ಈ ತಿಂಗಳು ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೆ ಕ್ರಿಕೆಟ್ನಲ್ಲಿ ಮುಖಾಮುಖಿ ಆಗಲಿವೆ. ಇದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಈ ಕೆಳಗಿದೆ.
2025-11-01
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಅವರು ಗಾಯದಿಂದಚೇತರಿಸಿಕೊಂಡಿದ್ದು ಇಂದು ಆಸ್ಟ್ರೇತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.
2025-11-01
ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವಲ್ಲಿಸಸ್ಯಾಧಾರಿತ ಆಹಾರ ಕ್ರಮದ ಪಾತ್ರ ಅಪಾರ. ಈ ನಿಟ್ಟಿನಲ್ಲಿ ಶುದ್ಧ ಸಸ್ಯಾಹಾರಿ ಆಹಾರ ಪದ್ಧತಿಯ ಮಹತ್ವನ್ನು ಗಮನದಲ್ಲಿಟ್ಟುಕೊಂಡು ಸಸ್ಯ ಆಧಾರಿತ ಆಹಾರ ಆಹಾರ ಕ್ರಮವನ್ನು ಅಳವಡಿಸಿಕೊಳ್ಳಲು ಜನರನ್ನು ಪ್ರೇರೇಪಿಸಲು ಮತ್ತು ಪರಿಸರವನ್ನು ರಕ್ಷಿಸುವ ಜೊತೆಗೆ ಶುದ್ಧ ಸಸ್ಯಾಹಾರಿ ಆಹಾರಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ನವೆಂಬರ್ 1 ರಂದು ವಿಶ್ವ ಸಸ್ಯಾಹಾರಿ ದಿನವನ್ನು ಆಚರಿಸಲಾಗುತ್ತದೆ.
2025-11-01
ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
2025-11-01
ನವೆಂಬರ್ನಲ್ಲಿ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಯಾವಾಗ ಏನಾಗಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಚಿವ ಹೆಚ್. ಸಿ. ಮಹದೇವಪ್ಪ ಹೇಳಿದರು.
2025-11-01
ಕರುಳು ಮತ್ತು ಮೆದುಳಿನ ಕಾರ್ಯಗಳಿಗೆ ಒಂದಕ್ಕೊಂದು ಪರಸ್ಪರ ಸಂಬಂಧವಿದೆ. ಮುಖ್ಯವಾಗಿ ಕರುಳಿನಲ್ಲಿ ಉತ್ಪತ್ತಿಯಾಗುವ ಸಿರೊಟೋನಿನ್, ಮೆದುಳು ಮತ್ತು ಕರುಳಿನ ಕಾರ್ಯವನ್ನು ನಿಯಂತ್ರಿಸುತ್ತದೆ. ಮಾತ್ರವಲ್ಲ ಈ ಹಾರ್ಮೋನ್ ಮಟ್ಟವನ್ನು ಭಾಗಶಃ ನಾವು ಸೇವನೆ ಮಾಡುವ ಆಹಾರಗಳಿಂದ ಅಳೆಯಲಾಗುತ್ತದೆ. ಜೊತೆಗೆ ಅಮೈನೋ ಆಮ್ಲಗಳು, ಟ್ರಿಪ್ಟೊಫಾನ್ ಮತ್ತು ಸಿರೊಟೋನಿನ್ ಸಮೃದ್ಧವಾಗಿರುವ ಆಹಾರಗಳು ಕೂಡ ಮನಸ್ಥಿತಿ ಸುಧಾರಿಸಲು ಸಹಾಯ ಮಾಡುತ್ತದೆ. ಹೀಗೆ ಕರುಳು ಮತ್ತು ಮೆದುಳಿನ ಕಾರ್ಯಗಳು ಒಂದಕ್ಕೊಂದು ಬೆಸೆದಿರುತ್ತದೆ. ಹಾಗಾಗಿ ಮೆದುಳು ಮತ್ತು ಕರುಳು ಆರೋಗ್ಯವಾಗಿರಲು ನಾವು ಸರಿಯಾದ ಆಹಾರಗಳ ಸೇವನೆ ಮಾಡಬೇಕು. ಹಾಗಾದರೆ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
2025-11-01
ಎಂಇಎಸ್ ಸಂಘಟನೆ ನಿಷೇಧಿಸಲು ಗಂಭೀರ ಚರ್ಚೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
2025-11-01
ಎರಡು ದಿನಗಳ ರಾಷ್ಟ್ರೀಯ ಮಹಿಳಾ ಉಡಾನ್ 2.0 ಸಮಾವೇಶಕ್ಕೆ ಬಾಲಿವುಡ್ ನಟ ಸೋನು ಸೂದ್, ಕನ್ನಡದ ನಟ ಡಾಲಿ ಧನಂಜಯ್, ನಟಿ ಸಪ್ತಮಿ ಗೌಡ ಚಾಲನೆ ನೀಡಿದರು.
2025-11-01
ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ತಿಳಿದ ವಿಚಾರ. ಇವುಗಳಲ್ಲಿ ಹಲವು ರೀತಿಯ ಪೋಷಕಾಂಶಗಳಿರುವುದರಿಂದ ನಿಯಮಿತವಾಗಿ ಸೇವಿಸಬಹುದು. ಅದರಲ್ಲಿಯೂ ಚಳಿಗಾಲದಲ್ಲಿ ಖರ್ಜೂರ ಸೇವನೆ ಮಾಡುವುದು ದೇಹಕ್ಕೆ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬೇರೆ ಸಮಯದಲ್ಲಿ ವಾರಕ್ಕೆ ಒಂದು, ಎರಡು ಖರ್ಜೂರ ಸೇವನೆ ಮಾಡುತ್ತಿದ್ದರೆ ಚಳಿಗಾಲದಲ್ಲಿ ದಿನಕ್ಕೆ ಒಂದಾದರೂ ತಿನ್ನಬೇಕು ಇದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಹಾಗಾದರೆ ಖರ್ಜೂರಕ್ಕೂ, ಚಳಿಗಾಲಕ್ಕೂ ಇರುವ ಸಂಬಂಧವೇನು, ಯಾಕೆ ಈ ಸಮಯದಲ್ಲಿ ಹೆಚ್ಚಾಗಿ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
2025-11-01
ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರದ ಟೀಸರ್ ಅನಾವರಣಗೊಂಡಿದೆ.
2025-11-01
ಹಬ್ಬಗಳಲ್ಲಿ ಖರೀದಿ ಭರಾಟೆ ಜೋರಾಗಿದ್ದರಿಂದ ಸರ್ಕಾರದ ಖಜಾನೆಗೆ ಒಟ್ಟು 1.96 ಲಕ್ಷ ಕೋಟಿ ರೂಪಾಯಿ ಜಿಎಸ್ಟಿ ಹರಿದುಬಂದಿದೆ.
2025-11-01
ದೇಹದಲ್ಲಿ ಹೆಚ್ಚಿನ ಸಕ್ಕರೆ ಮಟ್ಟದಿಂದ ಉಂಟಾಗುವ ಅಪಾಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ದೇಹದಲ್ಲಿನ ಹೆಚ್ಚುವರಿ ಸಕ್ಕರೆ ಅಥವಾ ಸಿಹಿ ಅಂಶ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಗ್ಲೂಕೋಸ್ ಸಂಗ್ರಹವಾದಾಗ, ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ. ಹೆಚ್ಚಿನ ಸಕ್ಕರೆ ಬೊಜ್ಜು, ಮೂತ್ರಪಿಂಡದ ಸಮಸ್ಯೆಗಳು ಮತ್ತು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇವೆಲ್ಲವೂ ಒಂದಕ್ಕೊಂದು ಕೊಂಡಿ ಇದ್ದಂತೆ ಹಾಗಾಗಿ, ನಾವು ಸೇವನೆ ಮಾಡುವ ಸಿಹಿ ಅಂಶದ ಮೇಲೆ ನಿಗಾ ವಹಿಸುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಈ ಬಗ್ಗೆ ಯಾವ ರೀತಿಯಲ್ಲಿ ಗಮನಹರಿಸಬೇಕು, ನಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿರುವುದನ್ನು ಹೇಗೆ ತಿಳಿಯಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
2025-11-01
ಅನುಮಾನದ ಹಿನ್ನೆಲೆಯಲ್ಲಿ ಕೊಠಡಿಯ ಬಾಗಿಲನ್ನು ಒಡೆದು ನೋಡಿದಾಗ ಈ ಘಟನೆ ಬಗ್ಗೆ ಗೊತ್ತಾಗಿದೆ.
2025-11-01
ತುಮಕೂರಿನ ಅಶೋಕ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಹಸುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಹಸುವಿನ ಸ್ಥಿತಿ ಕಂಡು ಸಾರ್ವಜನಿಕರಿಂದ ಕಿಡಿಗೇಡಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಕಿರಾತಕರನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಒತ್ತಾಯ ಕೇಳಿಬಂದಿದ್ದು, ತುಮಕೂರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
2025-11-01
ರೈಲ್ವೆ ಹಳಿಯನ್ನು ಸುರಕ್ಷಿತವಾಗಿ ಕಾಡಾನೆಗಳ ಹಿಂಡು ದಾಟುವವರೆಗೆ 12ಕ್ಕೂ ಹೆಚ್ಚು ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಿ ರೈಲ್ವೆ ಇಲಾಖೆ ಬದ್ಧತೆ ಮೆರೆದಿದೆ.
2025-11-01
Rohan Bopanna Retirement: ಭಾರತದ ಟೆನಿಸ್ ತಾರೆ, ಕನ್ನಡಿಗ ರೋಹನ್ ಬೋಪಣ್ಣ ತಮ್ಮ 22 ವರ್ಷಗಳ ಅದ್ಭುತ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಪ್ಯಾರಿಸ್ ಮಾಸ್ಟರ್ಸ್ನಲ್ಲಿ ಅಂತಿಮ ಪಂದ್ಯವನ್ನಾಡಿದ ಬೋಪಣ್ಣ, ಭಾವನಾತ್ಮಕ ಪೋಸ್ಟ್ ಮೂಲಕ ನಿವೃತ್ತಿ ಘೋಷಿಸಿದರು. ಅತ್ಯಂತ ಹಿರಿಯ ವಿಶ್ವ ನಂ. 1 ಆಟಗಾರ ಹಾಗೂ ಗ್ರ್ಯಾಂಡ್ ಸ್ಲ್ಯಾಮ್ ಡಬಲ್ಸ್ ವಿಜೇತ ಎಂಬ ಇತಿಹಾಸ ನಿರ್ಮಿಸಿದ್ದ ಬೋಪಣ್ಣ, ಎರಡು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳೊಂದಿಗೆ ತಮ್ಮ ಟೆನಿಸ್ ಪಯಣಕ್ಕೆ ತೆರೆ ಎಳೆದರು.
2025-11-01
ಪಂಜಾಬ್ನ ವೈದ್ಯ ಗಗನ್ದೀಪ್ ಗೋಯಲ್ ಅವರು 2015 ರಲ್ಲಿ ಮಾಡಿದ ಮಹೋನ್ನತ ಸಾಧನೆಯು ಇದೀಗ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ.
2025-11-01
‘ಮಾರಿಗಲ್ಲು’ ಏಳು ಎಪಿಸೋಡ್ಗಳನ್ನು ಹೊಂದಿದೆ. ಇದರಲ್ಲಿ ಕೆಲವು 30 ನಿಮಿಷಗಳ ಎಪಿಸೋಡ್ ಇದ್ದರೆ ಇನ್ನೂ ಕೆಲವು 15 ನಿಮಿಷಿದ ಎಪಿಸೋಡ್ ಇದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸುತ್ತಮುತ್ತೆ ವೆಬ್ ಸರಣಿಯ ಕಥೆ ಸಾಗುತ್ತದೆ. ಎರಡು ಎಪಿಸೋಡ್ ಬಳಿಕ ಸರಣಿ ಮತ್ತಷ್ಟು ರೋಚಕ ಎನಿಸುತ್ತದೆ.
2025-11-01
ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸಹೋದ್ಯೋಗಿಯನ್ನು ಕೊಲೆಗೈದ ಆರೋಪಿಯು ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
2025-11-01
ಬಿಗ್ ಬಾಸ್ 19 ಸ್ಪರ್ಧಿ ಪ್ರಣೀತ್ ಮೋರ್ ಡೆಂಗ್ಯೂ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಅವರು ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ. ಪ್ರಣೀತ್ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ. ಚಿಕಿತ್ಸೆ ಪಡೆಯುತ್ತಿರುವ ಪ್ರಣೀತ್, ಗುಣಮುಖರಾದ ನಂತರ ಮತ್ತೆ ಕಾರ್ಯಕ್ರಮಕ್ಕೆ ಮರಳುವ ಬಗ್ಗೆ ಕುತೂಹಲ ಮೂಡಿದೆ.
2025-11-01
ವಿಜಯಪುರದಲ್ಲಿ ಕೆಲವು ತಿಂಗಳುಗಳ ಹಿಂದೆ ಬಂಧಿತನಾದ 1998ರ ಕೊಯಮತ್ತೂರು ಸ್ಫೋಟದ ಆರೋಪಿ ಉಗ್ರ ಟೈಲರ್ ರಾಜಾ ಮನೆಯಲ್ಲಿ ನಕಲಿ ಆಧಾರ್, ಬ್ಯಾಂಕ್ ಪಾಸ್ಬುಕ್ ಸೇರಿ ಹಲವು ದಾಖಲೆಗಳು ಪತ್ತೆಯಾಗಿವೆ. ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ನಡೆಸಿದ ಶೋಧದಲ್ಲಿ ಈ ಸಂಗತಿ ಬಹಿರಂಗವಾಗಿದೆ. ಇದು ನಕಲಿ ಆಧಾರ್ ಮಾಫಿಯಾ ಕುರಿತು ಅನುಮಾನಗಳನ್ನು ಹುಟ್ಟುಹಾಕಿದೆ.
2025-11-01
Karnataka Kannada Rajyotsava: ಕರ್ನಾಟಕದಾದ್ಯಂತ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ.
2025-11-01
India A vs South Africa A: ಭಾರತ ಎ ಮತ್ತು ಸೌತ್ ಆಫ್ರಿಕಾ ಎ ತಂಡಗಳ ನಡುವೆ 4 ದಿನಗಳ 2 ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ. ಈ ಸರಣಿಯ ಮೊದಲ ಪಂದ್ಯ ಮ್ಯಾಚ್ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಎರಡನೇ ಪಂದ್ಯವು ನವೆಂಬರ್ 6 ರಂದು ಆರಂಭವಾಗಲಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಏಕದಿನ ಸರಣಿ ಕೂಡ ನಡೆಯಲಿದೆ.
2025-11-01
ಪತಿಯ ತಲೆಗೆ ಹೊಡೆದು ಶೌಚಾಲಯದ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
2025-11-01
India vs Pakistan: ಏಷ್ಯಾಕಪ್ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್ಗಳಲ್ಲಿ 146 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್ಗಳಲ್ಲಿ 150 ರನ್ಗಳಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ 9ನೇ ಬಾರಿ ಏಷ್ಯಾಕಪ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತು.
2025-11-01
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy