಸಿತ ಕಂಡಿದೆ. ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ (KPA) ಪ್ರಕಾರ, ಭಾರತದ ಕಾಫಿ ಉತ್ಪಾದನೆಯಲ್ಲಿ 30,000 ಟನ್ ಇಳಿಕೆಯಾಗುವ ನಿರೀಕ್ಷೆಯಿದೆ. ಅರಬಿಕಾ ಮತ್ತು ರೋಬಸ್ಟಾ ಬೆಳೆಗಳ ಇಳುವರಿ ಕಡಿಮೆಯಾಗಿದ್ದು, ಮಳೆಯಿಂದ ಎಲೆ ಕೊಳೆ ರೋಗವೂ ಹೆಚ್ಚಿದೆ. ಇದು ಕಾಫಿ ಬೆಳೆಗಾರರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.
2025-11-18
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ' ಕುರಿತು ನಡೆಯಲಿರುವ ವಿಚಾರಗೋಷ್ಠಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಈ ಕಾರ್ಯಕ್ರಮವು ಬಲಪಂಥೀಯ ಅಜೆಂಡಾ ಮತ್ತು ಕುವೆಂಪು, ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿದೆ ಎಂದು KDSS ಆರೋಪಿಸಿದೆ. ಜಾತಿಪದ್ಧತಿ ಸಮರ್ಥನೆಗೆ ಭಗವದ್ಗೀತೆ ಬಳಸಲಾಗಿದೆ ಎಂದಿರುವ KDSS, ಕಾರ್ಯಕ್ರಮ ನಡೆಸಿದರೆ ತಮಟೆ ಚಳವಳಿ ನಡೆಸುವುದಾಗಿ ಎಚ್ಚರಿಸಿದೆ.
2025-11-18
ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕೌಟುಂಬಿಕ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮತ್ತು ಅತ್ತೆ ಕಿರುಕುಳ ನೀಡಿರುವುದಾಗಿ ಡೆತ್ ನೋಟ್ ಬರೆದಿದ್ದರ ಜೊತೆಗೆ ಮಗುವಿನೊಂದಿಗೆ ವೀಡಿಯೋವನ್ನೂ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
2025-11-18
Australia vs England: ಟೆಸ್ಟ್ ಕ್ರಿಕೆಟ್ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಪರ್ತ್ನ ಆಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿ.
2025-11-18
Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇನ್ನು ಕಳೆದ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದರು.
2025-11-18
Temba Bavuma World Records: ಸೌತ್ ಆಫ್ರಿಕಾ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದು ಕೊಟ್ಟ ನಾಯಕ ಟೆಂಬಾ ಬವುಮಾ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 148 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾರೂ ಸಹ ನಿರ್ಮಿಸದ ವಿಶ್ವ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.
2025-11-18
ದೆಹಲಿಯ ಹಲವು ನ್ಯಾಯಾಲಯಗಳು ಹಾಗೂ ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವಕೀಲರು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸಿ ಪೊಲೀಸರು ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿದರು. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ.
2025-11-18
ಬೆಂಗಳೂರಿನ ದೇವನಹಳ್ಳಿ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಕಳೆದ 18 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
2025-11-18
ದೆಹಲಿಯ ಹಲವು ನ್ಯಾಯಾಲಯಗಳು ಹಾಗೂ ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವಕೀಲರು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸಿ ಪೊಲೀಸರು ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿದರು. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ.
2025-11-18
ಇಂದು ಬೆಳಗಿನ ಜಾವ ಆಂಧ್ರಪ್ರದೇಶದಲ್ಲಿ ನಡೆದ ಎನ್ಕೌಂಟರ್(Encounter)ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ.ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ. ಹಲವಾರು ಮಾವೋವಾದಿ ಅಡಗುತಾಣಗಳನ್ನು ಹೊಂದಿರುವ ಆಂಧ್ರಪ್ರದೇಶ, ಛತ್ತೀಸ್ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ ಈ ಎನ್ಕೌಂಟರ್ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
2025-11-18
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್ಪ್ರೆಸ್ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂಭಿಕ ವರದಿಗಳ ಪ್ರಕಾರ, ಅರೌಲಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ಇದ್ದಕ್ಕಿದ್ದಂತೆ ಸಮತೋಲನ ಕಳೆದುಕೊಂಡು ಪಲ್ಟಿಯಾಗಿದ್ದು, ಹಲವಾರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ.
2025-11-18
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬ ಕಲಹ ಮುನ್ನೆಲೆಗೆ ಬಂದಿದೆ. ತೇಜಸ್ವಿ ಯಾದವ್ ಸಹೋದರಿ ರೋಹಿಣಿ ಆಚಾರ್ಯ ತಮ್ಮನ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು. ನನ್ನನ್ನು ತೇಜಸ್ವಿ ಕುಟುಂಬದಿಂದ ಹಾಗೂ ಪಕ್ಷದಿಂದ ಹೊರಹಾಕಿದ್ದಾನೆ, ನನ್ನ ಮೇಲೆ ಚಪ್ಪಲಿ ಎತ್ತಿದ್ದಾನೆ. ಕುಟುಂಬದವರು ಕೊಳಕು ಕಿಡ್ನಿ ಬದಲಾಗಿ ಚುನಾವಣಾ ಟಿಕೆಟ್ ಪಡೆದಿದ್ದಾಳೆ ಎಂದು ಹೀಯಾಳಿಸಿದ್ದಾಗಿ ರೋಹಿಣಿ ಮಾಧ್ಯಮದ ಬಳಿ ಹೇಳಿಕೊಂಡಿದ್ದರು.
2025-11-18
ಕೇಂದ್ರ ಚುನಾವಣಾ ಆಯೋಗ ಕೇರಳದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ವಿಶೇಷ ಪರಿಷ್ಕರಣೆ(SIR)ಮುಂದೂಡುವಂತೆ ಒತ್ತಾಯಿಸಿ, ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಕೇರಳದಲ್ಲಿ ಸ್ಥಳೀಯ ಸಂಸ್ಥೆಚುನಾವಣೆಗಳು ಸನ್ನಿಹಿತವಿದ್ದು, ಈ ಸಂದರ್ಭದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದು ಸೂಕ್ತವಲ್ಲ ಎಂದು ಸರ್ಕಾರ ಹೇಳಿದೆ.
2025-11-18
ಬಾಂಗ್ಲಾದೇಶವು ಹಸೀನಾ ವಿರುದ್ಧ ಮರಣದಂಡನೆ ವಿಧಿಸಿದ ನಂತರ ಅವರನ್ನು ಹಸ್ತಾಂತರಿಸುವಂತೆ ಭಾರತವನ್ನು ಔಪಚಾರಿಕವಾಗಿ ಸಂಪರ್ಕಿಸಿದೆ.ಇಬ್ಬರು ಅಪರಾಧಿಗಳನ್ನು ತಕ್ಷಣ ಬಾಂಗ್ಲಾದೇಶ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ನಾವು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಢಾಕಾದ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಬಾಂಗ್ಲಾದೇಶದಲ್ಲಿ ಶಾಂತಿ, ಪ್ರಜಾಪ್ರಭುತ್ವ, ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳುವುದು ತನ್ನ ಆದ್ಯತೆಯಾಗಿದೆ ಎಂದು ಭಾರತ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. ನಾವು ಯಾವಾಗಲೂ ಬಾಂಗ್ಲಾದೇಶದ ಜನರು ಮತ್ತು ಅವರ ಹಿತಾಸಕ್ತಿಗಳೊಂದಿಗೆ ನಿಂತಿದ್ದೇವೆ ಎಂದು ಭಾರತ ಹೇಳಿದೆ.
2025-11-18
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ.
2025-11-18
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy